ಉಡುಪಿ: ಜಿಲ್ಲೆಯಲ್ಲೂ ಶಾಲೆಗಳನ್ನು ಪ್ರಾರಂಭಿಸಬೇಕಾದ್ದರಿಂದ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಮಾಡಬೇಕೆಂದು ಉಡುಪಿ ಜಿಲ್ಲಾಧಿಕಾರಿ ಅಭಿಪ್ರಾಯಪಟ್ಟಿದ್ದಾರೆ.
ಈ ತಿಂಗಳ ಅಂತ್ಯಕ್ಕೆ ಕೊರೋನಾ ಪಾಸಿಟಿವಿಟಿ ಪ್ರಮಾಣ ಶೇ.2ಕ್ಕಿಂತ ಕಡಿಮೆ ತರಬೇಕೆನ್ನುವುದು ನಮ್ಮ ಗುರಿ ಇದೆ.
ಪಾಸಿಟಿವಿಟಿ ಶೇ. ಎರಡಕ್ಕಿಂತ ಕಡಿಮೆ ದಾಖಲಾದರೆ ಜಿಲ್ಲೆಯ ಎಲ್ಲಾ ಶಾಲಾ ಮಕ್ಕಳು ತಮ್ಮ ವಿದ್ಯಾರ್ಜನೆ ಮುಂದುವರಿಸಲು ಸಾಧ್ಯವಾಗುತ್ತದೆ, ಆದ್ದರಿಂದ ಜಿಲ್ಲೆ ಜನರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಿದರು.
ಕೆಲವರು ಸಭೆ ಸಮಾರಂಭಗಳನ್ನು ಜಿಲ್ಲಾಡಳಿತ ಆದೇಶ ಉಲ್ಲಂಘಿಸಿ ನಡೆಸುತ್ತಿರುವುದು ಕಂಡು ಬಂದಿರುವುದು ತಿಳಿದು ಬಂದಿದೆ. ಅಂತಹವರ ವಿರುದ್ದ ಕಠಿನ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ವ್ಯಾಕ್ಸಿನ್ ನೀಡುವುದರಲ್ಲಿ ರಾಜ್ಯದಲ್ಲಿ ಉಡುಪಿ ಎರಡನೇ ಸ್ಥಾನದಲ್ಲಿದೆ. ಸುಮಾರು 64 ಶೇ. 60 ವರ್ಷ ಮೇಲ್ಪಟ್ಟವರಿಗೆ ಸಹಿತ ಶೇ. 85 ವ್ಯಾಕ್ಸಿನ್ ನೀಡಲಾಗಿದೆ. ಇನ್ನುಳಿದ ಶೇ.15 ಜನರಿಗೆ ಜಿಲ್ಲಾಡಳಿತವೇ ಮನೆಮನೆಗೆ ಹೋಗಿ ವ್ಯಾಕ್ಸಿನ್ ನೀಡುವ ಗುರಿ ಹೊಂದಿದ್ದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಧ್ಯಮಕ್ಕೆ ಮಾಹಿತಿ ನೀಡಿದರು.
ಉಡುಪಿಗೆ ಒಂದು ವಾರದಿಂದ ಎಂಟರಿಂದ ಹತ್ತು ಸಾವಿರರೆಗೆ ವ್ಯಾಕ್ಸಿನ್ ಬರುತ್ತಿದೆ. ಕ್ರಮಬದ್ದವಾಗಿ ನೀಡುವ ವ್ಯವಸ್ಥೆ ಆಗುತ್ತಿದೆ ಎಂದರು. ಸ್ವಾಬ್ ಸಂಗ್ರಹಕ್ಕೆ ಬೇಕಾದ 65 ತಂಡಗಳು ಜಿಲ್ಲೆಯಲ್ಲಿ ಇದೆ. ಮಾತ್ರವಲ್ಲದೆ ಡಾಟಾ ಎಂಟ್ರಿಗೆ ಸಿಬ್ಬಂದಿಗಳು ಕೂಡ ಇದ್ದು ನಮ್ಮ ಜಿಲ್ಲೆಯಲ್ಲಿ ಪಾಸಿಟಿವಿಟಿ ಶೇ. 2ರ ಒಳಗೆ ತರುವ ಗುರಿ ಇದೆ ಎಂದು ತಿಳಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…