Featured

ಉಡುಪಿ :  ಕೊರೋನಾ ನಿಯಂತ್ರಣಕ್ಕೆ ಅಗತ್ಯಕ್ರಮ ವಹಿಸಿ : ಸಚಿವ ವಿ. ಸುನಿಲ್ ಕುಮಾರ್ -Vishwanews24

ಉಡುಪಿ :  ಕೊರೋನಾ ನಿಯಂತ್ರಣಕ್ಕೆ ಅಗತ್ಯಕ್ರಮ ವಹಿಸಿ : ಸಚಿವ ವಿ. ಸುನಿಲ್ ಕುಮಾರ್ -Vishwanews24

ಉಡುಪಿ : ಜಿಲ್ಲೆಯಲ್ಲಿ ಹೆಚ್ಚು ಕೊರೋನಾ ಪರೀಕ್ಷೆಗಳನ್ನು ಮಾಡಿಸುವುದರ ಜೊತೆಗೆ ಸೋಂಕಿತರನ್ನು ಗುರುತಿಸಿ ಪ್ರತ್ಯೇಕಿಸಿ ಸೂಕ್ತ ಚಿಕಿತ್ಸೆ ನೀಡುವುದರೊಂದಿಗೆ ಕೊರೋನಾ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಜಿಲ್ಲಾ ಪಂಚಾಯತ್‌ನ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಕೊರೋನಾ ನಿಯಂತ್ರಣ ಹಾಗೂ ಅಮೃತ್ ಗ್ರಾಮ ಪಂಚಾಯತ್ ಯೋಜನೆಯ ಗ್ರಾಮ ಪಂಚಾಯತ್ ಆಯ್ಕೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಕನಿಷ್ಠ ಪ್ರತಿದಿನ 8 ಸಾವಿರ ಕೋವಿಡ್ ಪರೀಕ್ಷೆಯ ಗುರಿಯನ್ನಿಟ್ಟುಕೊಂಡು ಪರೀಕ್ಷೆ ಮಾಡಬೇಕು ಎಂದ ಅವರು ಕಳೆದ ವಾರದಿಂದ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ 1.4 ರಷ್ಟಿದ್ದು ಅದನ್ನು 1 ರ ಒಳಗೆ ತರುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಈಗಾಗಲೇ 11.33ಲಕ್ಷಗಳಷ್ಟು ಜನರಿಗೆ ಕೋವಿಡ್ ನಿರೋಧಕ ಮೊದಲ ಡೋಸ್ ನೀಡಲಾಗಿದ್ದು, 3ಲಕ್ಷಕ್ಕೂ ಅಧಿಕ ಜನರಿಗೆ ಎರಡನೇ ಡೋಸ್ ಲಸಿಕೆ ಪ್ರಗತಿ ಆಗಿದೆ. ಸೆಪ್ಟಂಬರ್ ಅಂತ್ಯದ ಒಳಗೆ ಜಿಲ್ಲೆಯಲ್ಲಿ ಶೇ. 100 ರಷ್ಟು ಜನರಿಗೆ ಲಸಿಕೆ ನೀಡಬೇಕು. ಹೆಚ್ಚಾಗಿ ಗ್ರಾಮೀಣ ಭಾಗದ ಜನರು ಬಾಕಿ ಇರುವುದರಿಂದ ಪ್ರತಿ ದಿನ 5 ಗ್ರಾಮ ಪಂಚಾಯತ್‌ಗಳನ್ನು ಗುರುತಿಸಿ ಪೂರ್ಣ ಪ್ರಮಾಣದಲ್ಲಿ ಲಸಿಕೆ ನೀಡಬೇಕು ಎಂದರು.

ತಾಲ್ಲೂಕು ಮಟ್ಟದಲ್ಲಿ ನೂತನ ಆಕ್ಸಿಜನ್ ತಯಾರಿಕಾ ಘಟಕಗಳ ನಿರ್ಮಾಣ ಕಾಮಗಾರಿಯನ್ನು ಈಗಾಗಲೇ ಪೂರ್ಣಗೊಂಡು ಉದ್ಘಾಟನೆ ಆಗಬೇಕಿತ್ತು ಆದರೆ ವಿಳಂಬ ಆಗಿರು ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಅವರು ಸಂಬAದಿಸಿದ ಅಧಿಕಾರಿಗಳನ್ನು ಕರೆಸಿ ಮೇಲ್ವಿಚಾರಣೆ ಮಾಡಿ 10 ದಿನದೊಳಗೆ ಉದ್ಘಾಟನೆ ಆಗುವಂತೆ ನೊಡಿಕೊಳ್ಳುಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹರಡುತಿರುವ ಬಗ್ಗೆ ಕೇಳಿಬರುತ್ತಿದೆ. ಜಿಲ್ಲೆಗೆ ಶಿಕ್ಷಣ ಹಾಗೂ ಉದ್ಯೋಗ ಹರಸಿ ಬರುವ ಕೇರಳ ರಾಜ್ಯದವರು ಬಂದಾಗ ಸರಕಾರ ಸೂಚಿಸಿರುವ ಮಾರ್ಗ ಸೂಚಿಗಳನ್ನು ತಪ್ಪದೆ ಕೈಗೊಳ್ಳಬೇಕು. ಈಗಾಗಲೇ ಇಲ್ಲಿಗೆ ವಿದ್ಯಾರ್ಥಿಗಳು ಬಂದಿದ್ದಾರೆ. ಅವರುಗಳಿಗೆ ಮತ್ತೊಮ್ಮೆ ಕೋವಿಡ್ ಪರೀಕ್ಷೆಗೆ ಅಳವಡಿಸುವುದು ಸೂಕ್ತ ಎಂದರು.

75 ನೇ ಸ್ವಾತಂತ್ರö್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಜಿಲ್ಲೆಯ ಆಯ್ದ 18 ಗ್ರಾಮ ಪಂಚಾಯತಿಗಳಲ್ಲಿ ಸಮಗ್ರ ಮೂಲ ಭೂತ ಸೌಕರ್ಯ ಅಭಿವೃದ್ಧಿ ಗಾಗಿ ಪೋಷಿಸಿರುವಂತೆ ಅಮೃತ ಗ್ರಾಮ ಪಂಚಾಯತ್ ಯೋಜನೆಯನ್ನು ಅನುಷ್ಠಾನಗೆಳಿಸಲು ಸರ್ಕಾರ ತೀರ್ಮಾನಿಸಿದೆ ಎಂದರು.

ಈ ಗ್ರಾಮ ಪಂಚಾಯತಿಗಳಲ್ಲಿ ಬೀದಿದೀಪ, ಕುಡಿಯುವ ನೀರಿನ ನಳಿ ಸಂಪರ್ಕ, ಘನತ್ಯಾಜ್ಯ ವಿಂಗಡನೆ ಹಾಗೂ ವಿಲೇವಾರಿ, ಪಂಚಾಯತ್ ಗಳಿಗೆ ಸೌರ ವಿದ್ಯುತ್ ಅಳವಡಿಕೆ, ಉದ್ಯಾನವನ, ಲೈಬ್ರರಿ ಡಿಜಿಟಲೀಕರಣ ಶಾಲೆ ಹಾಗೂ ಅಂಗನವಾಡಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳ ಕೆರೆ, ಕಲ್ಯಾಣಿಗಳ ಪುನಶ್ಚೇತನ ಸೇರಿದಂತೆ ಇತರ ಮೂಲ ಭೂತ ಸೌಕರ್ಯಗಳ ಅಭಿವೃದ್ಧಿ ಪಡಿಸುವುದು ಉದ್ದೇಶವಾಗಿದೆ ಎಂದರು.

ಈ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಲ್ಲಿ ಅಂತಹ ಗ್ರಾಮ ಪಂಚಾಯತ್ ಗಳಿಗೆ ಸರ್ಕಾರವು ತಲಾ 25 ಲಕ್ಷ ಅನಿರ್ಭಂದಿತ ಅನುದಾನ ವನ್ನು ನೀಡಲಾಗುತ್ತದೆ ಎಂದ ಅವರು ಪ್ರಸಕ್ತ ಹಾಲಿ ಚಾಲ್ತಿಯಲ್ಲಿರುವ ಯೋಜನೆಗಳ ಅನುದಾನವನ್ನು ಒಗ್ಗೂಡಿಸುವ ಮೂಲಕ ಅಭಿವೃದ್ಧಿಗೊಳಿಸಬೇಕು ಎಂದರು.

ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಕೊರೋನಾ ನಿರೋಧಕ ಲಸಿಕೆ ಪಡೆದವರಿಗೂ ಸೋಂಕು ಹರಡಿರುವ ಬಗ್ಗೆ ಕೇಳಿಬರುತ್ತಿದೆ. ಈ ಬಗ್ಗೆ ನಿಖರ ಮಾಹಿತಿಗಳನ್ನು ಸಂಗ್ರಹಿಸಿ ಸೋಂಕಿನ ತೀವ್ರತೆ ಬಗ್ಗೆ ದಾಖಲೆಗಳನ್ನು ಇಡುವುದು ಒಳಿತು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿ.ಪಂ. ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ, ಕಾಪು ಶಾಸ ಲಾಲಾಜಿ ಆರ್ ಮೆಂಡನ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago