ಉಡುಪಿ

ಉಡುಪಿ: ಕೊರೊನಾ ಸಂಕಷ್ಟ : ಗೋಶಾಲೆಗಳಿಗೆ 200 ಕೋಟಿ ರೂ. ಪ್ಯಾಕೇಜ್ ನೀಡಲು ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ -Vishwanews24

ಉಡುಪಿ: ಕೊರೊನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಠ 200 ಕೋಟಿ ರೂ.ಗಳ ನಿರ್ವಹಣಾ ನಿಧಿಯನ್ನು ನೀಡಬೇಕೆಂದು ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರು ಆಗಿರುವ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ.

ಕಳೆದ ಆರೇಳು ತಿಂಗಳುಗಳಿಂದ ಕೊರೊನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳೂ ತೊಂದರೆಗೊಳಗಾಗಿವೆ ಎಂದು ಶ್ರೀಗಳು ಪತ್ರದಲ್ಲಿ ತಿಳಿಸಿದ್ದಾರೆ.

ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕವಾಗಿದೆ. ಉಡುಪಿಯಲ್ಲಿ ನೀಲಾವರ, ಕೊಡವೂರು, ಹೆಬ್ರಿಯಲ್ಲಿ ನಾವು ನಡೆಸುತ್ತಿರುವ ಗೋಶಾಲೆಗಳಿಗೆ ತಿಂಗಳಿಗೆ ಅಂದಾಜು 35 ಲಕ್ಷ ರೂ. ನಿರ್ವಹಣಾ ಖರ್ಚು ಆಗುತ್ತದೆ. ಅದೇ ರೀತಿಯಲ್ಲಿ ದೊಡ್ಡ ಅಥವಾ ಸಣ್ಣ ಮಟ್ಟದ ಗೋಶಾಲೆಗಳನ್ನು ಅನೇಕ ಮಠ, ದೇವಳ ಹಾಗೂ ಮಹನೀಯರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕರ್ತವ್ಯದ ದೃಷ್ಟಿಯಿಂದ ನಡೆಸುತ್ತಾ ಲಕ್ಷಾಂತರ ಗೋವುಗಳನ್ನು ಪೋಷಿಸುತ್ತಿದ್ದಾರೆ. ಧರ್ಮಾಭಿಮಾನಿಗಳ ಸಹಕಾರದಿಂದ ಇದು ಸಾಧ್ಯವಾಗುತ್ತಿತ್ತು. ಆದರೆ ಪ್ರಸ್ತುತ ಭಕ್ತರ ದೇಣಿಗೆಯೂ ಅಷ್ಟಾಗಿ ಬರುತ್ತಿಲ್ಲ. ಎರಡು ತಿಂಗಳಿನಿಂದ ದೇಶದ ಕೆಲವೆಡೆಗಳಲ್ಲಿ ವಿಪರೀತ ಮಳೆಯೂ ಸುರಿಯುತ್ತಿರುವುದರಿಂದ ಮೇವಿನ ಸಂಗ್ರಹಣೆಯೂ ದುಸ್ತರವಾಗುತ್ತಿದೆ ಎಂದಿದ್ದಾರೆ.

ಕೊರೊನಾ ವಿಪತ್ತನ್ನು ಎದುರಿಸಲು ಬೇರೆ ಬೇರೆ ಕ್ಷೇತ್ರಗಳಿಗೆ ಸರಕಾರವು ಆರ್ಥಿಕ ಪ್ಯಾಕೇಜ್ ಘೋಷಿಸಿದಂತೆ ಗೋಶಾಲೆಗಳಿಗೂ ಕನಿಷ್ಠ 200 ಕೋಟಿ ರೂ. ಆದರೂ ತುರ್ತಾಗಿ ನೀಡಿ ಗೋರಕ್ಷಣೆಯ ಕೈಂಕರ್ಯದಲ್ಲಿ ಕೈಜೋಡಿಸಬೇಕು. ಕೇವಲ ಧರ್ಮ‌ಮಾತ್ರವಲ್ಲದೇ ಆರ್ಥಿಕತೆಯ ಹಿತದೃಷ್ಟಿಯಿಂದಲೂ ಗೋರಕ್ಷಣೆಯನ್ನು ಆದ್ಯತೆಯಾಗಿ ಪರಿಗಣಿಸಬೇಕೆಂದು ಪೇಜಾವರ ಶ್ರೀಗಳು ಒತ್ತಾಯಿಸಿದ್ದಾರೆ.

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

55 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

1 hour ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

1 hour ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

2 hours ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

2 hours ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

2 hours ago