Featured

ಉಡುಪಿ : ಕೋರ್ಟ್​ ಮೆಟ್ಟಿಲೇರಲಾಗದ ವೃದ್ಧೆಯ ಬಳಿ ಬಂದು ವಿಚಾರಣೆ ನಡೆಸಿದ ನ್ಯಾಯಾಧೀಶರು – Vishwanews24

ಉಡುಪಿ : ಕೋರ್ಟ್​ ಮೆಟ್ಟಿಲೇರಲಾಗದ ವೃದ್ಧೆಯ ಬಳಿ ಬಂದು ವಿಚಾರಣೆ ನಡೆಸಿದ ನ್ಯಾಯಾಧೀಶರು

ಉಡುಪಿ :ನ್ಯಾಯಾಲಯದ ಮೆಟ್ಟಿಲು ಹತ್ತಲಾಗದೆ ರಿಕ್ಷಾದಲ್ಲಿ ಕುಳಿತ 80 ವರ್ಷದ ವೃದ್ದೆಯ ಬಳಿಗೆ ನ್ಯಾಯಾಧೀಶರು ತೆರಳಿ, ಪ್ರಕರಣದ ಹೇಳಿಕೆ ಆಲಿಸಿರುವ ಅಪರೂಪದ ಘಟನೆ ಉಡುಪಿಯಲ್ಲಿ ನಡೆದಿದೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೆಶನದ ಮೇರೆಗೆ ಜೂನ್ 25ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ನ್ನು ಆಯೋಜಿಸಲಾಗಿತ್ತು.

2011ರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕ್ ಅದಾಲತ್‌ನಲ್ಲಿ ಭಾಗಿಯಾಗಲು 80 ವರ್ಷದ ವೃದ್ದೆ ದೇವಕಿ ಶೆಡ್ತಿ ಆಟೋ ರಿಕ್ಷಾದಲ್ಲಿ ನ್ಯಾಯಾಲಯಕ್ಕೆ ತೆರಳಿದ್ದರು. ಈ ವೇಳೆ, ಆಕೆಗೆ ನ್ಯಾಯಾಲಯದ ಮೆಟ್ಟಿಲು ಹತ್ತಲಾಗದ ಕಾರಣ, ತಮ್ಮ ಮಗಳು ಜಯಂತಿಯವರಿಗೆ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ಅಧಿಕಾರವನ್ನು ನೀಡಿದ್ದರು.

ಜಿಪಿಎ ನೀಡಿದ್ದರಿಂದ ವೃದ್ದೆ ದೇವಕಿ ಶೆಡ್ತಿ ಪರವಾಗಿ ಅವರ ಮಗಳು ವಾದವನ್ನು ಆಲಿಸಲು ನ್ಯಾಯಾಲಯದ ಒಳಗೆ ಹೋಗಿದ್ದರು. ವಿಷಯ ತಿಳಿದ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಜೀತು ಆರ್ ಎಸ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಶರ್ಮಿಳಾ ಎಸ್ ಮತ್ತು ನ್ಯಾಯವಾದಿ ಮಿತೇಶ್ ಶೆಟ್ಟಿ ಹಾಗೂ ಎರಡು ಕಡೆಯ ವಕೀಲರುಗಳು, ದೇವಕಿ ಶೆಡ್ತಿ ಕುಳಿತಿದ್ದ ರಿಕ್ಷಾದ ಬಳಿ ಬಂದು ಅವರ ಹೇಳಿಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ಪ್ರಕರಣವನ್ನು ಇತ್ಯರ್ಥಗೊಳಿಸಿದ್ದಾರೆ.

ನ್ಯಾಯಾಧೀಶರ ಸರಳತೆಗೆ ರಾಜ್ಯದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

ಈ ಬಾರಿಯ ಅದಾಲತ್‌ನಲ್ಲಿ ಒಂದೇ ದಿನ ಒಟ್ಟು 30,773 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಲಾಗಿದೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

6 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

6 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

7 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

22 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

22 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

22 hours ago