ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯವರು, ಇದು ತನ್ನ ಕೊನೆಯ ಚುನಾವಣೆ ಎಂದು ಹೇಳುತ್ತಿದ್ದಾರೆ. ಕೊನೆಯ ಚುನಾವಣೆ ಎಂದು ಹೇಳುವ ಗಿರಾಕಿಗಳನ್ನು ಎಂದಿಗೂ ನಂಬಬೇಡಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತದಾರರಿಗೆ ಕರೆ ನೀಡಿದರು.
ಅವರು ಕಟಪಾಡಿಯ ಗ್ರೀನ್ ವ್ಯಾಲಿ ಮೈದಾನ ನಡೆಯುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.
ಸೊರಕೆಯವರು ಸತ್ಯ ಅಥವಾ ಸುಳ್ಳು ಹೇಳುತ್ತಿದ್ದರೂ, ಮತದಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ. ಸತ್ಯ ಎಂದಾದರೇ ಅದೃಶವಶಾತ್ ಅವರು ಗೆದ್ದರೇ, ಜನರ ಸೇವೆ ಮಾಡದೇ ಅವರ ಹೆಂಡತಿ, ಮಕ್ಕಳ ಹೊಟ್ಟೆಯನ್ನು ತುಂಬಿಸುತ್ತಾ ಕಾಲ ಕಳೆಯುತ್ತಾರೆ. ಸುಳ್ಳು ಎಂದಾದಲ್ಲಿ ಜನರಿಗೆ ಮೋಸ ಮಾಡಿದಂತಾಗುತ್ತದೆ ಎಂದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2014 ರಲ್ಲಿ ವಿಧಾನಸಭೆಯಲ್ಲಿ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದರು. ಆ ನಂತರ 2018 ರಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಈಗ ಮತ್ತೇ ಎರಡು ಕ್ಷೇತ್ರಕ್ಕೆ ಟಿಕೆಟ್ ಕೇಳಿದ ಅವರಿಗೆ ಒಂದು ಕ್ಷೇತ್ರದಲ್ಲಿ ಮಾತ್ರ ಪಕ್ಷ ಟಿಕೆಟ್ ನೀಡಿದೆ. ಮಾಜಿ ಪ್ರಧಾನಿ ದೇವೆಗೌಡರು ಕಳೆದ 30 ವರ್ಷಗಳಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಾ, ಇಂದಿಗೂ ಸ್ಪರ್ಧಿಸುವುದನ್ನು ಕೊನೆಗೊಳಿಸಿಲ್ಲ ಎಂದು ವ್ಯಂಗಿಸಿದರು.
ಹಿಂದುತ್ವಕ್ಕೆ ವಿರೋಧಿಯಾಗಿರುವ ಕಾಂಗ್ರೆಸ್ ಪಕ್ಷ. ಅದರ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದರೇ ಸನಾತನ ಧರ್ಮವನ್ನು ಅನುಷ್ಠಾನಕ್ಕೆ ತರುತ್ತಾರೆ. ಇದು ಅನುಷ್ಠಾನಕ್ಕೆ ಬರಲೂ ಬಿಡಬಾರದು ಎಂದು ಕರೆ ನೀಡಿದ್ದರು. ಜಗತ್ತು ಗೌರವಿಸುವ ಸನಾತನ ಧರ್ಮದ ವಿರೋಧಿಯಾಗಿರುವ ಇವರುಗಳು, ಕೇವಲ ಹಿಂದುತ್ವದ ವಿರೋಧಿಗಳಲ್ಲ, ಬದಲಾಗಿ ಹಿಂದುಗಳ ವಿರೋಧಿಗಳು ಎಂದವರು ಹೇಳಿದರು.
2024 ರಲ್ಲಿ ನರೇಂದ್ರ ಮೋದಿಯವರ ಸರಕಾರವು ಅಧಿಕಾರಕ್ಕೆ ಬರಬೇಕೆಂದರೇ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಕಾರವು ಅಧಿಕಾರಕ್ಕೆ ಬರಬೇಕು. ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಗೆ ಇದು ಮುನ್ನುಡಿಯಾಗಲಿದೆ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಭಾಜಪ ಅಭ್ಯರ್ಥಿಗಳನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸಿ ಎಂದವರು ಹೇಳಿದರು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…