ಉಡುಪಿ: ಜಿಲ್ಲೆಯಲ್ಲೂ ಶಾಲೆಗಳನ್ನು ಪ್ರಾರಂಭಿಸಬೇಕಾದ್ದರಿಂದ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಮಾಡಬೇಕೆಂದು ಉಡುಪಿ ಜಿಲ್ಲಾಧಿಕಾರಿ ಅಭಿಪ್ರಾಯಪಟ್ಟಿದ್ದಾರೆ.
ಈ ತಿಂಗಳ ಅಂತ್ಯಕ್ಕೆ ಕೊರೋನಾ ಪಾಸಿಟಿವಿಟಿ ಪ್ರಮಾಣ ಶೇ.2ಕ್ಕಿಂತ ಕಡಿಮೆ ತರಬೇಕೆನ್ನುವುದು ನಮ್ಮ ಗುರಿ ಇದೆ.
ಪಾಸಿಟಿವಿಟಿ ಶೇ. ಎರಡಕ್ಕಿಂತ ಕಡಿಮೆ ದಾಖಲಾದರೆ ಜಿಲ್ಲೆಯ ಎಲ್ಲಾ ಶಾಲಾ ಮಕ್ಕಳು ತಮ್ಮ ವಿದ್ಯಾರ್ಜನೆ ಮುಂದುವರಿಸಲು ಸಾಧ್ಯವಾಗುತ್ತದೆ, ಆದ್ದರಿಂದ ಜಿಲ್ಲೆ ಜನರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಿದರು.
ಕೆಲವರು ಸಭೆ ಸಮಾರಂಭಗಳನ್ನು ಜಿಲ್ಲಾಡಳಿತ ಆದೇಶ ಉಲ್ಲಂಘಿಸಿ ನಡೆಸುತ್ತಿರುವುದು ಕಂಡು ಬಂದಿರುವುದು ತಿಳಿದು ಬಂದಿದೆ. ಅಂತಹವರ ವಿರುದ್ದ ಕಠಿನ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ವ್ಯಾಕ್ಸಿನ್ ನೀಡುವುದರಲ್ಲಿ ರಾಜ್ಯದಲ್ಲಿ ಉಡುಪಿ ಎರಡನೇ ಸ್ಥಾನದಲ್ಲಿದೆ. ಸುಮಾರು 64 ಶೇ. 60 ವರ್ಷ ಮೇಲ್ಪಟ್ಟವರಿಗೆ ಸಹಿತ ಶೇ. 85 ವ್ಯಾಕ್ಸಿನ್ ನೀಡಲಾಗಿದೆ. ಇನ್ನುಳಿದ ಶೇ.15 ಜನರಿಗೆ ಜಿಲ್ಲಾಡಳಿತವೇ ಮನೆಮನೆಗೆ ಹೋಗಿ ವ್ಯಾಕ್ಸಿನ್ ನೀಡುವ ಗುರಿ ಹೊಂದಿದ್ದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಧ್ಯಮಕ್ಕೆ ಮಾಹಿತಿ ನೀಡಿದರು.
ಉಡುಪಿಗೆ ಒಂದು ವಾರದಿಂದ ಎಂಟರಿಂದ ಹತ್ತು ಸಾವಿರರೆಗೆ ವ್ಯಾಕ್ಸಿನ್ ಬರುತ್ತಿದೆ. ಕ್ರಮಬದ್ದವಾಗಿ ನೀಡುವ ವ್ಯವಸ್ಥೆ ಆಗುತ್ತಿದೆ ಎಂದರು. ಸ್ವಾಬ್ ಸಂಗ್ರಹಕ್ಕೆ ಬೇಕಾದ 65 ತಂಡಗಳು ಜಿಲ್ಲೆಯಲ್ಲಿ ಇದೆ. ಮಾತ್ರವಲ್ಲದೆ ಡಾಟಾ ಎಂಟ್ರಿಗೆ ಸಿಬ್ಬಂದಿಗಳು ಕೂಡ ಇದ್ದು ನಮ್ಮ ಜಿಲ್ಲೆಯಲ್ಲಿ ಪಾಸಿಟಿವಿಟಿ ಶೇ. 2ರ ಒಳಗೆ ತರುವ ಗುರಿ ಇದೆ ಎಂದು ತಿಳಿಸಿದರು.
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…