Featured

ಉಡುಪಿ :  ಕೋಳ್ಯೂರು ವೈಭವದ ಕೃತಜ್ಞತಾ ಸಭೆ – Vishwanews24

ಉಡುಪಿ :  ಕೋಳ್ಯೂರು ವೈಭವದ ಕೃತಜ್ಞತಾ ಸಭೆ – Vishwanews24

ಉಡುಪಿ : ಒಂದು ತಿಂಗಳ ಪರ್ಯಂತ ಜರುಗಿದ ಕೋಳ್ಯೂರು ವೈಭವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಅರ್ಥಪೂರ್ಣವಾಗಿ ಸಂಯೋಜಿಸಿದ ಬಗ್ಗೆ ಕೋಳ್ಯೂರು ರಾಮಚಂದ್ರ ರಾಯರ ಮಕ್ಕಳು ನವೆಂಬರ್ ೧೫ ರಂದು ಯಕ್ಷಗಾನ ಕಲಾರಂಗದ ಕಚೇರಿಗೆ ಆಗಮಿಸಿ ಪದಾಧಿಕಾರಿಗಳಿಗೆ ಧನ್ಯವಾದ ಸಮರ್ಪಿಸಿದರು.

ಕೋಳ್ಯೂರರ ಪುತ್ರ ಕೆ. ಶ್ರೀಧರ ರಾವ್ ಹಾಗೂ ಪುತ್ರಿ ಶ್ರೀಮತಿ ಮೀರಾರವರು ಮಾತನಾಡಿ ತಮ್ಮ ತಂದೆಯವರ ನವತ್ಯಬ್ದ ಕಾರ್ಯಕ್ರಮವು ಯಕ್ಷಗಾನ ಚರಿತ್ರೆಯ ಪುಟಗಳಲ್ಲಿ ದಾಖಲಾಗುವಂತೆ ರೂಪಿಸಿ ಕಾರ್ಯಗತಗೊಳಿಸಿದ ಯಕ್ಷಗಾನ ಕಲಾರಂಗಕ್ಕೆ ನಮ್ಮ ಕುಟುಂಬ ಸದಾ ಋಣಿಯಾಗಿದೆ ಎಂದು ಹೃದಯತುಂಬಿ ಕೃತಜ್ಞತೆಯ ಮಾತುಗಳನ್ನಾಡಿದರು.

ಕೋಳ್ಯೂರು ಕುಟುಂಬದ ಪರವಾಗಿ ಸಂಸ್ಥೆಗೆ ಸಮ್ಮಾನಪತ್ರ ನೀಡಿ ಅಭಿನಂದಿಸಿದರು. ವೀಡಿಯೋ ಎಡಿಟಿಂಗ್ ಕಾರ್ಯವನ್ನು ಶ್ರದ್ಧೆಯಿಂದ ನಿರ್ವಹಿದ ಮೋಹನ್ ದಾಸ್ ಪೈ ಇವರನ್ನು ಗೌರವಿಸಲಾಯಿತು. ಕೋಳ್ಯೂರರವರ ಮೊಮ್ಮಗ ನಟರಾಜ್‍ರವರು ಯಕ್ಷಗಾನ ಕಲಾರಂಗದ ವೆಬ್‍ಸೈಟ್ ವಿನ್ಯಾಸ ಮಾಡುವ ಹೊಣೆ ತನ್ನದೆಂದು ಭರವಸೆ ನೀಡಿದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್ ಎಲ್ಲರಿಗೂ ಶಾಲು ಸ್ಮರಣಿಕೆ ನೀಡಿ ಗೌರವಿಸಿದರು. ಸಂಸ್ಥೆಯ ಚಟುವಟಿಕೆಯ ಬಗ್ಗೆ ವಿಶೇಷ ಆಸ್ಥೆಯನ್ನು ಹೊಂದಿದ ಮಹಾನ್ ಕಲಾವಿದ ಕೋಳ್ಯೂರರ ತೊಂಭತ್ತರ ಸಂಭ್ರಮದ ಕಾರ್ಯಕ್ರಮದ ಸಂಯೋಜನೆಯಿ0ದ ಸಂಸ್ಥೆಯ ಘನತೆ ವೃದ್ಧಿಯಾಗಿದೆ ಎಂದು ಕಾರ್ಯದರ್ಶಿ ಮುರಳಿ ಕಡೆಕಾರ್ ತನ್ನ ಪ್ರಾಸ್ತಾವಿಕ ಮಾತುಗಳಲ್ಲಿ ನುಡಿದರು. ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಧನ್ಯವಾದ ಸಮರ್ಪಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago