Featured

ಉಡುಪಿ : ಕೊರೊನಾ ಹೇಳಿಕೊಟ್ಟ ಸ್ವಾವಲಂಬಿ ಪಾಠ ನಿರಂತರ ಜೀವನದಲ್ಲಿ ಪಾಲಿಸೋಣ : ಈಶಪ್ರೀಯ ತೀರ್ಥ ಸ್ವಾಮೀಜಿ – Vishwanews24

ಕೋವಿಡ್-19 ಎರಡು ವರ್ಷ ಸಾಕಷ್ಟು ಪಾಠ ಕಲಿಸಿದೆ..

ನಮ್ಮ ಊರಿನ ಸಂಸ್ಕೃತಿ ಉಳಿಯಲು ನಾವೇ ಉದ್ಯೋಗ ಸೃಷ್ಟಿ ಮಾಡಬೇಕು..

ಯಾವುದೋ ನಾಡಿಗೆ ಹೋಗುವ ಬದಲು ಇಲ್ಲೇ ಇದ್ದು ಉದ್ಯೋಗ ಮಾಡಿಕೊಂಡು ಇರಬೇಕು..

ಉಡುಪಿ: ಯಾವುದೋ ಊರು, ಯಾವುದೋ ನಾಡಿಗೆ ಹೋಗುವ ಬದಲು ಇಲ್ಲೇ ಇದ್ದು ಉದ್ಯೋಗ ಮಾಡಿಕೊಂಡು ಇರಬೇಕು ಎಂದು ಉಡುಪಿ ಪರ್ಯಾಯ ಮಠಾಧೀಶ ಈಶಪ್ರೀಯ ತೀರ್ಥ ಸ್ವಾಮೀಜಿ ಹೇಳಿದರು.

ಎರಡು ವರ್ಷದ ಪರ್ಯಾಯ ಪೂಜಾಧಿಕಾರ ಬಿಟ್ಟುಕೊಡಲು ಒಂದು ವಾರ ಬಾಕಿಯಿದ್ದು, ಈ ಕುರಿತು ಕೃಷ್ಣ ಮಠದಲ್ಲಿ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಸ್ವಾಮೀಜಿ ಮಾತನಾಡಿದ್ದು, ನಮ್ಮ ಊರಿನ ಸಂಸ್ಕೃತಿ ಉಳಿಯಲು ನಾವೇ ಉದ್ಯೋಗ ಸೃಷ್ಟಿ ಮಾಡಬೇಕು. ಯಾವುದೋ ಊರು, ಯಾವುದೋ ನಾಡಿಗೆ ಹೋಗುವ ಬದಲು ಇಲ್ಲೇ ಇದ್ದು ಉದ್ಯೋಗ ಮಾಡಿಕೊಂಡು ಇರಬೇಕು. ಕುಟುಂಬ ಬಳಗದ ಜೊತೆ ಯುವ ಜನಾಂಗ ಇರಬೇಕಾದ ಅನಿವಾರ್ಯತೆ ಇದೆ ಎಂದರು.

ಕೋವಿಡ್-19 ಎರಡು ವರ್ಷ ಸಾಕಷ್ಟು ಪಾಠ ಕಲಿಸಿದೆ. ಕೊರೊನಾ ಹೇಳಿಕೊಟ್ಟ ಸ್ವಾವಲಂಬಿ ಪಾಠ ನಿರಂತರ ಜೀವನದಲ್ಲಿ ಪಾಲಿಸೋಣ. ನಮ್ಮ ಊರು, ನಮ್ಮ ಜನರ ಕಾಳಜಿ ವಹಿಸೋಣ ಎಂದು ಸಂದೇಶ ನೀಡಿದರು.

ಕೃಷ್ಣ ಮಠದ ಆವರಣ ಬದಲಾವಣೆ ಮಾಡಿದ್ದೇವೆ. ಶುಚಿತ್ವ ಪ್ಲ್ಯಾಸ್ಟಿಕ್ ಬಳಕೆ ಕಡಿಮೆ ಮಾಡುವ ಬಗ್ಗೆ ಅರಿವು ಮೂಡಿಸಿದ್ದೇವೆ. ಆ ನಿಟ್ಟಿನಲ್ಲಿ ಎರಡು ವರ್ಷ ಪ್ರಯತ್ನ ಮಾಡಿದ್ದೇವೆ. ಜನರಲ್ಲಿ ಸಾಕಷ್ಟು ಬದಲಾವಣೆ ನೋಡಿದ್ದೇವೆ. ತಮ್ಮ ಜೀವನದಲ್ಲಿ ಅನುಷ್ಠಾನ ಮಾಡಿಕೊಂಡಿದ್ದೇವೆ ಎಂದರು.

ಮನುಷ್ಯ ಜೀವನದಲ್ಲಿ ಯಾತ್ರೆ ಮಾಡುವ ಸಂಸ್ಕೃತಿ ಬೆಳೆಸಬೇಕು. ಹೊರಗಿನದ್ದು, ನೋಡಿ ಉತ್ತಮವಾದದನ್ನು ತೆಗೆದುಕೊಂಡು ನಮ್ಮತನ ಉಳಿಸುವ ಅಗತ್ಯ ಇದೆ. ಅದಮಾರು ಮಠದ ಎರಡು ವರ್ಷದ ಪರ್ಯಾಯ ಸಂದರ್ಭದಲ್ಲಿ ಮಾಧ್ಯಮ ಚೆನ್ನಾಗಿ ಕೆಲಸ ಮಾಡಿದೆ. ಮಠದ ಅಭಿಪ್ರಾಯ ಜನಕ್ಕೆ ಮುಟ್ಟಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದರು.

ಎರಡು ವರುಷಗಳ ಹಿಂದೆ ಪರ್ಯಾಯ ಪೀಠ ಏರುವ ಸಂದರ್ಭದಲ್ಲಿ ಯಾವುದೇ ಸಂಕಲ್ಪ ಮಾಡಿರಲಿಲ್ಲ. ಕಾಲ ಕಾಲಕ್ಕೆ ಆಗಬೇಕಾದ ಕೆಲಸ ಮಾಡಿದ್ದೇವೆ. ಎಲ್ಲವೂ ಕೃಷ್ಣನ ಪಾದಕ್ಕೆ ಸಲ್ಲಿಕೆಯಾಗಿದೆ ಎಂದರು.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

3 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

5 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

5 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

6 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

6 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

6 hours ago