Featured

ಉಡುಪಿ  : ಕೋವಿಡ್ ಸುರಕ್ಷಾ ನಿಯಮ ಉಲ್ಲಂಘನೆ ದಂಡ ಪ್ರಕರಣ ಹೆಚ್ಚು ಮಾಡಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ  : ಕೋವಿಡ್ ಸುರಕ್ಷಾ ನಿಯಮ ಉಲ್ಲಂಘನೆ ದಂಡ ಪ್ರಕರಣ ಹೆಚ್ಚು ಮಾಡಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯು ಪ್ರಾರಂಭವಾಗುತ್ತಿದ್ದು, ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಸಹ ಸಾರ್ವಜನಿಕರು ಕೋವಿಡ್ ಸುರಕ್ಷತಾ ಕ್ರಮಗಳಾದ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರಪಾಲನೆ ಮಾಡದೇ ಇರುವುದು ಕಂಡು ಬರುತ್ತಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ.
ಅವರು ಮಂಗಳವಾರ, ಜಿಲ್ಲೆಯ ಎಲ್ಲಾ ತಹಸೀಲ್ದಾರ್ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಇಂಜಿನಿಯರ್ಗಳು, ಉಡುಪಿ ನಗರಸಭೆಯ ಪೌರಾಯುಕ್ತರು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಝೂಮ್ ಮೀಟಿಂಗ್ ಮೂಲಕ ಸಭೆ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ಸುರಕ್ಷಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಸೂಚನೆ ನೀಡಿದರು.

ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿರುವಂತೆ, ಸಾಮಾಜಿಕ ಪಾಲನೆ ಕುರಿತಂತೆ ವಿವಿಧ ಮಾಲ್ಗಳು, ಹಾಲ್ಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ನಿಗಧಿಪಡಿಸಿರುವ ಸಂಖ್ಯೆಗಿ0ತ ಹೆಚ್ಚಿನ ಸಾರ್ವಜನಿಕರು ಸೇರಿದ್ದರೆ ಸಂಬAಧಪಟ್ಟವರ ವಿರುದ್ಧ ಸುತ್ತೋಲೆಯಂತೆ ಸೂಕ್ತ ಕ್ರಮ ಕೈಗೊಳ್ಳಿ. ಸುರಕ್ಷಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ದಂಢ ವಿಧಿಸುವ ಅಧಿಕಾರವನ್ನು ವಿವಿಧ ಅಧಿಕಾರಿಗಳಿಗೆ ಈಗಾಗಲೇ ಪ್ರತ್ಯಾಯೋಜಿಸಿದ್ದು, ಅದರಂತೆ ಕ್ರಮ ಕೈಗೊಳ್ಳಿ, ಇಲ್ಲವಾದಲ್ಲಿ ಸಂಬ0ಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿ.ಜಗದೀಶ್ ಎಚ್ಚರಿಸಿದರು.

ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕೆ ಕೋವಿಡ್ ಸುರಕ್ಷಾ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಅತ್ಯಗತ್ಯವಾಗಿದ್ದು, ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಪ್ರಕರಣಗಳನ್ನು ದಾಖಲಿಸಲು ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಸಾರ್ವಜನಿಕರು ಎಲ್ಲಾ ಸುರಕ್ಷಾ ನಿಯಮಗಳನ್ನು ತಪ್ಪದೇ ಪಾಲಿಸುವುದರ ಮೂಲಕ ಜಿಲ್ಲೆಯನ್ನು ಕೋವಿಡ್ 2 ನೇ ಅಲೆಯಿಂದ ರಕ್ಷಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

15 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

18 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

18 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

19 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

19 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

19 hours ago