Featured

ಉಡುಪಿ: ಕೊರೋನಾ ಮಾರ್ಗಸೂಚಿಯಂತೆ ಜಿಲ್ಲೆಯಾದ್ಯಂತ ಕ್ರೈಸ್ತ ಭಾಂಧವರಿಂದ ಮೊಂತಿ ಫೆಸ್ತ್‌ ಆಚರಣೆ -Vishwanews24

ಉಡುಪಿ: ಕೊರೋನಾ ಮಾರ್ಗಸೂಚಿಯಂತೆ ಜಿಲ್ಲೆಯಾದ್ಯಂತ ಕ್ರೈಸ್ತ ಭಾಂಧವರಿಂದ ಮೊಂತಿ ಫೆಸ್ತ್‌ ಆಚರಣೆ -Vishwanews24

 

ಉಡುಪಿ: ಕೊರೋನಾ ಭೀತಿಯ ನಡುವೆ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ತ್ ಅನ್ನು ಜಿಲ್ಲೆಯಾದ್ಯಂತ ಕ್ರೆಸ್ತ ಸಮುದಾಯದ ಜನರು ಭಕ್ತಿ ಭಾವದಿಂದ ಸರಳ ರೀತಿಯಲ್ಲಿ ಬುಧವಾರ ಆಚರಿಸಿದರು.

ಕೋರೊನಾ ಹಿನ್ನಲೆಯಲ್ಲಿ ಸರಕಾರದ ಮಾರ್ಗಸೂಚಿಯಂತೆ ಸಾರ್ವಜನಿಕವಾಗಿ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿ ಮೆರವಣಿಗೆಯಲ್ಲಿ ತರುವುದನ್ನು ನೀಷೇಧಿಸಿದ್ದು ಧರ್ಮಗುರುಗಳು ಚರ್ಚಿನಲ್ಲಿಯೇ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು.

ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಭತ್ತದ ತೆನೆಯನ್ನು ಆರ್ಶಿವದಿಸಿ ಪವಿತ್ರ ಬಲಿಪೂಜೆಯಲ್ಲಿ ಪಾಲ್ಗೊಂಡರು. ಪವಿತ್ರ ಬಲಿಪೂಜೆಯಲ್ಲಿ ಧರ್ಮಗುರುಗುಳು ಕುಟುಂಬ ಜೀವನ ಹಾಗೂ ಸಮಾಜದಲ್ಲಿ ಮಹಿಳೆಯ ಸ್ಥಾನಮಾನದ ಕುರಿತು ಪ್ರವಚನ ನೀಡಿದರು.

ಉಡುಪಿ ಕ್ರೆಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ ಅವರು ಮೂಡುಬೆಳ್ಳೆ ಸಮೀಪದ ಕುಂತಲನಗರ ಸಂತ ಅಂತೋನಿಯವರ ಚರ್ಚಿನಲ್ಲಿ ಹಬ್ಬದ ಬಲಿಪೂಜೆ ಅರ್ಪಿಸಿ ಹೊಸ ತೆನೆಗಳನ್ನು ಆಶೀರ್ವದಿಸಿ ಹಬ್ಬದ ಸಂದೇಶ ನೀಡಿದರು.

ಉಡುಪಿಯ ಶೋಕ ಮಾತಾ ಇಗರ್ಜಿಯಲ್ಲಿ ಜರುಗಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಚರ್ಚಿನ ಪ್ರಧಾನ ಧರ್ಮಗುರು ವಂ. ಚಾರ್ಲ್ಸ್‌ ಮಿನೇಜಸ್‌ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಲ್ಯಾಣಪುರ ಮಿಲಾಗ್ರಿಸ್‌ ಕ್ಯಾಥೆಡ್ರಲ್‌ ನಲ್ಲಿ ವಂ|ವಲೇರಿಯನ್‌ ಮೆಂಡೊನ್ಸಾ, ಶಿರ್ವ ಆರೋಗ್ಯ ಮಾತಾ ಇಗರ್ಜಿಯಲ್ಲಿ ವಂ|ಡೆನಿಸ್‌ ಡೆಸಾ, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ವಂ|ಸ್ಟಾನಿ ತಾವ್ರೋ, ಕಾರ್ಕಳದ ಅತ್ತೂರು ಸಂತ ಲಾರೆನ್ಸ್‌ ಬಾಸಿಲಿಕಾದಲ್ಲಿ ವಂ|ಆಲ್ಬನ್‌ ಡಿಸೋಜಾ ನೇತೃತ್ವದಲ್ಲಿ ಹಬ್ಬದ ಪ್ರಯುಕ್ತ ಬಲಿಪೂಜೆ ನಡೆದವು. ಇದಲ್ಲದೆ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಸಹ ಹಬ್ಬದ ಬಲಿಪೂಜೆಯನ್ನು ಆಯಾಚರ್ಚುಗಳ ಧರ್ಮಗುರುಗಳ ನೇತೃತ್ವದಲ್ಲಿ ನಡೆದವು.

ಬಲಿಪೂಜೆಯ ಬಳಿಕ ಧರ್ಮಗುರುಗಳು ಪ್ರತಿ ಕುಟುಂಬಕ್ಕೆ ಆಶೀರ್ವದಿಸಿದ ಹೊಸ ಭತ್ತದ ತೆನೆಯನ್ನು ನೀಡಿ ಹರಸಿದರು. ಇದೇ ವೇಳೆ ಚಿಕ್ಕ ಮಕ್ಕಳಿಗೆ ಸಿಹಿತಿಂಡಿ, ಕಬ್ಬುಗಳನ್ನು ಸಹ ವಿತರಿಸಲಾಯಿತು. ಇಗರ್ಜಿಯಿಂದ ಭಕ್ತಿಯಿಂದ ಕೊಂಡು ಬಂದ ಭತ್ತದ ತೆನೆಯನ್ನು ಕುಟುಂಬದ ಹಿರಿಯರು ಮನೆಗೆ ತಂದು ದೇವರ ಪೀಠದ ಮೇಲಿಟ್ಟು ಪ್ರಾರ್ಥನೆ ಸಲ್ಲಿಸಿ, ಹೊಸ ಭತ್ತದ ತೆನೆಗಳನ್ನು ಸುಲಿದು ಕುಟುಂಬದ ಸದಸ್ಯರೊಂದಿಗೆ ಪಾಯಸ ಅಥವಾ ಹಾಲಿನೊಂದಿಗೆ ಸೇವಿಸಿದರು. ಅಲ್ಲದೆ ಮನೆಗಳಲ್ಲಿ ಸಂಪೂರ್ಣ ಸಸ್ಯಹಾರದ ಭೋಜನವನ್ನು ತಯಾರಿಸಿ ಕುಟುಂಬದ ಎಲ್ಲಾ ಸದಸ್ಯರು ನೆಲದ ಮೇಲೆ ಕುಳಿತು ಬಾಳೆ ಎಲೆಯಲ್ಲಿ ಸೇವಿಸಿದರು.

Vishwa News 24

Recent Posts

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…

9 minutes ago

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…

14 minutes ago

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…

19 minutes ago

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ – vishwanews24

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್…

32 minutes ago

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ – vishwanews24

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ ಸುಳ್ಯ :ಅರಂತೋಡಿನ ದೇವರಕೊಲ್ಲಿ ಬಳಿ…

37 minutes ago

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ – vishwanews24

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯಾ ಮನೆಗೆ ಆರ್‌ಸ್ಎಸ್…

46 minutes ago