Featured

ಉಡುಪಿ : ಕೊರಗ ಸಮುದಾಯದ ಮೇಲೆ ಪೊಲೀಸರಿಂದ ಹಲ್ಲೆಆರೋಪಕ್ಕೆ ದೂರು ಹಾಗೂ ಪ್ರತಿದೂರು ದಾಖಲು – Vishwanews24

ಉಡುಪಿ : ಕೊರಗ ಸಮುದಾಯದ ಮೇಲೆ ಪೊಲೀಸರಿಂದ ಹಲ್ಲೆಆರೋಪಕ್ಕೆ ದೂರು ಹಾಗೂ ಪ್ರತಿದೂರು ದಾಖಲು – Vishwanews24

ಮೆಹೆಂದಿ ಕಾರ್ಯಕ್ರಮದಲ್ಲಿದ್ದ ಹಲವರ ಮೇಲೆ ದೂರು ನೀಡಿದ ಪೊಲೀಸ್‌ ಸಿಬ್ಬಂದಿ..

ಕೋಟ: ಬ್ರಹ್ಮಾವರ ತಾಲೂಕಿನ ಕೋಟೆತಟ್ಟು ಬಾರಿಕೆರೆ ಕೊರಗ ಸಮುದಾಯದ ವ್ಯಕ್ತಿಯೊಬ್ಬರ ಮನೆಯಲ್ಲಿ ಮೆಹೆಂದಿ ಕಾರ್ಯಕ್ರಮ ನಡೆಯುತ್ತಿದ್ದಾಗ ಕೋಟ ಪೊಲೀಸರು ಭೇಟಿ ನೀಡಿ ಲಾಠಿ ಪ್ರಹಾರ ನಡೆಸಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ದೂರು ಹಾಗೂ ಪ್ರತಿದೂರುಗಳು ದಾಖಲಾಗಿವೆ.

ಜಯರಾಮ ನಾಯ್ಕ ಎಲ್‌ (27) ಇವರು ಕೋಟ ಪೊಲೀಸ್‌‌ ಠಾಣೆಯಲ್ಲಿ ಕಾನ್ಸ್‌‌ಟೇಬಲ್‌‌ ಆಗಿ ಕೆಲಸ ಮಾಡಿಕೊಂಡಿದ್ದು, ಡಿ.27ರಂದು ಇವರನ್ನು ಠಾಣಾ ಮೀಸಲು ಕರ್ತವ್ಯಕ್ಕೆ ನೇಮಿಸಿದ್ದು, ಅದರಂತೆ ಕರ್ತವ್ಯ ಮುಗಿಸಿ ವಿಶ್ರಾಂತಿಯಲ್ಲಿರುವ ಸಂದರ್ಭ ಠಾಣಾ ಪೊಲೀಸ್‌‌ ಉಪನಿರೀಕ್ಷಕ ಸಂತೋಷ್‌‌ ಬಿ ಪಿ ಅವರು ರಾತ್ರಿ 10.45ರ ಸುಮಾರಿಗೆ ಕರೆ ಮಾಡಿ ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುವಿನ ರಾಜೇಶ್ ಎನ್ನುವವರ ಮನೆಯಲ್ಲಿ ಮೆಹೆಂದಿ ಕಾರ್ಯಕ್ರಮಕ್ಕೆ ಏರು ಧ್ವನಿಯಲ್ಲಿ ಡಿಜೆ ಸೌಂಡ್ ಹಾಕಿ, ಮನೆಯ ಎದುರಿನ ಸಾರ್ವಜನಿಕ ರಸ್ತೆಯಲ್ಲಿ ಸುಮಾರು 30-50 ಜನ ಮಧ್ಯ ಸೇವನೆ ಮಾಡಿ ಕೇಕೆ ಹಾಕುತ್ತಾ, ನೃತ್ಯ ಮಾಡುತ್ತಿದ್ದಾರೆ ಎಂದು ತಿಳಿಸಿದ್ಧಾರೆ.

ಬಳಿಕ ಜಯರಾಮ ನಾಯ್ಕ ಅವರು ಇಲಾಖಾ ಜೀಪಿನಲ್ಲಿ ಪಿಎಸ್‌‌ಐ ಸಂತೋಷ್‌‌‌ ಅವರೊಂದಿಗೆ ರಾತ್ರಿ 11.10ರ ಸುಮಾರಿಗೆ ಸ್ಥಳಕ್ಕೆ ಹೋದಾಗ ರಾಜೇಶ್, ಸುದರ್ಶನ್, ಗಣೇಶ ಬಾರ್ಕೂರು, ಸಚಿನ್, ಗಿರೀಶ್, ನಾಗೇಂದ್ರ ಪುತ್ರನ್, ನಾಗರಾಜ ಪುತ್ರನ್ ಮತ್ತು ಇತರರು ಡಿಜೆ ಸೌಂಡ್ ಅನ್ನು ಜೋರಾಗಿ ಹಾಕಿಕೊಂಡು ನೃತ್ಯ ಮಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಸ್ಥಳದಲ್ಲಿದ್ದ ಸ್ಥಳೀಯ ನಿವಾಸಿ ಸುಬ್ರಹ್ಮಣ್ಯ ಉರಾಳ ಅವರು ಪಿಎಸ್‌ ಅವರಲ್ಲಿ ತನ್ನ ತಾಯಿಗೆ ಹೃದಯ ಸಂಬಂಧಿ ತೊಂದರೆ ಇದ್ದು, ಡಿಜೆ ಸೌಂಡನ್ನು ಮೆಲ್ಲನೆ ಇಡುವಂತೆ 112 ಗೆ ಮಾಹಿತಿ ನೀಡಿದ್ದು, 112 ಸಿಬ್ಬಂದಿಯವರು ಸ್ಥಳಕ್ಕೆ ಬಂದಾಗ ಅವರಲ್ಲಿಯೂ ಸಹ ಆರೋಪಿತರು ಉಡಾಫೆಯಿಂದ ಮಾತನಾಡಿದ್ಧಾರೆ ಎಂದಿದ್ಧಾರೆ. ಈ ವೇಳೆ ಪಿಎಸ್‌ಐ ಅವರು ಡಿಜೆ ಸೌಂಡನ್ನು ಕಡಿಮೆ ಮಾಡುವಂತೆ ತಿಳಿಸಿದಾಗ, ಆರೋಪಿತರು ಗುಂಪು ಕಟ್ಟಿಕೊಂಡು, ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಪಿಎಸ್‌ಐ ಅವರ ಬಳಿ ಬಂದು, ನೀವು ಏನು ಮಾಡುತ್ತೀರಾ ನಾವು ಡಿಜೆ ಸೌಂಡನ್ನು ಬಂದ್‌ ಮಾಡುವುದಿಲ್ಲ ಎಂದು ಉಡಾಫೆಯಿಂದ ಮಾತನಾಡಿ, ಸಮವಸ್ತ್ರದಲ್ಲಿದ್ದ ಪಿಎಸ್‌‌‌ಐ ಅವರನ್ನು ದೂಡಿದ್ದಾರೆ. ಈ ವೇಳೆ ಜಯರಾಮ ನಾಯ್ಕ ಅವರು ಡಿಜೆ ಅನ್ನು ಬಂದ್‌ ಮಾಡಲು ಹೋದಾಗ ಆರೋಪಿತರು ಜಯರಾಮ ನಾಯ್ಕ ಅವರನ್ನು ಸುತ್ತುವರಿದು ದೊಣ್ಣೆಯಿಂದ ಕೈಗೆ ಹೊಡೆದು, ಸಮವಸ್ತ್ರವನ್ನು ಹರಿದು ಹಾಕಿ ಅವಾಚ್ಯವಾಗಿ ಬೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ಧಾರೆ ಎಂದು ಪೊಲೀಸ್‌ ಸಿಬ್ಬಂದಿ ಕೋಟ ಪೊಲೀಸ್‌‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರಾಜೇಶ್‌ ಎಂಬವರು ನೀಡಿದ ದೂರಿನಲ್ಲಿ, ಡಿ.27ರಂದು ರಾತ್ರಿ 10 ರ ಸುಮಾರಿಗೆ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಕೋಟ ಪೊಲೀಸ್‌ ಠಾಣೆಯ ಠಾಣಾಧಿಕಾರಿ ಸಂತೋಷ್‌ ಬಿ ಪಿ, ಹೆಚ್.ಸಿ ರಾಮಣ್ಣ, ಹೆಚ್.ಸಿ ಅಶೋಕ್ ಶೆಟ್ಟಿ, ಮಂಜುನಾಥ ಮತ್ತು ಇತರ ಸಿಬ್ಬಂದಿಯವರು ಮೆಹೆಂದಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ನುಗ್ಗಿ, ಲಾಠಿಯಿಂದ ಗಣೇಶ ಬಾರ್ಕೂರು ಎಂಬರಿಗೆ ಹೊಡೆದು, ಹಲ್ಲೆ ನಡೆಸಿ ಜೀಪಿಗೆ ತುಂಬುತ್ತಿದ್ದಂತೆ ಹಿರಿಯ ಮಹಿಳೆಯರು ಮನವಿ ಮಾಡಿಕೊಂಡರೂ ಸ್ಪಂದಿಸದೇ, ಲಕ್ಷ್ಮೀ ಎಂಬರಿಗೆ ಲಾಠಿಯಿಂದ ಹಲ್ಲೆ ನಡೆಸಿ, ಸುದರ್ಶನ, ಗಿರೀಶ ಮತ್ತು ಸಚಿನ್ ಎಂಬುವವರನ್ನು ಜೀಪಿಗೆ ತುಂಬಿ ಠಾಣೆಗೆ ಕರೆದುಕೊಂಡು ಹೋಗಿರುವುದಲ್ಲದೇ, ಠಾಣೆಯಲ್ಲಿ ಎಲ್ಲರನ್ನೂ ವಿವಸ್ತ್ರಗೊಳಿಸಿ ಸೆಲ್ ಒಳಗೆ ಹಾಕಿ ಬೆದರಿಕೆ ಹಾಕಿದ್ದಾರೆ ಎಂದು ಕೋಟ ಠಾಣೆಯಲ್ಲಿ ದೂರು ನೀಡಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

22 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

22 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago