ಉಡುಪಿ: ಒಂದೆಡೆ ಕೊರೋನಾದಿಂದಾಗಿ ಒಂದಷ್ಟು ನಿಯಮಗಳು. ಮತ್ತೊಂದೆಡೆ ಎರಡು ದಿನಗಳಿಂದ ಸುರಿಯುತ್ತಿರುವ ಬಾರೀ ಮಳೆಯ ನಡುವೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಲೀಲೋತ್ಸವ ಸಾಂಪ್ರದಾಯಿಕವಾಗಿಯೇ ವಿಜೃಂಭಣೆಯಿಂದ ನಡೆಯಿತು.
ಮಳೆ ನಡುವೆಯೇ ಚಿನ್ನದ ರಥದಲ್ಲಿ ಶ್ರೀಕೃಷ್ಣನ ಮೃತ್ತಿಕಾ ಮೂರ್ತಿಯ ಉತ್ಸವ ನಡೆಸಲಾಯಿತು. ಕೊರೋನಾ ನಿಯಮದ ಅನುಸಾರ ಕೃಷ್ಣ ಮಠದ ಮತ್ತು ಅಷ್ಟಮಠಗಳ ಸಿಬ್ಬಂದಿಗಳು, ಗೊಲ್ಲ ಸಮುದಾಯದವರು ಕೃಷ್ಣನ ಉತ್ಸವದಲ್ಲಿ ಸಾಂಪ್ರದಾಯಿಕವಾಗಿ ಪಾಲ್ಗೊಳ್ಳುವ ಅವಕಾಶ ಕೊಡಲಾಗಿತ್ತು.
ರಥಬೀದಿಯ ಆರು ಗೇಟುಗಳಲ್ಲೂ ಪೊಲೀಸರ ನಿಯೋಜನೆ ಇದ್ದು, ಸಾರ್ವಜನಿಕರಿಗೆ ರಥಬೀದಿ ಪ್ರವೇಶ ನಿರ್ಬಂಧ ಹೇರಲಾಗಿತ್ತು.
ಈ ಹಿಂದಿನ ಸಂಪ್ರದಾಯಕ್ಕೆ ಯಾವುದೇ ಚ್ಯುತಿ ಬಾರದ ರೀತಿಯಲ್ಲಿ ಮೊಸರು ಕುಡಿಕೆ ಉತ್ಸವ ನಡೆದಿದ್ದು ಅಷ್ಟ ಮಠಾಧೀಶರು ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಮಂಗಳ ವಾದ್ಯಗಳ ಜೊತೆ ಕೃಷ್ಣ ದೇವರನ್ನು ಮೆರವಣಿಗೆ ಕೊಂಡೊಯ್ಯಲಾಯಿತಾದರೂ ಸಾರ್ವಜನಿಕರಿಗೆ ಉತ್ಸವದಲ್ಲಿ ಪಾಲ್ಗೊಳ್ಳಲು ಪೋಲಿಸರು ಅವಕಾಶ ನಿರಾಕರಿಸಿದ್ದರು.
ಅಷ್ಟಮಿಯ ಪ್ರಮುಖ ಆಕರ್ಷಣೆಯಾದ ವೇಷಗಳು ಈ ಬಾರಿ ಉತ್ಸವದಲ್ಲಿ ಕಂಡು ಬರಲಿಲ್ಲ. ಉತ್ಸವದ ಬಳಿಕ ಮಧ್ವ ಸರೋವರದಲ್ಲಿ ಮೃತ್ತಿಕಾ ವಿಗ್ರಹದ ವಿಸರ್ಜನೆ ನಡೆಸಲಾಯಿತು
ಶುಕ್ರವಾರದಂದು ಶ್ರೀ ಕೃಷ್ಣಮಠದಲ್ಲಿ ಪಾರಂಪರಿಕ ಸಂಪ್ರದಾಯಗಳಂತೆ ವಿಟ್ಲಪಿಂಡಿ ಉತ್ಸವ ನಡೆಯಿತು. ಕೋವಿಡ್ ನಿಯಮಾವಳಿಯಂತೆ ಭಕ್ತರಿಗೆ ರಥಬೀದಿಗೆ ಪ್ರವೇಶಕ್ಕೆ ಅವಕಾಶವಿರಲಿಲ್ಲ. ಮಠದ ವೈದಿಕರು, ಗೊಲ್ಲರು, ಸಿಬ್ಬಂದಿಗಳು ಮಾತ್ರ ಸರಳವಾಗಿ ಸಾಂಪ್ರದಾಯಿಕವಾಗಿ ಆಚರಣೆ ನಡೆಸಿದರು.
ಪರ್ಯಾಯ ಅದಮಾರು ಮಠಾಧೀಶರು ಕಡಗೋಲು ಕೃಷ್ಣನ ಮೂರ್ತಿಯನ್ನು ಚಿನ್ನದ ರಥದಲ್ಲಿಟ್ಟು ಪ್ರದಕ್ಷಿಣೆ ತರುವಾಗ ಮಠದ ಗೊಲ್ಲರು ಮೊಸರುಕುಡಿಕೆಗಳನ್ನು ಒಡೆಯುತ್ತಾ ಸಾಗಿದರು.
ಒಟ್ಟಿನಲ್ಲಿ ಈ ಬಾರಿ ವಿಟ್ಲಪಿಂಡಿ ಸಂಪ್ರದಾಯಬದ್ಧವಾಗಿ ನೆರವೇರಿದ್ದು ಸರಳವಾಗಿ ನಡೆಯಿತು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…