Featured

ಉಡುಪಿ: ಕೊನೆಯ ಚುನಾವಣೆ ಎಂದು ಹೇಳುವ ಗಿರಾಕಿಗಳನ್ನು ಎಂದಿಗೂ ನಂಬಬೇಡಿ : ಪ್ರಮೋದ್ ಮಧ್ವರಾಜ್ – Vishwanews24

ಉಡುಪಿ: ಕೊನೆಯ ಚುನಾವಣೆ ಎಂದು ಹೇಳುವ ಗಿರಾಕಿಗಳನ್ನು ಎಂದಿಗೂ ನಂಬಬೇಡಿ : ಪ್ರಮೋದ್ ಮಧ್ವರಾಜ್

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯವರು, ಇದು ತನ್ನ ಕೊನೆಯ ಚುನಾವಣೆ ಎಂದು ಹೇಳುತ್ತಿದ್ದಾರೆ. ಕೊನೆಯ ಚುನಾವಣೆ ಎಂದು ಹೇಳುವ ಗಿರಾಕಿಗಳನ್ನು ಎಂದಿಗೂ ನಂಬಬೇಡಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತದಾರರಿಗೆ ಕರೆ ನೀಡಿದರು.

ಅವರು ಕಟಪಾಡಿಯ ಗ್ರೀನ್ ವ್ಯಾಲಿ ಮೈದಾನ ನಡೆಯುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಸೊರಕೆಯವರು ಸತ್ಯ ಅಥವಾ ಸುಳ್ಳು ಹೇಳುತ್ತಿದ್ದರೂ, ಮತದಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ. ಸತ್ಯ ಎಂದಾದರೇ ಅದೃಶವಶಾತ್ ಅವರು ಗೆದ್ದರೇ, ಜನರ ಸೇವೆ ಮಾಡದೇ ಅವರ ಹೆಂಡತಿ, ಮಕ್ಕಳ ಹೊಟ್ಟೆಯನ್ನು ತುಂಬಿಸುತ್ತಾ ಕಾಲ ಕಳೆಯುತ್ತಾರೆ. ಸುಳ್ಳು ಎಂದಾದಲ್ಲಿ ಜನರಿಗೆ ಮೋಸ ಮಾಡಿದಂತಾಗುತ್ತದೆ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2014 ರಲ್ಲಿ ವಿಧಾನಸಭೆಯಲ್ಲಿ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದರು. ಆ ನಂತರ 2018 ರಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಈಗ ಮತ್ತೇ ಎರಡು ಕ್ಷೇತ್ರಕ್ಕೆ ಟಿಕೆಟ್ ಕೇಳಿದ ಅವರಿಗೆ ಒಂದು ಕ್ಷೇತ್ರದಲ್ಲಿ ಮಾತ್ರ ಪಕ್ಷ ಟಿಕೆಟ್ ನೀಡಿದೆ. ಮಾಜಿ ಪ್ರಧಾನಿ ದೇವೆಗೌಡರು ಕಳೆದ 30 ವರ್ಷಗಳಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಾ, ಇಂದಿಗೂ ಸ್ಪರ್ಧಿಸುವುದನ್ನು ಕೊನೆಗೊಳಿಸಿಲ್ಲ ಎಂದು ವ್ಯಂಗಿಸಿದರು.

ಹಿಂದುತ್ವಕ್ಕೆ ವಿರೋಧಿಯಾಗಿರುವ ಕಾಂಗ್ರೆಸ್ ಪಕ್ಷ. ಅದರ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದರೇ ಸನಾತನ ಧರ್ಮವನ್ನು ಅನುಷ್ಠಾನಕ್ಕೆ ತರುತ್ತಾರೆ. ಇದು ಅನುಷ್ಠಾನಕ್ಕೆ ಬರಲೂ ಬಿಡಬಾರದು ಎಂದು ಕರೆ ನೀಡಿದ್ದರು. ಜಗತ್ತು ಗೌರವಿಸುವ ಸನಾತನ ಧರ್ಮದ ವಿರೋಧಿಯಾಗಿರುವ ಇವರುಗಳು, ಕೇವಲ ಹಿಂದುತ್ವದ ವಿರೋಧಿಗಳಲ್ಲ, ಬದಲಾಗಿ ಹಿಂದುಗಳ ವಿರೋಧಿಗಳು ಎಂದವರು ಹೇಳಿದರು.

2024 ರಲ್ಲಿ ನರೇಂದ್ರ ಮೋದಿಯವರ ಸರಕಾರವು ಅಧಿಕಾರಕ್ಕೆ ಬರಬೇಕೆಂದರೇ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಕಾರವು ಅಧಿಕಾರಕ್ಕೆ ಬರಬೇಕು. ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಗೆ ಇದು ಮುನ್ನುಡಿಯಾಗಲಿದೆ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಭಾಜಪ ಅಭ್ಯರ್ಥಿಗಳನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸಿ ಎಂದವರು ಹೇಳಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago