Featured

ಉಡುಪಿ : ಕೊಡವೂರು ಗೋಶಾಲೆಯ ನೂತನ‌ ಕಟ್ಟಡಕ್ಕೆ ಪೇಜಾವರ ಶ್ರೀಗಳಿಂದ  ಶಿಲಾನ್ಯಾಸ – Vishwanews24

ಉಡುಪಿ : ಕೊಡವೂರು ಗೋಶಾಲೆಯ ನೂತನ‌ ಕಟ್ಟಡಕ್ಕೆ ಪೇಜಾವರ ಶ್ರೀಗಳಿಂದ  ಶಿಲಾನ್ಯಾಸ – Vishwanews24

ಉಡುಪಿ: ಟ್ರಸ್ಟ್ ವತಿಯಿಂದ ನಡೆಸಲ್ಪಡುತ್ತಿರುವ ಉಡುಪಿ ಕೊಡವೂರು ಸಮೀಪವಿರುವ ನಂದಗೋಕುಲ ಗೋಶಾಲೆಯ ನೂತನ ಕಟ್ಟಡಕ್ಕೆ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮಂಗಳವಾರ ಶಿಲಾನ್ಯಾಸ ನೆರವೇರಿಸಿ ಸಂದೇಶ ನೀಡಿದರು .

ದೇವಸ್ಥಾನಗಳಲ್ಲಿ ಶಿಲಾ ವಿಗ್ರಹ ಪ್ರತಿಮೆಗಳಲ್ಲಿ ಭಗವಂತನ ಚೈತನ್ಯವನ್ನು ತುಂಬಿ ಆರಾಧಿಸಲಾಗುತ್ತದೆ. ಗೋವುಗಳಲ್ಲಿ ದೇವಾನುದೇವತೆಗಳ ಸನ್ನಿಧಾನ ನಿತ್ಯ ಜಾಗೃತವಾಗಿರುತ್ತದೆ . ಚೈತನ್ಯ ತುಂಬಿದ ವಿಗ್ರಹದಷ್ಟೇ ಗೋವುಗಳೂ ಪ್ರಮುಖವಾಗಿವೆ . ಆದ್ದರಿಂದ ದೇವಳಗಳ ಜೀರ್ಣೋದ್ಧಾರಕ್ಕೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಗೋಶಾಲೆಗಳ ನಿರ್ಮಾಣ , ನವೀಕರಣಗಳಿಗೂ ನೀಡಬೇಕು ಎಂದು ಗೋವರ್ಧನಗಿರಿ ಟ್ರಸ್ಟ್ ಮುಖ್ಯಸ್ಥರೂ ಹಾಗೂ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕರೆ ನೀಡಿದ್ದಾರೆ .

ಕೆ ಎಂ ಎಫ್ ಅಧ್ಯಕ್ಷ ಕೆ ರವಿರಾಜ ಹೆಗ್ಡೆ , ಆಸ್ಟ್ರೇಲಿಯಾ ದಲ್ಲಿ ಯೋಗ ಶಿಕ್ಷಕರಾಗಿರುವ ರಾಜೇಂದ್ರ ಎಂಕಣ್ಣಮೂಲೆ ಶುಭ ಕೋರಿ ಮಾತಾಡಿದರು . ಬಡಾನಿಡಿಯೂರಿನ ಬಾಲಯ್ಯ ಕುಟುಂಬಿಕರ ಪಂಜುರ್ಲಿ ಟ್ರಸ್ಟ್ ಮುಖ್ಯಸ್ಥ , ದಾನಿ ಉಮೇಶ್ ರಾವ್ , ಕೊಡವೂರು ಶಂಕರನಾರಾಯಣ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ ಸುಧೀರ್ ರಾವ್ , ನಗರಸಭಾ ಸದಸ್ಯ ವಿಜಯ್ ಕೊಡವೂರು , ಡಾ ಸರ್ವೋತ್ತಮ ಉಡುಪ , ನಾಗರಾಜ ಪುರಾಣಿಕ್ , ಇಂಜಿನಿಯರ್ ರಾಜೇಂದ್ರ ಮಯ್ಯ , ಚಂದ್ರಶೇಖರ್ , ಗೋಶಾಲೆ ನಿರ್ವಾಹಕಿ ಪ್ರಮೀಳಾ ಜೋಶಿ ಮೊದಲಾದವರು ಉಪಸ್ಥಿತರಿದ್ದು ಶಿಲಾನ್ಯಾಸ ನೆರವೇರಿಸಿದರು .

ಈ ಗೋಶಾಲೆಯು ಒಂದೂವರೆ ಎಕ್ರೆ ಪ್ರದೇಶದಲ್ಲಿ 1984 ರಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸ್ಥಾಪಿಸಿದ ಮೊದಲ ಗೋಶಾಲೆಯಾಗಿದ್ದು 150 ಗೋವುಗಳು ಪೋಷಿಸಲ್ಪಡುತ್ತಿವೆ .

ಪ್ರಸ್ತುತ ನೂತನ ಒಂದು ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಟ್ರಸ್ಟ್ ವ್ಯವಸ್ಥಾಪಕ ರಘುರಾಮಾಚಾರ್ಯ ವಿವರಿಸಿದರು .

ಸ್ಥಳದಲ್ಲೇ ದನಸಹಾಯ ನೀಡಿದ ಮಹನೀಯರು : ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಸ್ಟ್ರೇಲಿಯಾ ದ ಯೋಗ ಶಿಕ್ಷಕ ರಾಜೇಂದ್ರ ಎಂಕಣ್ಣಮೂಲೆ ಎರಡು ಲಕ್ಷರೂ , ಕೆ ಎಂ ಎಫ್ ಪರವಾಗಿ ಅಧ್ಯಕ್ಷ ರವಿರಾಜ ಹೆಗ್ಡೆ ಒಂದು ಲಕ್ಷ ರೂ ದೇಣಿಗೆ ಹಸ್ತಾಂತರಿಸಿದರು

ವಾಸುದೇವ ಭಟ್ ಪೆರಂಪಳ್ಳಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು .‌ . ವೇಣುಗೋಪಾಲ ಸಾಮಗರು ಧಾರ್ಮಿಕ ವಿಧಿ ನೆರವೇರಿಸಿದರು. ಕೃಷ್ಣ ಭಟ್ , ವಿಷ್ಣುಮೂರ್ತಿ ಆಚಾರ್ಯ , ಪ್ರಾಣೇಶ್ ಜೋಶಿ ಸಹಕರಿಸಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

20 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

21 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

21 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

22 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

22 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago