ಉಡುಪಿ: ಟ್ರಸ್ಟ್ ವತಿಯಿಂದ ನಡೆಸಲ್ಪಡುತ್ತಿರುವ ಉಡುಪಿ ಕೊಡವೂರು ಸಮೀಪವಿರುವ ನಂದಗೋಕುಲ ಗೋಶಾಲೆಯ ನೂತನ ಕಟ್ಟಡಕ್ಕೆ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮಂಗಳವಾರ ಶಿಲಾನ್ಯಾಸ ನೆರವೇರಿಸಿ ಸಂದೇಶ ನೀಡಿದರು .
ದೇವಸ್ಥಾನಗಳಲ್ಲಿ ಶಿಲಾ ವಿಗ್ರಹ ಪ್ರತಿಮೆಗಳಲ್ಲಿ ಭಗವಂತನ ಚೈತನ್ಯವನ್ನು ತುಂಬಿ ಆರಾಧಿಸಲಾಗುತ್ತದೆ. ಗೋವುಗಳಲ್ಲಿ ದೇವಾನುದೇವತೆಗಳ ಸನ್ನಿಧಾನ ನಿತ್ಯ ಜಾಗೃತವಾಗಿರುತ್ತದೆ . ಚೈತನ್ಯ ತುಂಬಿದ ವಿಗ್ರಹದಷ್ಟೇ ಗೋವುಗಳೂ ಪ್ರಮುಖವಾಗಿವೆ . ಆದ್ದರಿಂದ ದೇವಳಗಳ ಜೀರ್ಣೋದ್ಧಾರಕ್ಕೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಗೋಶಾಲೆಗಳ ನಿರ್ಮಾಣ , ನವೀಕರಣಗಳಿಗೂ ನೀಡಬೇಕು ಎಂದು ಗೋವರ್ಧನಗಿರಿ ಟ್ರಸ್ಟ್ ಮುಖ್ಯಸ್ಥರೂ ಹಾಗೂ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕರೆ ನೀಡಿದ್ದಾರೆ .
ಕೆ ಎಂ ಎಫ್ ಅಧ್ಯಕ್ಷ ಕೆ ರವಿರಾಜ ಹೆಗ್ಡೆ , ಆಸ್ಟ್ರೇಲಿಯಾ ದಲ್ಲಿ ಯೋಗ ಶಿಕ್ಷಕರಾಗಿರುವ ರಾಜೇಂದ್ರ ಎಂಕಣ್ಣಮೂಲೆ ಶುಭ ಕೋರಿ ಮಾತಾಡಿದರು . ಬಡಾನಿಡಿಯೂರಿನ ಬಾಲಯ್ಯ ಕುಟುಂಬಿಕರ ಪಂಜುರ್ಲಿ ಟ್ರಸ್ಟ್ ಮುಖ್ಯಸ್ಥ , ದಾನಿ ಉಮೇಶ್ ರಾವ್ , ಕೊಡವೂರು ಶಂಕರನಾರಾಯಣ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ ಸುಧೀರ್ ರಾವ್ , ನಗರಸಭಾ ಸದಸ್ಯ ವಿಜಯ್ ಕೊಡವೂರು , ಡಾ ಸರ್ವೋತ್ತಮ ಉಡುಪ , ನಾಗರಾಜ ಪುರಾಣಿಕ್ , ಇಂಜಿನಿಯರ್ ರಾಜೇಂದ್ರ ಮಯ್ಯ , ಚಂದ್ರಶೇಖರ್ , ಗೋಶಾಲೆ ನಿರ್ವಾಹಕಿ ಪ್ರಮೀಳಾ ಜೋಶಿ ಮೊದಲಾದವರು ಉಪಸ್ಥಿತರಿದ್ದು ಶಿಲಾನ್ಯಾಸ ನೆರವೇರಿಸಿದರು .
ಈ ಗೋಶಾಲೆಯು ಒಂದೂವರೆ ಎಕ್ರೆ ಪ್ರದೇಶದಲ್ಲಿ 1984 ರಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸ್ಥಾಪಿಸಿದ ಮೊದಲ ಗೋಶಾಲೆಯಾಗಿದ್ದು 150 ಗೋವುಗಳು ಪೋಷಿಸಲ್ಪಡುತ್ತಿವೆ .
ಪ್ರಸ್ತುತ ನೂತನ ಒಂದು ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಟ್ರಸ್ಟ್ ವ್ಯವಸ್ಥಾಪಕ ರಘುರಾಮಾಚಾರ್ಯ ವಿವರಿಸಿದರು .
ಸ್ಥಳದಲ್ಲೇ ದನಸಹಾಯ ನೀಡಿದ ಮಹನೀಯರು : ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಸ್ಟ್ರೇಲಿಯಾ ದ ಯೋಗ ಶಿಕ್ಷಕ ರಾಜೇಂದ್ರ ಎಂಕಣ್ಣಮೂಲೆ ಎರಡು ಲಕ್ಷರೂ , ಕೆ ಎಂ ಎಫ್ ಪರವಾಗಿ ಅಧ್ಯಕ್ಷ ರವಿರಾಜ ಹೆಗ್ಡೆ ಒಂದು ಲಕ್ಷ ರೂ ದೇಣಿಗೆ ಹಸ್ತಾಂತರಿಸಿದರು
ವಾಸುದೇವ ಭಟ್ ಪೆರಂಪಳ್ಳಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು . . ವೇಣುಗೋಪಾಲ ಸಾಮಗರು ಧಾರ್ಮಿಕ ವಿಧಿ ನೆರವೇರಿಸಿದರು. ಕೃಷ್ಣ ಭಟ್ , ವಿಷ್ಣುಮೂರ್ತಿ ಆಚಾರ್ಯ , ಪ್ರಾಣೇಶ್ ಜೋಶಿ ಸಹಕರಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…