ಉಡುಪಿ

ಉಡುಪಿ: ಕೊರೊನಾ ಸಂಕಷ್ಟ : ಗೋಶಾಲೆಗಳಿಗೆ 200 ಕೋಟಿ ರೂ. ಪ್ಯಾಕೇಜ್ ನೀಡಲು ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ -Vishwanews24

ಉಡುಪಿ: ಕೊರೊನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಠ 200 ಕೋಟಿ ರೂ.ಗಳ ನಿರ್ವಹಣಾ ನಿಧಿಯನ್ನು ನೀಡಬೇಕೆಂದು ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರು ಆಗಿರುವ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ.

ಕಳೆದ ಆರೇಳು ತಿಂಗಳುಗಳಿಂದ ಕೊರೊನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳೂ ತೊಂದರೆಗೊಳಗಾಗಿವೆ ಎಂದು ಶ್ರೀಗಳು ಪತ್ರದಲ್ಲಿ ತಿಳಿಸಿದ್ದಾರೆ.

ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕವಾಗಿದೆ. ಉಡುಪಿಯಲ್ಲಿ ನೀಲಾವರ, ಕೊಡವೂರು, ಹೆಬ್ರಿಯಲ್ಲಿ ನಾವು ನಡೆಸುತ್ತಿರುವ ಗೋಶಾಲೆಗಳಿಗೆ ತಿಂಗಳಿಗೆ ಅಂದಾಜು 35 ಲಕ್ಷ ರೂ. ನಿರ್ವಹಣಾ ಖರ್ಚು ಆಗುತ್ತದೆ. ಅದೇ ರೀತಿಯಲ್ಲಿ ದೊಡ್ಡ ಅಥವಾ ಸಣ್ಣ ಮಟ್ಟದ ಗೋಶಾಲೆಗಳನ್ನು ಅನೇಕ ಮಠ, ದೇವಳ ಹಾಗೂ ಮಹನೀಯರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕರ್ತವ್ಯದ ದೃಷ್ಟಿಯಿಂದ ನಡೆಸುತ್ತಾ ಲಕ್ಷಾಂತರ ಗೋವುಗಳನ್ನು ಪೋಷಿಸುತ್ತಿದ್ದಾರೆ. ಧರ್ಮಾಭಿಮಾನಿಗಳ ಸಹಕಾರದಿಂದ ಇದು ಸಾಧ್ಯವಾಗುತ್ತಿತ್ತು. ಆದರೆ ಪ್ರಸ್ತುತ ಭಕ್ತರ ದೇಣಿಗೆಯೂ ಅಷ್ಟಾಗಿ ಬರುತ್ತಿಲ್ಲ. ಎರಡು ತಿಂಗಳಿನಿಂದ ದೇಶದ ಕೆಲವೆಡೆಗಳಲ್ಲಿ ವಿಪರೀತ ಮಳೆಯೂ ಸುರಿಯುತ್ತಿರುವುದರಿಂದ ಮೇವಿನ ಸಂಗ್ರಹಣೆಯೂ ದುಸ್ತರವಾಗುತ್ತಿದೆ ಎಂದಿದ್ದಾರೆ.

ಕೊರೊನಾ ವಿಪತ್ತನ್ನು ಎದುರಿಸಲು ಬೇರೆ ಬೇರೆ ಕ್ಷೇತ್ರಗಳಿಗೆ ಸರಕಾರವು ಆರ್ಥಿಕ ಪ್ಯಾಕೇಜ್ ಘೋಷಿಸಿದಂತೆ ಗೋಶಾಲೆಗಳಿಗೂ ಕನಿಷ್ಠ 200 ಕೋಟಿ ರೂ. ಆದರೂ ತುರ್ತಾಗಿ ನೀಡಿ ಗೋರಕ್ಷಣೆಯ ಕೈಂಕರ್ಯದಲ್ಲಿ ಕೈಜೋಡಿಸಬೇಕು. ಕೇವಲ ಧರ್ಮ‌ಮಾತ್ರವಲ್ಲದೇ ಆರ್ಥಿಕತೆಯ ಹಿತದೃಷ್ಟಿಯಿಂದಲೂ ಗೋರಕ್ಷಣೆಯನ್ನು ಆದ್ಯತೆಯಾಗಿ ಪರಿಗಣಿಸಬೇಕೆಂದು ಪೇಜಾವರ ಶ್ರೀಗಳು ಒತ್ತಾಯಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago