ಉಡುಪಿ :ನ್ಯಾಯಾಲಯದ ಮೆಟ್ಟಿಲು ಹತ್ತಲಾಗದೆ ರಿಕ್ಷಾದಲ್ಲಿ ಕುಳಿತ 80 ವರ್ಷದ ವೃದ್ದೆಯ ಬಳಿಗೆ ನ್ಯಾಯಾಧೀಶರು ತೆರಳಿ, ಪ್ರಕರಣದ ಹೇಳಿಕೆ ಆಲಿಸಿರುವ ಅಪರೂಪದ ಘಟನೆ ಉಡುಪಿಯಲ್ಲಿ ನಡೆದಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೆಶನದ ಮೇರೆಗೆ ಜೂನ್ 25ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ನ್ನು ಆಯೋಜಿಸಲಾಗಿತ್ತು.
2011ರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕ್ ಅದಾಲತ್ನಲ್ಲಿ ಭಾಗಿಯಾಗಲು 80 ವರ್ಷದ ವೃದ್ದೆ ದೇವಕಿ ಶೆಡ್ತಿ ಆಟೋ ರಿಕ್ಷಾದಲ್ಲಿ ನ್ಯಾಯಾಲಯಕ್ಕೆ ತೆರಳಿದ್ದರು. ಈ ವೇಳೆ, ಆಕೆಗೆ ನ್ಯಾಯಾಲಯದ ಮೆಟ್ಟಿಲು ಹತ್ತಲಾಗದ ಕಾರಣ, ತಮ್ಮ ಮಗಳು ಜಯಂತಿಯವರಿಗೆ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ಅಧಿಕಾರವನ್ನು ನೀಡಿದ್ದರು.
ಜಿಪಿಎ ನೀಡಿದ್ದರಿಂದ ವೃದ್ದೆ ದೇವಕಿ ಶೆಡ್ತಿ ಪರವಾಗಿ ಅವರ ಮಗಳು ವಾದವನ್ನು ಆಲಿಸಲು ನ್ಯಾಯಾಲಯದ ಒಳಗೆ ಹೋಗಿದ್ದರು. ವಿಷಯ ತಿಳಿದ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಜೀತು ಆರ್ ಎಸ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಶರ್ಮಿಳಾ ಎಸ್ ಮತ್ತು ನ್ಯಾಯವಾದಿ ಮಿತೇಶ್ ಶೆಟ್ಟಿ ಹಾಗೂ ಎರಡು ಕಡೆಯ ವಕೀಲರುಗಳು, ದೇವಕಿ ಶೆಡ್ತಿ ಕುಳಿತಿದ್ದ ರಿಕ್ಷಾದ ಬಳಿ ಬಂದು ಅವರ ಹೇಳಿಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ಪ್ರಕರಣವನ್ನು ಇತ್ಯರ್ಥಗೊಳಿಸಿದ್ದಾರೆ.
ನ್ಯಾಯಾಧೀಶರ ಸರಳತೆಗೆ ರಾಜ್ಯದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.
ಈ ಬಾರಿಯ ಅದಾಲತ್ನಲ್ಲಿ ಒಂದೇ ದಿನ ಒಟ್ಟು 30,773 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…