Featured

ಉಡುಪಿ : ಕೊರೊನಾ ಸುರಕ್ಷತಾ ನಿಯಮ ಪಾಲಿಸದಿದ್ದರೆ ದಂಡದ ಜೊತೆಗೆ ಪ್ರಕರಣ ದಾಖಲು :  ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ಕೊರೊನಾ ಸುರಕ್ಷತಾ ನಿಯಮ ಪಾಲಿಸದಿದ್ದರೆ ದಂಡದ ಜೊತೆಗೆ ಪ್ರಕರಣ ದಾಖಲು :  ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ಕೋವಿಡ್ ಎರಡನೇ ಅಲೆಯು ಪ್ರಾರಂಭವಾಗಿದ್ದು,  ಸಾರ್ವಜನಿಕರು ಕೋವಿಡ್ ಸುರಕ್ಷತಾ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್  ಎಚ್ಚರಿಸಿದ್ದಾರೆ.

ಅವರು ಮಂಗಳವಾರ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ, ಎರಡನೇ ಹಂತದ ಕೋವಿಡ್ ಲಸಿಕೆ ಪಡೆದು ಮಾತನಾಡಿದರು.

ಸಾರ್ವಜನಿಕರು ಜಾಗೃತರಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶಾಪಿಂಗ್ ಮಾಲ್‌ಗಳಲ್ಲಿ, ಅಂಗಡಿಗಳಿಗೆ ತೆರಳುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದೆ ಅಂಗಡಿಗೆ ಬರುವ ಸಾರ್ವಜನಿಕರ ಪ್ರವೇಶವನ್ನು ಅಂಗಡಿ ಮಾಲೀಕರು ನಿಷೇಧಿಸಬೇಕು. ಇಲ್ಲದಿದ್ದಲ್ಲಿ ಅಂತಹ ಅಂಗಡಿ ಮಾಲೀಕರ ಪರವಾನಿಗೆಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು.

ಕೇರಳ ಮತ್ತು ಮಹಾರಾಷ್ಟç ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರು 72 ಗಂಟೆಯ ಮೊದಲಿನ ಕೊರೊನಾದ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ತರಬೇಕು. ಹೊರ ರಾಜ್ಯಗಳಿಂದ ನೆಗೆಟಿವ್ ವರದಿಯನ್ನು ತಾರದೆ ಬಂದವರ ಬಗ್ಗೆ ಸಾರ್ವಜನಿಕರು ತಕ್ಷಣ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಬೇಕು. ಅವರಿಗೆ ತಕ್ಷಣ ಕೊರೊನಾ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ : ಉಡುಪಿ : ಕುಡಿಯುವ ನೀರು ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 45 ರಿಂದ 59 ವರ್ಷದೊಳಗಿನ ಇತರೆ ಕಾಯಿಲೆಗಳಿಂದ ಬಳುತ್ತಿರುವವರು ಕೊರೊನಾ ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಲಸಿಕೆಯನ್ನು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕರು ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದರು.

ಮುಂಚೂಣಿ ಕಾರ್ಯಕರ್ತರು ಲಸಿಕೆಯನ್ನು ಪಡೆದುಕೊಳ್ಳುವುದರಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಹಿರಿಯ ನಾಗರಿಕರು ಕೊರೊನಾ ಲಸಿಕೆಯನ್ನು ಪಡೆದುಕೊಳ್ಳುವುದರಲ್ಲಿ 6 ನೇ ಸ್ಥಾನದಲ್ಲಿದೆ. ಈಗಾಗಲೇ ಜಿಲ್ಲೆಯ 17,000 ಕ್ಕೂ ಅಧಿಕ ಹಿರಿಯ ನಾಗರಿಕರು ಹಾಗೂ ಇತರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಲಸಿಕೆಯನ್ನು ನೀಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕೋವಿಡ್-19 ಲಸಿಕೆಯನ್ನು ಪಡೆಯಲು ಬಂದರೆ ಹೆಚ್ಚು ಔಷಧಿ ಕೇಂದ್ರಗಳನ್ನು ರಚಿಸಿ ಲಸಿಕೆಯನ್ನು ನೀಡಲಾಗುವುದು ಎಂದು ಡಿಸಿ ತಿಳಿಸಿದರು.

ಡಿಹೆಚ್‌ಓ ಡಾ.ಸುಧೀರ್ ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಲಸಿಕ ಅಧಿಕಾರಿ ಡಾ. ಎಂ.ಜಿ.ರಾಮ, ಕೋವಿಡ್ ವಿಶೇಷ ನೋಡೆಲ್ ಅಧಿಕಾರಿ ಡಾ. ಪ್ರೇಮಾನಂದ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

4 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

4 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

4 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

4 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

4 hours ago