Featured

ಉಡುಪಿ : ಕೇವಲ ಅಮಾನತು ಅಥವಾ ವರ್ಗಾವಣೆ ಮಾಡಿದರೆ ಸಾಲದು ಬದಲಾಗಿ ಅವರನ್ನು ಸೇವೆಯಿಂದಲೇ ವಜಾ ಮಾಡಬೇಕು ಮತ್ತು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು : ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ – Vishwanews24

ನಮ್ಮವರು ಮಾಡಿದ ತಪ್ಪಾದರೂ ಏನು ? ನಮ್ಮ ಸಮುದಾಯದವರೆಂದರೆ ಪ್ರಾಣಿಗಳಿಗಿಂತಲೂ ಹೀನವೇ?..

ಕೇವಲ ಅಮಾನತು ಅಥವಾ ವರ್ಗಾವಣೆ ಮಾಡಿದರೆ ಸಾಲದು ಬದಲಾಗಿ ಅವರನ್ನು ಸೇವೆಯಿಂದಲೇ ವಜಾ ಮಾಡಬೇಕು ಮತ್ತು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು..

ಕರ್ನಾಟಕ ಕೇರಳ ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ ಆಗ್ರಹ ..

ಉಡುಪಿ: ಮೆಹಂದಿ ಕಾರ್ಯಕ್ರಮಕ್ಕೆ ಡಿಜೆ ಬಳಸಿದ್ದಾರೆ ಎಂದು ಕೊರಗ ಸಮುದಾಯದವರ ಮೇಲೆ ದೌರ್ಜನ್ಯ ಮಾಡಿದ ಪೊಲೀಸರನ್ನು ಕೇವಲ ಅಮಾನತು ಅಥವಾ ವರ್ಗಾವಣೆ ಮಾಡಿದರೆ ಸಾಲದು ಬದಲಾಗಿ ಅವರನ್ನು ಸೇವೆಯಿಂದಲೇ ವಜಾ ಮಾಡಬೇಕು ಮತ್ತು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಕರ್ನಾಟಕ ಕೇರಳ ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ ಸರಕಾರವನ್ನು ಆಗ್ರಹಿಸಿದೆ.

ಈ ಕುರಿತು ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷೆ ಅಮ್ಮಣ್ಣಿ ಬೆಳ್ವೆ ನಮ್ಮ ಸಮುದಾಯದವರು ಪುರಾತನ ಕಾಲದಿಂದಲೂ ಅಜಲು, ಅಸ್ಪಶ್ಯತೆಯಿಂದ ಬಹಳ ಹಿಂದುಳಿದವರಾಗಿದ್ದು ಈ ಕಾಲಘಟ್ಟದಲ್ಲಿಯೂ ಸಾಮಾಜಿಕವಾಗಿ ಅಂಚಿಗೆ ತಳ್ಳಲ್ಪಟ್ಟಿದೆ. ಅಲ್ಲದೇ ಸರ್ಕಾರವೂ ನಮ್ಮ ಸಮುದಾಯವನ್ನು ಪಿ.ವಿ.ಟಿ.ಜಿ ಎಂದು ಗುರುತಿಸಿದೆ. ಈ ಹಿಂದಿನಿಂದಲೂ ಶೋಷಣೆಗೆ ಒಳಗಾಗುತ್ತಾ ಬಂದಿದ್ದೇವೆ.

ಒಂದು ಕಡೆ ಆರೋಗ್ಯದ ಸಮಸ್ಯೆಯಿಂದಲೂ ಕೂಡಾ ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಿರುವಾಗ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದಲ್ಲಿ ನಮ್ಮ ಕೊರಗ ಸಮುದಾಯದವರು ಮದುವೆ ಮೆಹೆಂದಿ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಹಾಕಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ಕೋಟ ಪೋಲಿಸ್ ಠಾಣೆಯ ಸಬ್ ಇನ್ಸಪೆಕ್ಟರ್ ಹಾಗೂ ಒಂಭತ್ತು ಜನ ಸಿಬ್ಬಂದಿಗಳು ಮಹಂದಿ ಮನೆಗೆ ನುಗ್ಗಿ ನಮ್ಮ ಸಮುದಾಯದವರನ್ನು ಮನುಷ್ಯರು ಅಂತ ನೋಡದೆ ಮಹಿಳೆಯರು, ಮಕ್ಕಳು, ಹಿರಿಯರು ಅಂತ ನೋಡದೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ನೆಲಕ್ಕೆ ಉರುಳಿಸಿ ಬೂಟು ಕಾಲಿನಿಂದ ಒದ್ದು ಲಾಟಿಯಿಂದ ಹಿಗ್ಗಾಮುಗ್ಗ ಥಳಿಸಿದ್ದಾರೆ. ಕೈ, ಕಾಲು ಬೆನ್ನಿನಲ್ಲಿ ತಲೆಯಲ್ಲಿ ಬಾಸುಂಡೆ ಬರುವಂತೆ ಭಾರಿಸಿದ್ದಾರೆ. ನಂತರ 4 ಮಂದಿ ನಮ್ಮವರನ್ನು ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗಿ ಹಾಕಿದವರ ಬಟ್ಟೆಯನ್ನು ಬಿಚ್ಚಲು ಹೇಳಿ ಲಾಟಿಯಿಂದ ಹಿಗ್ಗ ಮುಗ್ಗ ಥಳಿಸಿದ್ದಾರೆ.

ಹಾಗಾದರೆ ನಮ್ಮವರು ಮಾಡಿದ ತಪ್ಪಾದರೂ ಏನು ? ನಮ್ಮ ಸಮುದಾಯದವರೆಂದರೆ ಅಷ್ಟೊಂದು ತಾತ್ಸಾರವೇ ನಮ್ಮ ಸಮುದಾಯದವರೆಂದರೆ ಪ್ರಾಣಿಗಳಿಗಿಂತಲೂ ಹೀನವೇ? ಆದುದರಿಂದ ನಮ್ಮ ಸಮುದಾಯದವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಕೋಟ ಪೋಲಿಸ್ ಠಾಣೆಯ ಸಿಬ್ಬಂದಿಗಳನ್ನು ಈ ಕೂಡಲೇ ಕೆಲಸದಿಂದ ಖಾಯಂ ವಜಾ ಮಾಡಬೇಕು ಹಾಗೂ ಹಲ್ಲೆ ನಡೆಸಿದ ಸಬ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಗಳನ್ನು ಬಂಧಿಸಿ, ತನಿಖೆಗೆ ಒಳಪಡಿಸಬೇಕಾಗಿ ವಿನಂತಿ, ಹಲ್ಲೆಗೊಳಗಾದ ಕುಟುಂಬಕ್ಕೆ ಪರಿಹಾರ ಒದಗಿಸಿಕೊಡಬೇಕು ಇಲ್ಲದಿದ್ದಲ್ಲಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ಮುಂದಿನ 7 ದಿನಗಳ ಒಳಗೆ ಧರಣಿ ಸತ್ಯಾಗ್ರಹ ಮಾಡಲಿದ್ದೇವೆ ಎಂದರು.

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

13 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

14 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

16 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

16 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

17 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

17 hours ago