Featured

ಉಡುಪಿ : ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ – Vishwanews24

ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ

ಉಡುಪಿ: ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಲವ್ ಜಿಹಾದ್ ಕುರಿತಂತೆ ಮೂಡಿ ಬಂದ ಈ ಸಿನಿಮಾದ ಬಿಡುಗಡೆಗೆ ಪಶ್ಚಿಮ ಬಂಗಾಳದಲ್ಲಿ ನಿಷೇಧ ಹೇರಿರುವ ಘಟನೆಯೂ ನಡೆದಿದೆ. ಅಲ್ಲದೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ ನೀಡಿರುವ ಬೆಳವಣಿಗೆಯೂ ನಡೆದಿದೆ. ಸಾಕಷ್ಟು ಟೀಕೆ, ಆರೋಪಗಳ ನಡುವೆ ಈ ಸಿನಿಮಾ ಮಾತ್ರ ಗಲ್ಲಾ ಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದೆ.

ಹಿಂದುಪರ ಸಂಘಟನೆಗಳು ಸೇರಿದಂತೆ ಅನೇಕರು ಒಂದು ಬಾರಿ ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ. ಮತಾಂತರ ಪಿಡುಗಿನ ಬಗ್ಗೆ ಅರಿತುಕೊಳ್ಳಿ ಎಂಬ ಸಂದೇಶ ರವಾನಿಸಿದ್ದಾರೆ. ಇದೀಗ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಗ್ಗೆ ಪ್ರಚಾರ ಮಾಡಲಾಗುತ್ತಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ
ಕೊಲ್ಲೂರು ಕ್ಷೇತ್ರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಕೇರಳ ರಾಜ್ಯದಿಂದ ಭಕ್ತರು ಮೂಕಾಂಬಿಕಾ ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಹೀಗಾಗಿ ದೇವಾಲಯದ ದ್ವಾರ ಹಾಗೂ ಆವರಣ ಭಾಗದಲ್ಲಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಸಿನಿಮಾದ ಕುರಿತಾದ ಬ್ಯಾನರ್ ಅಳವಡಿಸಿದ್ದಾರೆ. ‘ಮಲಯಾಳಿ ಭಕ್ತರಿಗೆ ಸ್ವಾಗತ, ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ದಿ ಕೇರಳ ಸ್ಟೋರಿ ನೋಡಿ’ ಎಂದು ಬ್ಯಾನರ್​ನಲ್ಲಿ ಬರೆಯಲಾಗಿದೆ.

ಸದ್ಯ ಆಂಗ್ಲ ಭಾಷೆಯಲ್ಲಿ ಅಳವಡಿಸಿರುವ ಈ ಬ್ಯಾನರ್ ಕೊಲ್ಲೂರು ದೇವಸ್ಥಾನಕ್ಕೆ ಬರುವ ಭಕ್ತರ ಗಮನ ಸೆಳೆಯುತ್ತಿದೆ. ವಿನೋದ್ ಕೊಲ್ಲೂರು, ವಿಜಯ ಬಳಗಾರ್, ಸಂತೋಷ್ ಭಟ್, ಪ್ರಕಾಶ್ ಹಳ್ಳಿ ಬೇರು, ಹರೀಶ್ ಶೆಟ್ಟಿ ನೇತೃತ್ವದಲ್ಲಿ ಈ ಬ್ಯಾನರ್ ಅಳವಡಿಕೆ ಮಾಡಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

3 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

3 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago