ಉಡುಪಿ: ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಲವ್ ಜಿಹಾದ್ ಕುರಿತಂತೆ ಮೂಡಿ ಬಂದ ಈ ಸಿನಿಮಾದ ಬಿಡುಗಡೆಗೆ ಪಶ್ಚಿಮ ಬಂಗಾಳದಲ್ಲಿ ನಿಷೇಧ ಹೇರಿರುವ ಘಟನೆಯೂ ನಡೆದಿದೆ. ಅಲ್ಲದೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ ನೀಡಿರುವ ಬೆಳವಣಿಗೆಯೂ ನಡೆದಿದೆ. ಸಾಕಷ್ಟು ಟೀಕೆ, ಆರೋಪಗಳ ನಡುವೆ ಈ ಸಿನಿಮಾ ಮಾತ್ರ ಗಲ್ಲಾ ಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದೆ.
ಹಿಂದುಪರ ಸಂಘಟನೆಗಳು ಸೇರಿದಂತೆ ಅನೇಕರು ಒಂದು ಬಾರಿ ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ. ಮತಾಂತರ ಪಿಡುಗಿನ ಬಗ್ಗೆ ಅರಿತುಕೊಳ್ಳಿ ಎಂಬ ಸಂದೇಶ ರವಾನಿಸಿದ್ದಾರೆ. ಇದೀಗ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಗ್ಗೆ ಪ್ರಚಾರ ಮಾಡಲಾಗುತ್ತಿದೆ.
‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ
ಕೊಲ್ಲೂರು ಕ್ಷೇತ್ರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಕೇರಳ ರಾಜ್ಯದಿಂದ ಭಕ್ತರು ಮೂಕಾಂಬಿಕಾ ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಹೀಗಾಗಿ ದೇವಾಲಯದ ದ್ವಾರ ಹಾಗೂ ಆವರಣ ಭಾಗದಲ್ಲಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಸಿನಿಮಾದ ಕುರಿತಾದ ಬ್ಯಾನರ್ ಅಳವಡಿಸಿದ್ದಾರೆ. ‘ಮಲಯಾಳಿ ಭಕ್ತರಿಗೆ ಸ್ವಾಗತ, ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ದಿ ಕೇರಳ ಸ್ಟೋರಿ ನೋಡಿ’ ಎಂದು ಬ್ಯಾನರ್ನಲ್ಲಿ ಬರೆಯಲಾಗಿದೆ.
ಸದ್ಯ ಆಂಗ್ಲ ಭಾಷೆಯಲ್ಲಿ ಅಳವಡಿಸಿರುವ ಈ ಬ್ಯಾನರ್ ಕೊಲ್ಲೂರು ದೇವಸ್ಥಾನಕ್ಕೆ ಬರುವ ಭಕ್ತರ ಗಮನ ಸೆಳೆಯುತ್ತಿದೆ. ವಿನೋದ್ ಕೊಲ್ಲೂರು, ವಿಜಯ ಬಳಗಾರ್, ಸಂತೋಷ್ ಭಟ್, ಪ್ರಕಾಶ್ ಹಳ್ಳಿ ಬೇರು, ಹರೀಶ್ ಶೆಟ್ಟಿ ನೇತೃತ್ವದಲ್ಲಿ ಈ ಬ್ಯಾನರ್ ಅಳವಡಿಕೆ ಮಾಡಲಾಗಿದೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …