ಉಡುಪಿ: ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏ 10-ರಿಂದ 20 ರವರೆಗೆ ರಾಜ್ಯದ 8 ನಗರಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ವರೆಗೆ ಜಾರಿಗೆ ಗೊಳಿಸಿರುವ ಕೊರೋನಾ ಕರ್ಪ್ಯೂ ಉಡುಪಿ ನಗರ ಹಾಗೂ ಮಣಿಪಾಲದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ಮಾಡಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ರಾಜ್ಯ ಸರಕಾರ ಉಡುಪಿ ಮತ್ತು ಮತ್ತು ಮಣಿಪಾಲದಲ್ಲಿ ಕೊರೋನಾ ಕರ್ಫ್ಯೂ ಹೇರಿದ್ದು ಎರಡು ನಗರದಲ್ಲಿ ಕೂಡ ಶನಿವಾರದಿಂದ ಬಿಗಿ ಪೊಲೀಸ್ ಬಂದೊಬಸ್ತ್ ಹಾಕಲಾಗುವುದು. ನಗರದ ಪ್ರಮುಖ ಜಂಕ್ಷನ್ ನಲ್ಲಿ ಚೆಕ್ ಪೋಸ್ಟ್ ಹಾಕುವುದರೊಂದಿಗೆ ಮಣಿಪಾಲ ನಗರದಲ್ಲಿ ನೈಟ್ ರೌಂಡ್ಸ್ ಹೆಚ್ಚಿಸುವುದರೊಂದಿಗೆ ಉಡುಪಿಯ ಪ್ರವಾಸಿ ತಾಣಗಳ ಮೇಲೂ ವಿಶೇಷ ನಿಗಾ ಇಡಲಾಗುತ್ತದೆ ಎಂದರು.
ಕೊರೋನಾ ಕರ್ಫ್ಯೂ ಹಿನ್ನಲೆಯಲ್ಲಿ ಡಿಎಸ್ ಪಿ ರಾಂಕ್ ಅಧಿಕಾರಿಯನ್ನು ನೋಡೆಲ್ ಆಪೀಸರ್ ಆಗಿ ನೇಮಕ ಮಾಡಲಿದ್ದು ಆ ನೋಡೆಲ್ ಆಫೀಸರ್ ಗೆ ಕೊರೋನಾ ಕರ್ಫ್ಯೂ ಜವಾಬ್ದಾರಿ ನೀಡಲಾಗುವುದು. ಅಲ್ಲದೆ ಎರಡು ನಗರದ ಹೋಟೆಲ್, ರೆಸ್ಟೋರೆಂಟ್ ಕ್ಲಬ್ ಪಬ್ ಸಮಯ ನಿಗದಿ ಮಾಡಲಿದ್ದು, ಮಾಸ್ಕ್, ಸಾಮಾಜಿಕ ಅಂತರ ಕಡೆ ವಿಶೇಷ ಗಮನ ಕೊಡಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿ ಜೊತೆ ಚರ್ಚೆ ಮಾಡಿ ಎರಡು ಜಿಲ್ಲೆಯ ನಿಯಮ ರೂಪಿಸಲಾಗುವುದು ಎಂದು ಅವರು ತಿಳಿಸಿದರು.
ಮಂಗಳೂರು : ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ , ಓರ್ವ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ -Vishwanews24
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…