ಉಡುಪಿ : ದುಡ್ಡು ಮಾಡೋಕೆ ಈ ಜನ ಅದೆಂಥ ಅಡ್ಡದಾರಿಗಳನ್ನು ಹಿಡಿಯುತ್ತಾರೆ ಅಂದ್ರೆ ದೇವರನ್ನು ಕೂಡ ಬಿಡಕ್ಕಿಲ್ಲ ಎಂಬ ಮಾತು ಸತ್ಯವಾಗಿದೆ. ಉಡುಪಿಯ ಪುರಾಣ ಪ್ರಸಿದ್ದ ಕೊಲ್ಲೂರು ಮೂಕಾಂಬಿಕೆಯ ಹೆಸರಿನಲ್ಲಿ ನಕಲಿ ಟ್ರಸ್ಟ್ ಶುರುವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ಹರಿದಾಡುತ್ತಿದೆ.
ದೇಗುಲಕ್ಕೆ ದೇಣಿಗೆ ಹರಕೆ ಸಲ್ಲಿಸುವ ಭಕ್ತರು ಇದಕ್ಕೆ ಹಣ ಕಳಿಸಿದ್ದಾರಂತೆ. ಭಕ್ತ ಹಣ ಕಳಿಸಿರುವ ಬಗ್ಗೆ ದೇಗುಲಕ್ಕೆ ಇ-ಮೇಲ್ ಮಾಡಿದಾಗ ಈ ಅಕೌಂಟ್ಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಅಂತಾ ಸ್ಪಷ್ಟನೆ ಬಂದಿದೆ. ಹೀಗಾಗಿ ಭಕ್ತರಾಗಿರುವ ರಾಘವೇಂದ್ರ ಹಾಗೂ ಧನಂಜಯ್ ಈ ಟ್ರಸ್ಟ್ ವಿರುದ್ಧ ಈಗ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕೇರಳದಲ್ಲಿ ಈ ಟ್ರಸ್ಟ್ ನೋಂದಣಿಯಾಗಿರೋದು ಗೊತ್ತಾಗಿದೆ. ದೇಗುಲದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲಾಗುತ್ತಿದೆ. 2022ರಿಂದ ಈ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಗೆ ಮೋಸ ಮಾಡುತ್ತಿರುವುದು ತಿಳಿದುಬಂದಿದೆ. ಕೋಟಿಗ ಟ್ಟಲೆ ದುಡ್ಡು ಈ ಟ್ರಸ್ಟ್ ಲಪಟಾಯಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಈ ಬಗ್ಗೆ ಮುಜರಾಯಿ ಇಲಾಖೆ ಸೂಕ್ತ ತನಿಖೆ ಮಾಡಬೇಕೆಂದು ಭಕ್ತರು ಒತ್ತಾಯಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…