ಉಡುಪಿ : “ರಾಜ್ಯದಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿರುವ ಹಲವು ಪತ್ರಕರ್ತರಲ್ಲಿ ಒಟ್ಟು 31 ಪತ್ರಕರ್ತರು ಮೃತಪಟ್ಟಿದ್ದು, ಇವರಿಗೆ ಸರಕಾರದಿಂದ ತಲಾ 5ಲಕ್ಷ ರೂ. ಪರಿಹಾರ ಹಾಗೂ ಎರಡು ಕುಟುಂಬಗಳಿಗೆ ಮನೆ ಒದಗಿಸುವಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಶ್ರಮಿಸಿದೆ” ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಗೆ ಅಧಿಕೃತವಾಗಿ ಭೇಟಿ ನೀಡಿದ ಹಿನ್ನೆಲೆಯಲ್ಲಿ ಇಂದು ಉಡುಪಿ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ಪತ್ರಕರ್ತರನ್ನುದ್ದೇಶಿಸಿ ಮಾತನಾಡುತಿದ್ದರು.
“ರಾಜ್ಯದಲ್ಲಿ ಸುಮಾರು 8000 ಮಂದಿ ಸಂಘದ ಸದಸ್ಯತ್ವ ಪಡೆದುಕೊಂಡಿದ್ದಾರೆ. ಕೊರೊನಾ ಸಂದಿಗ್ನ ಸ್ಥಿತಿಯಲ್ಲೂ ವೃತ್ತಿ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಿದ ಪತ್ರಕರ್ತರು ಕೊರೊನಾಗೆ ಬಲಿಯಾಗಿದ್ದಾರೆ. ಮೃತ ಕುಟುಂಬಕ್ಕೆ ಆಸರೆಯಾಗಬೇಕೆಂಬ ದೃಷ್ಟಿಯಿಂದ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ 5 ಲಕ್ಷ ರೂ. ಪರಿಹಾರ ಕೊಡುವಂತೆ ಮನವಿ ಮಾಡಲಾಗಿತ್ತು. ಇದರಿಂದ ಮೃತ ಒಟ್ಟು 31 ಪತ್ರಕರ್ತರ ಕುಟುಂಬಗಳಿಗೆ ಪರಿಹಾರ ಸಿಕ್ಕಿದೆ” ಎಂದರು.
“ಕೊರೊನಾ ಕಾರಣಕ್ಕೆ ಕಳೆದ ಒಂದೂವರೆ ವರ್ಷದಿಂದ ರಾಜ್ಯಮಟ್ಟದ ಪತ್ರಿಕೆ, ದೃಶ್ಯ ಮಾಧ್ಯಮ ಸೇರಿದಂತೆ ಸ್ಥಳೀಯ ಪತ್ರಿಕೆಗಳಿಗೆ ಬಾಕಿ ಇಟ್ಟಿರುವ 56 ಕೋಟಿ ರೂ. ಸರಕಾರಿ ಜಾಹೀರಾತು ಬಿಲ್ ಅನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗಿದೆ” ಎಂದು ಹೇಳಿದರು.
ಏಷ್ಯನ್ ಕಾರ್ಯನಿರತ ಪತ್ರಕರ್ತರ ಸಂಘದ ಸಂಚಾಲಕ ಮದನ್ ಗೌಡ ಮಾತನಾಡಿ, “ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ರಾಜ್ಯ ಸರಕಾರ ನೀಡಿರುವ 2 ಕೋಟಿ ರೂ. ವೌಲ್ಯದ ನಿವೇಶನದಲ್ಲಿ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದರ ಶಂಕು ಸ್ಥಾಪನೆ ಶೀಘ್ರವೇ ನಡೆಸಲಾಗುವುದು” ಎಂದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಂಘ ಹಾಗೂ ಪ್ರತಕರ್ತರ ಬೇಡಿಕೆಗಳ ಮನವಿಯನ್ನು ರಾಜ್ಯಾಧ್ಯಕ್ಷರಿಗೆ ಸಲ್ಲಿಸಲಾಯಿತು. ನಮ್ಮ ಕುಂದಾಪ್ರ ಕನ್ನಡ ಗಲ್ಫ್ ಬಳಗ ವತಿಯಿಂದ ನೀಡಲಾದ ಫೇಸ್ ಶೀಲ್ಡ್ಗಳನ್ನು ಪತ್ರಕರ್ತರಿಗೆ ವಿತರಿಸಲಾಯಿತು. ಬಳಿಕ ರಾಜ್ಯಾಧ್ಯಕ್ಷರೊಂದಿಗೆ ಪತ್ರಕರ್ತರ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು ಚರ್ಚಿಸಲಾಯಿತು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತರಾದ ರಾಕೇಶ್ ಕುಂಜೂರು ಹಾಗೂ ದೀಪಕ್ ಜೈನ್ ಕಾರ್ಯಕ್ರಮ ನಿರೂಪಿಸಿದರು.
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…