ಉಡುಪಿ : ಕೋವಿಡ್ ಎರಡನೇ ಅಲೆಯು ಪ್ರಾರಂಭವಾಗಿದ್ದು, ಸಾರ್ವಜನಿಕರು ಕೋವಿಡ್ ಸುರಕ್ಷತಾ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.
ಅವರು ಮಂಗಳವಾರ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ, ಎರಡನೇ ಹಂತದ ಕೋವಿಡ್ ಲಸಿಕೆ ಪಡೆದು ಮಾತನಾಡಿದರು.
ಸಾರ್ವಜನಿಕರು ಜಾಗೃತರಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶಾಪಿಂಗ್ ಮಾಲ್ಗಳಲ್ಲಿ, ಅಂಗಡಿಗಳಿಗೆ ತೆರಳುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದೆ ಅಂಗಡಿಗೆ ಬರುವ ಸಾರ್ವಜನಿಕರ ಪ್ರವೇಶವನ್ನು ಅಂಗಡಿ ಮಾಲೀಕರು ನಿಷೇಧಿಸಬೇಕು. ಇಲ್ಲದಿದ್ದಲ್ಲಿ ಅಂತಹ ಅಂಗಡಿ ಮಾಲೀಕರ ಪರವಾನಿಗೆಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು.
ಕೇರಳ ಮತ್ತು ಮಹಾರಾಷ್ಟç ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರು 72 ಗಂಟೆಯ ಮೊದಲಿನ ಕೊರೊನಾದ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ತರಬೇಕು. ಹೊರ ರಾಜ್ಯಗಳಿಂದ ನೆಗೆಟಿವ್ ವರದಿಯನ್ನು ತಾರದೆ ಬಂದವರ ಬಗ್ಗೆ ಸಾರ್ವಜನಿಕರು ತಕ್ಷಣ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಬೇಕು. ಅವರಿಗೆ ತಕ್ಷಣ ಕೊರೊನಾ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ : ಉಡುಪಿ : ಕುಡಿಯುವ ನೀರು ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 45 ರಿಂದ 59 ವರ್ಷದೊಳಗಿನ ಇತರೆ ಕಾಯಿಲೆಗಳಿಂದ ಬಳುತ್ತಿರುವವರು ಕೊರೊನಾ ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಲಸಿಕೆಯನ್ನು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕರು ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದರು.
ಮುಂಚೂಣಿ ಕಾರ್ಯಕರ್ತರು ಲಸಿಕೆಯನ್ನು ಪಡೆದುಕೊಳ್ಳುವುದರಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಹಿರಿಯ ನಾಗರಿಕರು ಕೊರೊನಾ ಲಸಿಕೆಯನ್ನು ಪಡೆದುಕೊಳ್ಳುವುದರಲ್ಲಿ 6 ನೇ ಸ್ಥಾನದಲ್ಲಿದೆ. ಈಗಾಗಲೇ ಜಿಲ್ಲೆಯ 17,000 ಕ್ಕೂ ಅಧಿಕ ಹಿರಿಯ ನಾಗರಿಕರು ಹಾಗೂ ಇತರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಲಸಿಕೆಯನ್ನು ನೀಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕೋವಿಡ್-19 ಲಸಿಕೆಯನ್ನು ಪಡೆಯಲು ಬಂದರೆ ಹೆಚ್ಚು ಔಷಧಿ ಕೇಂದ್ರಗಳನ್ನು ರಚಿಸಿ ಲಸಿಕೆಯನ್ನು ನೀಡಲಾಗುವುದು ಎಂದು ಡಿಸಿ ತಿಳಿಸಿದರು.
ಡಿಹೆಚ್ಓ ಡಾ.ಸುಧೀರ್ ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಲಸಿಕ ಅಧಿಕಾರಿ ಡಾ. ಎಂ.ಜಿ.ರಾಮ, ಕೋವಿಡ್ ವಿಶೇಷ ನೋಡೆಲ್ ಅಧಿಕಾರಿ ಡಾ. ಪ್ರೇಮಾನಂದ್ ಮತ್ತಿತರರು ಉಪಸ್ಥಿತರಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…