ಉಡುಪಿ: ಕೋಟ ಕೊರಗರ ಮೇಲೆ ಹಲ್ಲೆಯ ಘಟನೆಗೆ ಸಂಬಂಧಿಸಿ ಕೋಟ ಠಾಣಾಧಿಕಾರಿ ಸಂತೋಷ್ ಬಿ ಪಿ ಅವರನ್ನು ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಅವರು ಆದೇಶ ಹೊರಡಿಸಿದ್ದಾರೆ ಅಲ್ಲದೆ ಉಳಿದ ಐದು ಸಿಬಂದಿಗಳನ್ನು ಜಿಲ್ಲೆಯ ಬೇರೆ ಠಾಣೆಗಳಿಗೆ ವರ್ಗಾವಣೆಗೊಳಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.
ಸೋಮವಾರ ರಾತ್ರಿ ಕೊಟ್ಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮನೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಹಾಕಿದ್ದಾರೆ ಎಂಬ ಸಾರ್ವಜನಿಕರ ದೂರಿನ ಅನ್ವಯ ತೆರಳಿದ್ದ ಪಿಎಸ್ ಐ ಮತ್ತವರ ತಂಡ ಅಲ್ಲಿದ್ದ ಜನರ ಮೇಲೆ ಲಾಠಿ ಪ್ರಹಾರ ನಡೆಸಿದ್ದು ಘಟನೆಯಲ್ಲಿ ಮದುಮಗ ಸೇರಿ ಹಲವರು ಗಾಯಗೊಂಡಿದ್ದರು. ಪೊಲೀಸರ ದೌರ್ಜನ್ಯದ ಕುರಿತು ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಡಿವೈಎಸ್ಪಿ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಅವರು ತನಿಖೆಗೆ ಆದೇಶ ನೀಡಿದ್ದು ಅದರ ಬೆನ್ನಲ್ಲೇ ಪಶ್ಚಿಮ ವಲಯ ಐಜಿಪಿ ಜ್ಯೋತಿ ಪ್ರಕಾಶ್ ರೈ ಅವರು ಎಸ್ ಐ ಅವರನ್ನು ಅಮಾನತು ಮಾಡಿ ಉಳಿದ ಐವರು ಪೊಲೀಸರಿಗೆ ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡುವಂತೆ ಆದೇಶ ನೀಡಿದ್ದಾರೆ.
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…
ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…
ಉಡುಪಿ: ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…
ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…
ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…