Featured

ಉಡುಪಿ :  ಕೋಳ್ಯೂರು ವೈಭವದ ಕೃತಜ್ಞತಾ ಸಭೆ – Vishwanews24

ಉಡುಪಿ :  ಕೋಳ್ಯೂರು ವೈಭವದ ಕೃತಜ್ಞತಾ ಸಭೆ – Vishwanews24

ಉಡುಪಿ : ಒಂದು ತಿಂಗಳ ಪರ್ಯಂತ ಜರುಗಿದ ಕೋಳ್ಯೂರು ವೈಭವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಅರ್ಥಪೂರ್ಣವಾಗಿ ಸಂಯೋಜಿಸಿದ ಬಗ್ಗೆ ಕೋಳ್ಯೂರು ರಾಮಚಂದ್ರ ರಾಯರ ಮಕ್ಕಳು ನವೆಂಬರ್ ೧೫ ರಂದು ಯಕ್ಷಗಾನ ಕಲಾರಂಗದ ಕಚೇರಿಗೆ ಆಗಮಿಸಿ ಪದಾಧಿಕಾರಿಗಳಿಗೆ ಧನ್ಯವಾದ ಸಮರ್ಪಿಸಿದರು.

ಕೋಳ್ಯೂರರ ಪುತ್ರ ಕೆ. ಶ್ರೀಧರ ರಾವ್ ಹಾಗೂ ಪುತ್ರಿ ಶ್ರೀಮತಿ ಮೀರಾರವರು ಮಾತನಾಡಿ ತಮ್ಮ ತಂದೆಯವರ ನವತ್ಯಬ್ದ ಕಾರ್ಯಕ್ರಮವು ಯಕ್ಷಗಾನ ಚರಿತ್ರೆಯ ಪುಟಗಳಲ್ಲಿ ದಾಖಲಾಗುವಂತೆ ರೂಪಿಸಿ ಕಾರ್ಯಗತಗೊಳಿಸಿದ ಯಕ್ಷಗಾನ ಕಲಾರಂಗಕ್ಕೆ ನಮ್ಮ ಕುಟುಂಬ ಸದಾ ಋಣಿಯಾಗಿದೆ ಎಂದು ಹೃದಯತುಂಬಿ ಕೃತಜ್ಞತೆಯ ಮಾತುಗಳನ್ನಾಡಿದರು.

ಕೋಳ್ಯೂರು ಕುಟುಂಬದ ಪರವಾಗಿ ಸಂಸ್ಥೆಗೆ ಸಮ್ಮಾನಪತ್ರ ನೀಡಿ ಅಭಿನಂದಿಸಿದರು. ವೀಡಿಯೋ ಎಡಿಟಿಂಗ್ ಕಾರ್ಯವನ್ನು ಶ್ರದ್ಧೆಯಿಂದ ನಿರ್ವಹಿದ ಮೋಹನ್ ದಾಸ್ ಪೈ ಇವರನ್ನು ಗೌರವಿಸಲಾಯಿತು. ಕೋಳ್ಯೂರರವರ ಮೊಮ್ಮಗ ನಟರಾಜ್‍ರವರು ಯಕ್ಷಗಾನ ಕಲಾರಂಗದ ವೆಬ್‍ಸೈಟ್ ವಿನ್ಯಾಸ ಮಾಡುವ ಹೊಣೆ ತನ್ನದೆಂದು ಭರವಸೆ ನೀಡಿದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್ ಎಲ್ಲರಿಗೂ ಶಾಲು ಸ್ಮರಣಿಕೆ ನೀಡಿ ಗೌರವಿಸಿದರು. ಸಂಸ್ಥೆಯ ಚಟುವಟಿಕೆಯ ಬಗ್ಗೆ ವಿಶೇಷ ಆಸ್ಥೆಯನ್ನು ಹೊಂದಿದ ಮಹಾನ್ ಕಲಾವಿದ ಕೋಳ್ಯೂರರ ತೊಂಭತ್ತರ ಸಂಭ್ರಮದ ಕಾರ್ಯಕ್ರಮದ ಸಂಯೋಜನೆಯಿ0ದ ಸಂಸ್ಥೆಯ ಘನತೆ ವೃದ್ಧಿಯಾಗಿದೆ ಎಂದು ಕಾರ್ಯದರ್ಶಿ ಮುರಳಿ ಕಡೆಕಾರ್ ತನ್ನ ಪ್ರಾಸ್ತಾವಿಕ ಮಾತುಗಳಲ್ಲಿ ನುಡಿದರು. ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಧನ್ಯವಾದ ಸಮರ್ಪಿಸಿದರು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

1 day ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

1 day ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 day ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 day ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 day ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 day ago