ಉಡುಪಿ : ಕೊರೊನಾ ಹಾಗೂ ವರುಣನ ಅರ್ಭಟದ ಮಧ್ಯೆ ಕೃಷ್ಣ ನಗರಿಯಲ್ಲಿ ಸರಳ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಲೀಲೋತ್ಸವ ಸಂಪನ್ನ -Vishwanews24

ಉಡುಪಿ : ಕೊರೊನಾ ಹಾಗೂ ವರುಣನ ಅರ್ಭಟದ ಮಧ್ಯೆ ಕೃಷ್ಣ ನಗರಿಯಲ್ಲಿ ಸರಳ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಲೀಲೋತ್ಸವ ಸಂಪನ್ನ -Vishwanews24

ಉಡುಪಿ: ಒಂದೆಡೆ ಕೊರೋನಾದಿಂದಾಗಿ ಒಂದಷ್ಟು ನಿಯಮಗಳು. ಮತ್ತೊಂದೆಡೆ ಎರಡು ದಿನಗಳಿಂದ ಸುರಿಯುತ್ತಿರುವ ಬಾರೀ ಮಳೆಯ ನಡುವೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಲೀಲೋತ್ಸವ ಸಾಂಪ್ರದಾಯಿಕವಾಗಿಯೇ ವಿಜೃಂಭಣೆಯಿಂದ ನಡೆಯಿತು.

ಮಳೆ ನಡುವೆಯೇ ಚಿನ್ನದ ರಥದಲ್ಲಿ ಶ್ರೀಕೃಷ್ಣನ ಮೃತ್ತಿಕಾ ಮೂರ್ತಿಯ ಉತ್ಸವ ನಡೆಸಲಾಯಿತು. ಕೊರೋನಾ ನಿಯಮದ ಅನುಸಾರ ಕೃಷ್ಣ ಮಠದ ಮತ್ತು ಅಷ್ಟಮಠಗಳ ಸಿಬ್ಬಂದಿಗಳು, ಗೊಲ್ಲ ಸಮುದಾಯದವರು ಕೃಷ್ಣನ ಉತ್ಸವದಲ್ಲಿ ಸಾಂಪ್ರದಾಯಿಕವಾಗಿ ಪಾಲ್ಗೊಳ್ಳುವ ಅವಕಾಶ ಕೊಡಲಾಗಿತ್ತು.

ರಥಬೀದಿಯ ಆರು ಗೇಟುಗಳಲ್ಲೂ ಪೊಲೀಸರ ನಿಯೋಜನೆ ಇದ್ದು, ಸಾರ್ವಜನಿಕರಿಗೆ ರಥಬೀದಿ ಪ್ರವೇಶ ನಿರ್ಬಂಧ ಹೇರಲಾಗಿತ್ತು.
ಈ ಹಿಂದಿನ ಸಂಪ್ರದಾಯಕ್ಕೆ ಯಾವುದೇ ಚ್ಯುತಿ ಬಾರದ ರೀತಿಯಲ್ಲಿ ಮೊಸರು ಕುಡಿಕೆ ಉತ್ಸವ ನಡೆದಿದ್ದು ಅಷ್ಟ ಮಠಾಧೀಶರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಮಂಗಳ ವಾದ್ಯಗಳ ಜೊತೆ ಕೃಷ್ಣ ದೇವರನ್ನು ಮೆರವಣಿಗೆ ಕೊಂಡೊಯ್ಯಲಾಯಿತಾದರೂ ಸಾರ್ವಜನಿಕರಿಗೆ ಉತ್ಸವದಲ್ಲಿ ಪಾಲ್ಗೊಳ್ಳಲು ಪೋಲಿಸರು ಅವಕಾಶ ನಿರಾಕರಿಸಿದ್ದರು.

ಅಷ್ಟಮಿಯ ಪ್ರಮುಖ ಆಕರ್ಷಣೆಯಾದ ವೇಷಗಳು ಈ ಬಾರಿ ಉತ್ಸವದಲ್ಲಿ ಕಂಡು ಬರಲಿಲ್ಲ. ಉತ್ಸವದ ಬಳಿಕ ಮಧ್ವ ಸರೋವರದಲ್ಲಿ ಮೃತ್ತಿಕಾ ವಿಗ್ರಹದ ವಿಸರ್ಜನೆ ನಡೆಸಲಾಯಿತು

ಶುಕ್ರವಾರದಂದು ಶ್ರೀ ಕೃಷ್ಣಮಠದಲ್ಲಿ ಪಾರಂಪರಿಕ ಸಂಪ್ರದಾಯಗಳಂತೆ ವಿಟ್ಲಪಿಂಡಿ ಉತ್ಸವ ನಡೆಯಿತು. ಕೋವಿಡ್ ನಿಯಮಾವಳಿಯಂತೆ ಭಕ್ತರಿಗೆ ರಥಬೀದಿಗೆ ಪ್ರವೇಶಕ್ಕೆ ಅವಕಾಶವಿರಲಿಲ್ಲ. ಮಠದ ವೈದಿಕರು, ಗೊಲ್ಲರು, ಸಿಬ್ಬಂದಿಗಳು ಮಾತ್ರ ಸರಳವಾಗಿ ಸಾಂಪ್ರದಾಯಿಕವಾಗಿ ಆಚರಣೆ ನಡೆಸಿದರು.

ಪರ್ಯಾಯ ಅದಮಾರು ಮಠಾಧೀಶರು ಕಡಗೋಲು ಕೃಷ್ಣನ ಮೂರ್ತಿಯನ್ನು ಚಿನ್ನದ ರಥದಲ್ಲಿಟ್ಟು ಪ್ರದಕ್ಷಿಣೆ ತರುವಾಗ ಮಠದ ಗೊಲ್ಲರು ಮೊಸರುಕುಡಿಕೆಗಳನ್ನು ಒಡೆಯುತ್ತಾ ಸಾಗಿದರು.

ಒಟ್ಟಿನಲ್ಲಿ ಈ ಬಾರಿ ವಿಟ್ಲಪಿಂಡಿ ಸಂಪ್ರದಾಯಬದ್ಧವಾಗಿ ನೆರವೇರಿದ್ದು ಸರಳವಾಗಿ ನಡೆಯಿತು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago