Featured

ಉಡುಪಿ : ಕೋವಿಡ್ ಸೋಂಕಿತರನ್ನು ಕೋವಿಡ್‌ಕೇರ್ ಸೆಂಟರ್ ಗೆ ವರ್ಗಾಯಿಸಿ:ಡಾ. ನವೀನ್ ಭಟ್ -Vishwanews24

ಉಡುಪಿ : ಕೋವಿಡ್ ಸೋಂಕಿತರನ್ನು ಕೋವಿಡ್‌ಕೇರ್ ಸೆಂಟರ್ ಗೆ ವರ್ಗಾಯಿಸಿ:ಡಾ. ನವೀನ್ ಭಟ್ -Vishwanews24

ಉಡುಪಿ : ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್‌ಕೇರ್ ಸೆಂಟರ್‌ಗಳಿಗೆ ವರ್ಗಾಯಿಸಿ ಅಗತ್ಯ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ನವೀನ್ ಭಟ್ ಸೂಚನೆ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕೈಗೊಳ್ಳುವ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೋಂಕಿತ ವ್ಯಕ್ತಿಗಳನ್ನು ಗುರುವಾರದಿಂದ ಕಡ್ಡಾಯವಾಗಿ ಕೋವಿಡ್‌ಕೇರ್ ಸೆಂಟರ್‌ಗಳಿಗೆ ವರ್ಗಾಯಿಸಿ ಅವರುಗಳಿಗೆ ಉತ್ತಮ ಚಿಕಿತ್ಸೆ ನೀಡುವುದರಿಂದ ಕೊರೋನಾ ಸೋಂಕು ಹರಡುವಿಕೆಯ ಸರಪಳಿಯನ್ನು ಕಡಿತಗೊಳಿಸಲು ಸಾಧ್ಯ, ಈ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿಯೂ ಕೋವಿಡ್‌ಕೇರ್ ಸೆಂಟರ್‌ಗಳನ್ನು ತೆರೆದು, ಅಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರೊಂದಿಗೆ ಕೊರೋನಾ ಪೀಡಿತರಿಗೆ ಆರೈಕೆ ಮಾಡಲು ಮುಂದಾಗಬೇಕು ಎಂದ ಅವರು ಕೋವಿಡ್‌ಕೇರ್ ಸೆಂಟರ್‌ಗಳಿಗೆ ಅಗತ್ಯ ಇರುವ ವೈದ್ಯರು ಶುಶ್ರೂಷಕರು ಮತ್ತಿತರ ಸಿಬ್ಬಂದಿಗಳನ್ನು ಅಗತ್ಯಕ್ಕನುಣವಾಗಿ ನಿಯೋಜಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಪ್ರತಿದಿನ 5000 ಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಪರೀಕ್ಷೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಗ್ರಾಮ ಪಂಚಾಯತ್‌ಗಳು ಕೋವಿಡ್ ಪರೀಕ್ಷೆ ಮಾಡಲು ಅಗತ್ಯ ಸಹಕಾರ ನೀಡುವಂತೆ ಸೂಚಿಸಲಾಗುವುದು ಎಂದರು.

ಮಹಾರಾಷ್ಟ ,ಕೇರಳ ಸೇರಿದಂತೆ ಹೊರ ರಾಜ್ಯಗಳಿಂದ ರೈಲುಗಳ ಮೂಲಕ ಆಗಮಿಸುವವರು ಕಡ್ಡಾಯವಾಗಿ 72 ಗಂಟೆ ಅವಧಿಯ ಒಳಗೆ ಪಡೆದ ಆರ್.ಟಿ.ಪಿ.ಸಿ.ಆರ್ ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರುವ ಬಗ್ಗೆ ತಪಾಸಣೆ ಮಾಡಬೇಕು, ನೆಗೆಟಿವ್ ವರದಿ ಇಲ್ಲದೆ ಬಂದವರಿಗೆ ಸ್ಥಳದಲ್ಲಿಯೇ ಖಂಖಿ ಪರೀಕ್ಷೆಯನ್ನು ಮಾಡಬೇಕು ಎಂದರು.

ಕೋವಿಡ್ ಸೋಂಕಿತರ ಮನೆಗಳನ್ನು ಕಡ್ಡಾಯವಾಗಿ ಸೀಲ್‌ಡೌನ್ ಮಾಡಬೇಕು ಎಂದ ಅವರು 5 ಕ್ಕಿಂತ ಹೆಚ್ಚಿನ ಪ್ರಕರಣಗಳು ಒಂದೇ ಪರಿಸರದಲ್ಲಿ ಕಂಡು ಬಂದಲ್ಲಿ ಕಂಟೇನ್ಮೆoಟ್ ಝೋನ್‌ಗಳಾಗಿ ಘೋಷಿಸಿ ಅವುಗಳ ಮೇಲೆ ನಿಗಾ ವಹಿಸುವ ಕೆಲಸವಾಗಬೇಕು ಎಂದರು.

ಸoಭಾವ್ಯ ಕೋವಿಡ್ ಮೂರನೇ ಅಲೆ ಹರಡುವುದನ್ನು ಸಮರ್ಪಕವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಬೇಕು. ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ 1000 ಬೆಡ್ ಗಳು ಕಾಯ್ದಿರಿಸುವ ಅಗತ್ಯವಿದೆ ಎಂದರು.

ಗ್ರಾಮೀಣ ಭಾಗಗಳಲ್ಲಿ ಟಾಸ್ಕ್ ಪೋರ್ಸ್ ಸಮಿತಿಗಳು ಕರ‍್ಯ ಪ್ರವೃತ್ತಿಯಾಗುವುದರೊಂದಿಗೆ ಕೋರೋನಾ ನಿಯಂತ್ರಣಕ್ಕೆ ಮುಂದಾಗಬೇಕು ಎಂದ ಅವರು, ಸೋಂಕಿತರನ್ನು ಕೋವಿಡ್‌ಕೇರ್ ಸೆಂಟರ್ ಗೆ ವರ್ಗಾಯಿಸಲು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ, ಗ್ರಾಮ ಲೆಕ್ಕಿಗರು, ಪಿ.ಡಿ.ಒ ಗಳು ಹಾಗೂ ಪೋಲಿಸ್ ಸಿಬ್ಬಂದಿಗಳು ಸಹಕಾರ ನೀಡಬೇಕು ಎಂದು ಸೂಚನೆ ನೀಡಿದರು.

ಪ್ರತಿದಿನ ಸಂಜೆ ತಾಲೂಕು ಮಟ್ಟದಲ್ಲಿ ತಹಶೀಲ್ದಾರುಗಳು ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತರ ಸ್ಥಿತಿಗತಿ ಬಗ್ಗೆ ಸಭೆ ನಡೆಸಿ, ಚರ್ಚಿಸಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಲಸಿಕಾ ಕೇಂದ್ರಗಳಲ್ಲಿ ಹೆಚ್ಚು ಜನಸಂದಣಿಯನ್ನು ತಡೆಯಲು ಅಗತ್ಯ ನಿಯಂತ್ರಣ ಕ್ರಮಗಳನ್ನು ಕೈಗೊಂಡು ಲಸಿಕೆ ನೀಡುವ ಕಾರ್ಯ ಮಾಡಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾತನಾಡಿ , ಉಡುಪಿ ,ಕುಂದಾಪುರ ಮತ್ತು ಬೈಂದೂರು ರೈಲ್ವೆ ನಿಲ್ದಾಣದಲ್ಲಿ 24*7 ಕಾರ್ಯನಿರ್ವಹಿಸುವ ತಪಾಸಣಾ ಕೆಂದ್ರಗಳನ್ನು ತರೆದು, ಮಹಾರಾಷ್ಟç ಮತ್ತು ಕೇರಳದಿಂದ ಬರುವವರನ್ನು ತಪಾಸಣೆ ನಡೆಸಬೇಕು, ಈ ತಂಡದಲ್ಲಿ ವೈದ್ಯರು, ಪೊಲೀಸ್ ಮತ್ತು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ , ಗುರುವಾರದಿಂದಲೇ 3 ತಾಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗಳು ಕಾರ್ಯಾರಂಭ ಮಾಡುವಂತೆ ಎಲ್ಲಾ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದರು.

ಸಾರ್ವಜನಿಕರು ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಪಾಡದೇ ಇರುವುದು ಕಂಡು ಬರುತ್ತಿದ್ದು, ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳಿಗೆ ನಿಗಾ ವಹಿಸುವುದರೊಂದಿಗೆ ನಿಯಮ ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲು ಮುಂದಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ.ನಾಗಭೂಷಣ್‌ಉಡುಪ, ಹೆಚ್ಚುವರಿ ಪೋಲಿಸ್ ಅಧೀಕ್ಷಕ ಕುಮಾರ್‌ಚಂದ್ರ, ಕುಂದಾಪುರ ಉಪವಿಭಾಗಧಿಕಾರಿ ರಾಜು, ತಹಶೀಲ್ದಾರರು ಪ್ರದೀಪ್‌ಎಸ್‌ಕುರ್ಡೆಕರ್, ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

9 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

12 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

14 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

15 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

15 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

16 hours ago