Featured

ಉಡುಪಿ: ಕೋವಿಡ್ ಟೆಸ್ಟ್‌ಗೆ ಸಹಕರಿಸಿದರೆ ಜಿಲ್ಲೆಯಲ್ಲೂ ಶಾಲೆಗಳನ್ನು ತೆರೆಯಲು ಸಾಧ್ಯ : ಜಿಲ್ಲಾಧಿಕಾರಿ -Vishwanews24

ಉಡುಪಿ: ಕೋವಿಡ್ ಟೆಸ್ಟ್‌ಗೆ ಸಹಕರಿಸಿದರೆ ಜಿಲ್ಲೆಯಲ್ಲೂ ಶಾಲೆಗಳನ್ನು ತೆರೆಯಲು ಸಾಧ್ಯ : ಜಿಲ್ಲಾಧಿಕಾರಿ -Vishwanews24

ಉಡುಪಿ: ಜಿಲ್ಲೆಯಲ್ಲೂ ಶಾಲೆಗಳನ್ನು ಪ್ರಾರಂಭಿಸಬೇಕಾದ್ದರಿಂದ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಮಾಡಬೇಕೆಂದು ಉಡುಪಿ ಜಿಲ್ಲಾಧಿಕಾರಿ ಅಭಿಪ್ರಾಯಪಟ್ಟಿದ್ದಾರೆ.

ಈ ತಿಂಗಳ ಅಂತ್ಯಕ್ಕೆ ಕೊರೋನಾ ಪಾಸಿಟಿವಿಟಿ ಪ್ರಮಾಣ ಶೇ.2ಕ್ಕಿಂತ ಕಡಿಮೆ ತರಬೇಕೆನ್ನುವುದು ನಮ್ಮ ಗುರಿ ಇದೆ.

ಪಾಸಿಟಿವಿಟಿ ಶೇ. ಎರಡಕ್ಕಿಂತ ಕಡಿಮೆ ದಾಖಲಾದರೆ ಜಿಲ್ಲೆಯ ಎಲ್ಲಾ ಶಾಲಾ ಮಕ್ಕಳು ತಮ್ಮ ವಿದ್ಯಾರ್ಜನೆ ಮುಂದುವರಿಸಲು ಸಾಧ್ಯವಾಗುತ್ತದೆ, ಆದ್ದರಿಂದ ಜಿಲ್ಲೆ ಜನರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಿದರು.

ಕೆಲವರು ಸಭೆ ಸಮಾರಂಭಗಳನ್ನು ಜಿಲ್ಲಾಡಳಿತ ಆದೇಶ ಉಲ್ಲಂಘಿಸಿ ನಡೆಸುತ್ತಿರುವುದು ಕಂಡು ಬಂದಿರುವುದು ತಿಳಿದು ಬಂದಿದೆ. ಅಂತಹವರ ವಿರುದ್ದ ಕಠಿನ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ವ್ಯಾಕ್ಸಿನ್ ನೀಡುವುದರಲ್ಲಿ ರಾಜ್ಯದಲ್ಲಿ ಉಡುಪಿ ಎರಡನೇ ಸ್ಥಾನದಲ್ಲಿದೆ. ಸುಮಾರು 64 ಶೇ. 60 ವರ್ಷ ಮೇಲ್ಪಟ್ಟವರಿಗೆ ಸಹಿತ ಶೇ. 85 ವ್ಯಾಕ್ಸಿನ್ ನೀಡಲಾಗಿದೆ. ಇನ್ನುಳಿದ ಶೇ.15 ಜನರಿಗೆ ಜಿಲ್ಲಾಡಳಿತವೇ ಮನೆಮನೆಗೆ ಹೋಗಿ ವ್ಯಾಕ್ಸಿನ್ ನೀಡುವ ಗುರಿ ಹೊಂದಿದ್ದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಧ್ಯಮಕ್ಕೆ ಮಾಹಿತಿ ನೀಡಿದರು.

ಉಡುಪಿಗೆ ಒಂದು ವಾರದಿಂದ ಎಂಟರಿಂದ ಹತ್ತು ಸಾವಿರರೆಗೆ ವ್ಯಾಕ್ಸಿನ್ ಬರುತ್ತಿದೆ. ಕ್ರಮಬದ್ದವಾಗಿ ನೀಡುವ ವ್ಯವಸ್ಥೆ ಆಗುತ್ತಿದೆ ಎಂದರು. ಸ್ವಾಬ್ ಸಂಗ್ರಹಕ್ಕೆ ಬೇಕಾದ 65 ತಂಡಗಳು ಜಿಲ್ಲೆಯಲ್ಲಿ ಇದೆ. ಮಾತ್ರವಲ್ಲದೆ ಡಾಟಾ ಎಂಟ್ರಿಗೆ ಸಿಬ್ಬಂದಿಗಳು ಕೂಡ ಇದ್ದು ನಮ್ಮ ಜಿಲ್ಲೆಯಲ್ಲಿ ಪಾಸಿಟಿವಿಟಿ ಶೇ. 2ರ ಒಳಗೆ ತರುವ ಗುರಿ ಇದೆ ಎಂದು ತಿಳಿಸಿದರು.

 

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

7 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

17 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

17 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

17 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago