ಉಡುಪಿ : ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕೆ ಸಂಬoಧಿಸಿ ಈಗಾಗಲೇ ಕರೋನಾ ಸೋಂಕಿತರನ್ನು ಕಡ್ಡಾಯವಾಗಿ ಸಾಂಸ್ದಿಕ ಕ್ವಾರಂಟೈನ್ ಗೆ ಸ್ದಳಾಂತರ , ಸೋಂಕಿತರ ಮನೆಯನ್ನು ಸೀಲ್ ಡೌನ್ ಮಾಡುವುದು ಹಾಗೂ ಮತ್ತಿತ್ತರ ಮುಂಜಾಗೃತ ಕ್ರಮಗಳಿಗೆ ಸಂಬoಧಿಸಿ ಆದೇಶ ಹೊರಡಿಸಲಾಗಿರುತ್ತದೆ.
ಅದಾಗ್ಯೂ ಕರೋನಾ ಭಾಧಿತ ವ್ಯಕ್ತಿಗಳು ಕೋವಿಡ್ -19 ರ ನಿಯಮಗಳನ್ನು ಉಲ್ಲಂಘಿಸಿ, ನಿರಾಯಸವಾಗಿ ಓಡಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿದ್ದು, ಇದು ಜಿಲ್ಲೆಯಲ್ಲಿ ಮತ್ತಷ್ಟು ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿರುತ್ತದೆ. ಆದುದರಿಂದ ಈ ಬಗ್ಗೆ ಜಿಲ್ಲೆಯ ಜನರಲ್ಲಿ ಅರಿವು ಮೂಡಿಸಲು ಹಾಗೂ ಸಾರ್ವಜನಿಕರೇ ಸ್ವಯಂ ಕೋವಿಡ್ -19 ನ್ನು ನಿಯಂತ್ರಿಸುವಲ್ಲಿ ಜಾಗೃತರನ್ನಾಗಿಸುವ ನಿಟ್ಟಿನಲ್ಲಿ ಇನ್ನು ಮುಂದೆ ಜಿಲ್ಲೆಯಲ್ಲಿ ಕರೋನಾ ಭಾದಿತ ವ್ಯಕ್ತಿಗಳು ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿ ಓಡಾಟ ನಡೆಸುವುದು ಕಂಡುಬoದಲ್ಲಿ ಆ ಬಗ್ಗೆ ಸಾರ್ವಜನಿಕರು ಮಾಹಿತಿಯನ್ನು ಜಿಲ್ಲಾಡಳಿತದಿಂದ ಸ್ದಾಪಿಸಿರುವ ಕೋವಿಡ್ -19 ಸಹಾಯವಾಣಿಗೆ ಕರೆಮಾಡಿ ದೂರನ್ನು ಸಲ್ಲಿಸುವುದು.
ಅಲ್ಲದೇ, ಕೋವಿಡ್ ಕೇರ್ ಸೆಂಟರ್, ಹೋಮ್ ಐಸೋಲೇಶನ್ ಹಾಗೂ ಕೋವಿಡ್ -19ಗೆ ಸಂಬoಧಿಸಿದ ಇನ್ನಿತರ ಮಾಹಿತಿಯನ್ನು ಪಡೆಯಲು ಅಥವಾ ಯಾವುದಾದರು ದೂರುಗಳನ್ನು ಸಲ್ಲಿಸಲು ಸಾರ್ವಜನಿಕರು ಕೋವಿಡ್ -19 ಸಹಾಯವಾಣಿ ಸಂಖ್ಯೆ : 96639 57222 ಸೇವೆಯನ್ನು ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…