ಉಡುಪಿ: ರಾಜ್ಯದಲ್ಲಿ ಹಿಜಬ್- ಕೇಸರಿ ಫೈಟ್ ಜೋರಾಗಿದ್ದು, ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಈ ಮಧ್ಯೆ ವಿದ್ಯಾರ್ಥಿಗಳು ಮಾತ್ರ ತಮ್ಮ ಹೋರಾಟ ಮುಂದುವರಿಸುತ್ತಲೇ ಇದ್ದಾರೆ. ಇಂದು ನಗರದ ಎಂಜಿಎಂ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಪೇಟ, ಶಾಲಿನೊಂದಿಗೆ ಕಾಲೇಜಿಗೆ ಆಗಮಿಸಿದ್ದಾರೆ.
ಬುರ್ಖಾ, ಹಿಜಬ್ ಧರಿಸಿ ವಿದ್ಯಾರ್ಥಿನಿಯರು ಬಂದರೆ, ಕೇಸರಿ ಪೇಟ, ಕೇಸರಿ ಶಾಲು ತೊಟ್ಟು ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದಾರೆ.
ರಾಜ್ಯಾದ್ಯಂತ ಹಿಜಬ್ ಧರಿಸುವ ಹಕ್ಕಿಗಾಗಿ ಹೋರಾಟ ನಡೆಯುತ್ತಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಧಾರ್ಮಿಕ ಹಕ್ಕು ಎರಡು ಧರ್ಮಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದ್ದು ಇಂದು ಪ್ರಕರಣದ ವಿಚಾರಣೆ ಆರಂಭವಾಗಲಿದೆ.
ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ಗೆ ನಿರ್ಬಂಧ ಹೇರಿದ್ದನ್ನ ವಿರೋಧಿಸಿ, ಕೆಲ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇವತ್ತು ಹೈಕೋರ್ಟ್ ಕಟಕಟೆಗೆ ಈ ಪ್ರಕರಣ ಬರಲಿದೆ. ಸುಪ್ರೀಂಕೋರ್ಟ್, ಕೇರಳ, ಮದ್ರಾಸ್ ಹೈಕೋರ್ಟ್ಗಳು ಇಂಥದ್ದೇ ಪ್ರಕರಣಗಳಲ್ಲಿ ವಸ್ತ್ರ ಸಂಹಿತೆಯನ್ನ ಎತ್ತಿ ಹಿಡಿದಿವೆ. ಹೀಗಾಗಿ ಉಡುಪಿ ಪ್ರಕರಣದಲ್ಲಿ ಹೈಕೋರ್ಟ್ ಯಾವ ಆದೇಶ ನೀಡಲಿದೆ ಅನ್ನೋದು ಎಲ್ಲರ ಕುತೂಹಲ ಕೆರಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…