Featured

ಉಡುಪಿ : ಕೋರ್ಟ್​ ಮೆಟ್ಟಿಲೇರಲಾಗದ ವೃದ್ಧೆಯ ಬಳಿ ಬಂದು ವಿಚಾರಣೆ ನಡೆಸಿದ ನ್ಯಾಯಾಧೀಶರು – Vishwanews24

ಉಡುಪಿ : ಕೋರ್ಟ್​ ಮೆಟ್ಟಿಲೇರಲಾಗದ ವೃದ್ಧೆಯ ಬಳಿ ಬಂದು ವಿಚಾರಣೆ ನಡೆಸಿದ ನ್ಯಾಯಾಧೀಶರು

ಉಡುಪಿ :ನ್ಯಾಯಾಲಯದ ಮೆಟ್ಟಿಲು ಹತ್ತಲಾಗದೆ ರಿಕ್ಷಾದಲ್ಲಿ ಕುಳಿತ 80 ವರ್ಷದ ವೃದ್ದೆಯ ಬಳಿಗೆ ನ್ಯಾಯಾಧೀಶರು ತೆರಳಿ, ಪ್ರಕರಣದ ಹೇಳಿಕೆ ಆಲಿಸಿರುವ ಅಪರೂಪದ ಘಟನೆ ಉಡುಪಿಯಲ್ಲಿ ನಡೆದಿದೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೆಶನದ ಮೇರೆಗೆ ಜೂನ್ 25ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ನ್ನು ಆಯೋಜಿಸಲಾಗಿತ್ತು.

2011ರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕ್ ಅದಾಲತ್‌ನಲ್ಲಿ ಭಾಗಿಯಾಗಲು 80 ವರ್ಷದ ವೃದ್ದೆ ದೇವಕಿ ಶೆಡ್ತಿ ಆಟೋ ರಿಕ್ಷಾದಲ್ಲಿ ನ್ಯಾಯಾಲಯಕ್ಕೆ ತೆರಳಿದ್ದರು. ಈ ವೇಳೆ, ಆಕೆಗೆ ನ್ಯಾಯಾಲಯದ ಮೆಟ್ಟಿಲು ಹತ್ತಲಾಗದ ಕಾರಣ, ತಮ್ಮ ಮಗಳು ಜಯಂತಿಯವರಿಗೆ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ಅಧಿಕಾರವನ್ನು ನೀಡಿದ್ದರು.

ಜಿಪಿಎ ನೀಡಿದ್ದರಿಂದ ವೃದ್ದೆ ದೇವಕಿ ಶೆಡ್ತಿ ಪರವಾಗಿ ಅವರ ಮಗಳು ವಾದವನ್ನು ಆಲಿಸಲು ನ್ಯಾಯಾಲಯದ ಒಳಗೆ ಹೋಗಿದ್ದರು. ವಿಷಯ ತಿಳಿದ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಜೀತು ಆರ್ ಎಸ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಶರ್ಮಿಳಾ ಎಸ್ ಮತ್ತು ನ್ಯಾಯವಾದಿ ಮಿತೇಶ್ ಶೆಟ್ಟಿ ಹಾಗೂ ಎರಡು ಕಡೆಯ ವಕೀಲರುಗಳು, ದೇವಕಿ ಶೆಡ್ತಿ ಕುಳಿತಿದ್ದ ರಿಕ್ಷಾದ ಬಳಿ ಬಂದು ಅವರ ಹೇಳಿಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ಪ್ರಕರಣವನ್ನು ಇತ್ಯರ್ಥಗೊಳಿಸಿದ್ದಾರೆ.

ನ್ಯಾಯಾಧೀಶರ ಸರಳತೆಗೆ ರಾಜ್ಯದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

ಈ ಬಾರಿಯ ಅದಾಲತ್‌ನಲ್ಲಿ ಒಂದೇ ದಿನ ಒಟ್ಟು 30,773 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಲಾಗಿದೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

3 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

3 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

3 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

3 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

3 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

3 days ago