ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೆಸಿಒಸಿಎ) ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ನೀಡಿದ ಸುಳಿವಿನ ಆಧಾರ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಾದ ಮನೋಜ್ ಕುಲಾಲ್ ಅಲಿಯಾಸ್ ಮನೋಜ್ ಕೋಡಿಕೆರೆ ಮತ್ತು ಚೇತನ್ ಅಲಿಯಾಸ್ ಚೇತು ಪಡೀಲ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾಗಿದ್ದು, ಹಲವು ತಿಂಗಳಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದರು.
ಇದನ್ನೂ ಓದಿ:
ಆರೋಪಿಗಳ ಬಗ್ಗೆ ಮಾಹಿತಿ ಕೋರಿ ಪೊಲೀಸರು ಈ ಹಿಂದೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದರು ಮತ್ತು ವಿಶ್ವಾಸಾರ್ಹ ಸುಳಿವುಗಳನ್ನು ನೀಡಿದವರಿಗೆ 50,000 ರೂ. ನಗದು ಬಹುಮಾನವನ್ನು ಘೋಷಿಸಿದ್ದರು.
ಪೊಲೀಸರು ಚೇತನ್ ಅಲಿಯಾಸ್ ಚೇತು ಪಡೀಲ್ ನನ್ನು 2026ರ ಎಪ್ರಿಲ್ 30ರಂದು ಬಂಧಿಸಿ, ಜೂನ್ 11ರಂದು ಮನೋಜ್ ಕುಲಾಲ್ ಅಲಿಯಾಸ್ ಮನೋಜ್ ಕೊಡಿಕೆರೆಯನ್ನು ಬಂಧಿಸಿದ್ದರು. ಆರೋಪಿಗಳ ಬಂಧನಕ್ಕೆ ಕಾರಣವಾದ ಮಾಹಿತಿದಾರರಿಗೆ ಬಹುಮಾನದ ಮೊತ್ತವನ್ನು ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಇದನ್ನೂ ಓದಿ:
ನಾಗರಿಕರು ನೀಡಿದ ಸಹಕಾರವನ್ನು ಶ್ಲಾಘಿಸಿದ ಪೊಲೀಸರು, ಸಮಾಜದಲ್ಲಿ ಅಪರಾಧಗಳನ್ನು ತಡೆಗಟ್ಟಲು ಮತ್ತು ಪತ್ತೆಹಚ್ಚಲು ಸಹಾಯ ಮಾಡಲು ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿಯನ್ನು ಹಂಚಿಕೊಳ್ಳುವುದನ್ನು ಮುಂದುವರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್…
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ…
ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ ಬೆಂಗಳೂರು: ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆಗೆ…
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್…
260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ…
ಆರೋಗ್ಯವಾಗಿದ್ದೇನೆ, ಆತಂಕ ಬೇಡ: ದೊಡ್ಡಣ್ಣ ಪ್ರತಿಕ್ರಿಯೆ ಬೆಂಗಳೂರು: ಹಿರಿಯ ಚಿತ್ರನಟ ದೊಡ್ಡಣ್ಣ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ…