ಉಡುಪಿ : ದುಡ್ಡು ಮಾಡೋಕೆ ಈ ಜನ ಅದೆಂಥ ಅಡ್ಡದಾರಿಗಳನ್ನು ಹಿಡಿಯುತ್ತಾರೆ ಅಂದ್ರೆ ದೇವರನ್ನು ಕೂಡ ಬಿಡಕ್ಕಿಲ್ಲ ಎಂಬ ಮಾತು ಸತ್ಯವಾಗಿದೆ. ಉಡುಪಿಯ ಪುರಾಣ ಪ್ರಸಿದ್ದ ಕೊಲ್ಲೂರು ಮೂಕಾಂಬಿಕೆಯ ಹೆಸರಿನಲ್ಲಿ ನಕಲಿ ಟ್ರಸ್ಟ್ ಶುರುವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ಹರಿದಾಡುತ್ತಿದೆ.
ದೇಗುಲಕ್ಕೆ ದೇಣಿಗೆ ಹರಕೆ ಸಲ್ಲಿಸುವ ಭಕ್ತರು ಇದಕ್ಕೆ ಹಣ ಕಳಿಸಿದ್ದಾರಂತೆ. ಭಕ್ತ ಹಣ ಕಳಿಸಿರುವ ಬಗ್ಗೆ ದೇಗುಲಕ್ಕೆ ಇ-ಮೇಲ್ ಮಾಡಿದಾಗ ಈ ಅಕೌಂಟ್ಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಅಂತಾ ಸ್ಪಷ್ಟನೆ ಬಂದಿದೆ. ಹೀಗಾಗಿ ಭಕ್ತರಾಗಿರುವ ರಾಘವೇಂದ್ರ ಹಾಗೂ ಧನಂಜಯ್ ಈ ಟ್ರಸ್ಟ್ ವಿರುದ್ಧ ಈಗ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕೇರಳದಲ್ಲಿ ಈ ಟ್ರಸ್ಟ್ ನೋಂದಣಿಯಾಗಿರೋದು ಗೊತ್ತಾಗಿದೆ. ದೇಗುಲದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲಾಗುತ್ತಿದೆ. 2022ರಿಂದ ಈ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಗೆ ಮೋಸ ಮಾಡುತ್ತಿರುವುದು ತಿಳಿದುಬಂದಿದೆ. ಕೋಟಿಗ ಟ್ಟಲೆ ದುಡ್ಡು ಈ ಟ್ರಸ್ಟ್ ಲಪಟಾಯಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಈ ಬಗ್ಗೆ ಮುಜರಾಯಿ ಇಲಾಖೆ ಸೂಕ್ತ ತನಿಖೆ ಮಾಡಬೇಕೆಂದು ಭಕ್ತರು ಒತ್ತಾಯಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…