Featured

ಉಡುಪಿ : ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಬಾವುಟ ಪ್ರದರ್ಶನ ಮಾಡಬೇಕಿತ್ತೇ ? :ಸುನೀಲ್ ಕುಮಾರ್ – vishwanews24

ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಬಾವುಟ ಪ್ರದರ್ಶನ ಮಾಡಬೇಕಿತ್ತೇ ?

ಹಿಂದು ಆಚರಣೆಗಳಲ್ಲಿ ತಪ್ಪು ಹುಡುಕುವುದೇ ಕಾಂಗ್ರೆಸ್‌ಗೆ ಚಟವಾಗಿದೆ : ಸುನೀಲ್ ಕುಮಾರ್ ಆಕ್ರೋಶ

ಕಾರ್ಕಳ : ಉಡುಪಿ ಪರ್ಯಾಯದ ಮೆರವಣಿಗೆಯಲ್ಲಿ ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಬಾವುಟ ಪ್ರದರ್ಶನ ಮಾಡಬೇಕಿತ್ತೇ ? ಎಂದು ಮಾಜಿ ಸಚಿವ ವಿ ಸುನೀಲ್ ಕುಮಾರ್ ಪರ್ಯಾಯ ಮೆರವಣಿಗೆಯಲ್ಲಿ ಧ್ವಜ ವಿವಾದಕ್ಕೆ ಪ್ರತಿಕ್ರಿಯಿಸುತ್ತಾ ಪ್ರಶ್ನಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆಗೊಳಿರುವ ಅವರು ಉಡುಪಿ ಪರ್ಯಾಯದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಪ್ರಕರಣ ಕಾಂಗ್ರೆಸ್ ನಾಯಕರ ಕ್ಷುದ್ರ ಮನಸ್ಥಿತಿಗೆ ಇದು ಕೈಗನ್ನಡಿ. ಹಿಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಬಿಟ್ಟು ಕಾಂಗ್ರೆಸ್ ಅಥವಾ ಹಸಿರು ಧ್ವಜ ಪ್ರದರ್ಶಿಸುವುದು ಮಾತ್ರ ಧರ್ಮ ನಿರಪೇಕ್ಷತೆಯೇ ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮಾನವ ಹಕ್ಕು ಹಾಗೂ ಕಾನೂನು ವಿಭಾಗದ ಅಧ್ಯಕ್ಷ ಹರೀಶ್ ಶೆಟ್ಟಿ ಸಿಎಂ ಹಾಗೂ ಡಿಸಿಎಂಗೆ ಪತ್ರ ಬರೆದು ಡಿಸಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಉಡುಪಿ ಪರ್ಯಾಯ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಗಳು ಮೊದಲಿನಿಂದಲೂ ಭಾಗವಹಿಸಿದ್ದನ್ನು ನಾವು ನೋಡಿದ್ದೇವೆ. ಆದರೆ ಈ ಬಾರಿ ಮಾತ್ರ ಕಾಂಗ್ರೆಸ್ ಕಣ್ಣಿಗೆ ಅದ್ಯಾವ ಲೋಪ ಕಂಡಿತು ? ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದು ಆಚರಣೆಗಳಲ್ಲಿ ತಪ್ಪು ಹುಡುಕುವುದೇ ಕಾಂಗ್ರೆಸ್‌ಗೆ ಚಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

14 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

14 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

15 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

15 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

15 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

16 hours ago