Featured

ಉಡುಪಿ : ಕೋವಿಡ್ ಸುರಕ್ಷಾ ನಿಯಮಗಳ ಪಾಲನೆ ಕಡ್ಡಾಯವಾಗಲಿ: ಡಾ. ಮಧುಸೂದನ್ ನಾಯಕ್ -Vishwanews24

ಉಡುಪಿ : ಕೋವಿಡ್ ಸುರಕ್ಷಾ ನಿಯಮಗಳ ಪಾಲನೆ ಕಡ್ಡಾಯವಾಗಲಿ: ಡಾ. ಮಧುಸೂದನ್ ನಾಯಕ್ -Vishwanews24

ಉಡುಪಿ(Vishwanews24): ಕಳೆದ ವರ್ಷದಿಂದ ಇಡೀ ವಿಶ್ವವು ಕೊರೊನಾ ಮಾರಕ ವೈರಸ್‌ಗೆ ತುತ್ತಾಗಿದ್ದು, ಪ್ರಸುತ್ತ ದಿನದಲ್ಲಿ ಕೋವಿಡ್‌ಗೆ ಲಸಿಕೆ ದೊರೆತಿದೆ. ಸಾರ್ವಜನಿಕರು ಕೊರೋನಾ ಲಸಿಕೆ ತೆಗೆದುಕೊಳ್ಳವುದರ ಜೊತೆಗೆ ಮಾಸ್ಕ್ಧಾರಣೆ, ಕೈಗಳ ಸ್ವಚ್ಛತೆಗೆ ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್ ತಡೆಗಟ್ಟಲು ಸಹಕರಿಸಬೇಕು ಎಂದು ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ಹೇಳಿದರು.

ಅವರು ಇಂದು ನಗರದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯಲ್ಲಿ ಆಯೋಜಿಸಿದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ ವರ್ಷ ಕೋವಿಡ್ ಸಮಯದಲ್ಲಿ ರಕ್ತದಾನ ಶಿಬಿರಗಳು ನಡೆಯದ ಕಾರಣ ಜಿಲ್ಲೆಯಲ್ಲಿ ರಕ್ತ ಶೇಖರಣೆಯಲ್ಲಿ ಕೊರತೆ ಉಂಟಾಗಿದ್ದು, ಆದರೆ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯು ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ರಕ್ತದ ಕೊರತೆ ನೀಗಿಸುವಲ್ಲಿ ನೆರವಾಗಿದ್ದು, ಕೋವಿಡ್ ಸಮಯದಲ್ಲಿ ಅನೇಕ ಸಾಮಾಜಿಕ ಸೇವೆಗಳನ್ನು ನೀಡುತ್ತಾ ಬಂದಿದೆ ಎಂದು ಜಿಲ್ಲಾ ಸರ್ಜನ್ ಹೇಳಿದರು

.ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಡಾ.ತಲ್ಲೂರು ಶಿವರಾಮ್ ಶೆಟ್ಟಿ ಮಾತನಾಡಿ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಆದ್ದರಿಂದ ಉಪಯುಕ್ತವಾದ ಆಹಾರ ಸೇವನೆ ಮಾಡುವುದು ಒಳಿತು. ಆರೋಗ್ಯಕರವಾದ ಆಹಾರ ಸೇವನೆ, ಒತ್ತಡ ರಹಿತವಾದ ಜೀವನ ಸಾಗಿಸುವುದು ಹಾಗೂ ಮಾನಸಿಕ ಆರೋಗ್ಯದ ಕಡೆ ಹೆಚ್ಚು ಗಮನಹರಿಸಿ, ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚು ಕಾಳಜಿ ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಧನ್ವಂತರಿ ನರ್ಸಿಂಗ್ ಕಾಲೇಜಿನ ಉಪನ್ಯಾಸಕಿ ಲೀಲಾವತಿ ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಉಪ ಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ ಸ್ವಾಗತಿಸಿ, ಕಾರ್ಯದರ್ಶಿ ಕೆ.ಜಯರಾಮ್ ಆಚಾರ್ಯ ಸಾಲಿಗ್ರಾವ ನಿರೂಪಿಸಿ, ಖಜಾಂಜಿ ಡಾ.ಅರವಿಂದ ನಾಯ್ಕ್ ಅಮ್ಮುಂಜೆ ವಂದಿಸಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

30 minutes ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

41 minutes ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

59 minutes ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

1 hour ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

1 hour ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago