Featured

ಉಡುಪಿ : ಕೋಳ್ಯೂರು ವೈಭವ ಸಮಾಪನ ಸಮಾರಂಭ – Vishwanews24

ಉಡುಪಿ : ಕೋಳ್ಯೂರು ವೈಭವ ಸಮಾಪನ ಸಮಾರಂಭ – Vishwanews24

ಉಡುಪಿ : ಯಕ್ಷಗಾನದ ಶ್ರೇಷ್ಠ ಸ್ತ್ರೀ ವೇಷಧಾರಿ ಕೋಳ್ಯೂರು ರಾಮಚಂದ್ರ ರಾಯರಿಗೆ ನವತ್ಯಬ್ದ ಸಮಾರಂಭ ಅಕ್ಟೋಬರ್ ೧೪, ೨೦೨೧ರಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಉದ್ಘಾಟನೆಗೊ0ಡಿದ್ದು ಸಮಾಪನ ಸಮಾರಂಭವು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ನವೆಂಬರ್ ೧೪, ೨೦೨೧ ಭಾನುವಾರದಂದು ಸ0ಪನ್ನಗೊಳ್ಳಲಿದೆ.

ಅ0ದು ಪೂರ್ವಾಹ್ನ ೯.೦೦ ಗಂಟೆಗೆ ಐಶ್ವರ್ಯಾ ಮಣಿಕರ್ಣಿಕಾ ಇವರಿಂದ ವೀಣಾವಾದನ. ಬೆಳಗ್ಗೆ ೧೦ ಗಂಟೆಗೆ ಸೋದೆ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರ ದಿವ್ಯೋಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭ. ಅಭ್ಯಾಗತರಾಗಿ ಪೆರವೋಡಿ ನಾರಾಯಣ ಹಾಸ್ಯಗಾರ, ಡಾ. ಪಿ. ಎಸ್. ಎಡಪಡಿತ್ತಾಯ, ಡಾ. ಎಚ್. ಎಸ್. ಬಲ್ಲಾಳ್ ಪಾಲ್ಗೊಳ್ಳಲಿರುವರು. ೧೧ ಗಂಟೆಗೆ ಆಚಾರ್ಯ ಡಾ. ಪಪ್ಪು ವೇಣುಗೋಪಾಲ ರಾವ್ ಅವರಿಂದ ವಿದ್ವತ್
ಗೋಷ್ಠಿ. ೧೨ ಗಂಟೆಗೆ ಸಿರಿಬಾಗಿಲು ರಾಮಕೃಷ್ಣ ಮಯ್ಯ, ಸೂರ್ಯನಾರಾಯಣ ಭಟ್ ಪಿ. ಎಸ್., ಭೋಜರಾಜ ವಾಮಂಜೂರು, ಕೃಷ್ಣಪ್ರಕಾಶ ಉಳಿತ್ತಾಯ, ಶಶಿಕಾಂತ ಶೆಟ್ಟಿ, ಅಮ್ಮುಂಜೆ ಮೋಹನ ಕುಮಾರ್ ಮತ್ತು ಪಟ್ಲ ಸತೀಶ್ ಶೆಟ್ಟಿ ಇವರಿಂದ ಕೋಳ್ಯೂರರಿಗೆ ನುಡಿ ಗೌರವ. ಅಪರಾಹ್ನ ೨ ಗಂಟೆಗೆ ರಾಜೇ0ದ್ರ ಕಾರಂತ ಹಾಗೂ ಮಂಜುಳಾ ಸುಬ್ರಹ್ಮಣ್ಯ ಇವರಿಂದ ಆತ್ಮಕಥನ ವಾಚನ. ೨.೩೦ ರಿಂದ ಉಭಯ ತಿಟ್ಟುಗಳ ೯೦ ಕ್ಕೂ ಮೇಲ್ಪಟ್ಟು ಸ್ತಿçà ವೇಷಧಾರಿಗಳಿಗೆ ಕೋಳ್ಯೂರು ರಾಮಚಂದ್ರ ರಾವ್ ಅವರಿಂದ ಸಂಮಾನ. ಅಪರಾಹ್ನ ೪.೦೦ ಗಂಟೆಗೆ ಪರ್ಯಾಯ ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ಡಾ. ಕೋಳ್ಯೂರು ರಾಮಚಂದ್ರ ರಾಯರಿಗೆ ಅಭಿನಂದನೆ. ಡಾ. ಪದ್ಮಾ ಸುಬ್ರಹ್ಮಣ್ಯಮ್ ಮತ್ತು ಡಾ. ಕಲಾಮಂಡಲ ಗೋಪಿ
ಇವರು ಆನ್‌ಲೈನ್ ನಲ್ಲಿ ಶುಭಾಶಂಸನೆ ಗೈಯ್ಯಲಿರುವರು.

ಎ. ಪಿ. ಮಾಲತಿ, ಅರುವ ಕೊರಗಪ್ಪ ಶೆಟ್ಟಿ, ಮಂಟಪ ಪ್ರಭಾಕರ ಉಪಾಧ್ಯ, ಲಕ್ಷ್ಮೀಶ ತೋಳ್ಪಾಡಿ ಯವರು ಅಭಿನಂದನಾ ಮಾತುಗಳನ್ನಾಡಲಿರುವರು. ಸಂಜೆ ೬.೩೦ ರಿಂದ ಕೇರಳದ ಕಲಾಮಂಡಲಮ್ ತಂಡದಿ0ದ ಕಥಕಳಿ ಕಲಾ ಪ್ರದರ್ಶನ ಗೌರವ ಆಖ್ಯಾನ : ಕೃಷ್ಣ ಕುಚೇಲ ವೃತ್ತಮ್. ಈ ಎಲ್ಲಾ ಕಾರ್ಯಕ್ರಮಗಳಿಗೆ, ಕಲಾಸಕ್ತರಿಗೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಹಾಗೂ ಕೋಳ್ಯೂರು ಕುಟುಂಬದ ಪರವಾಗಿ ಅವರ ಪುತ್ರ ಕೆ. ಶ್ರೀಧರ ರಾವ್ ಆದರದ ಸ್ವಾಗತ ಕೋರಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago