Featured

ಉಡುಪಿ : ಕೋವಿಡ್ -19 ನಿಂದ ಮರಣ: ಕುಟುಂಬದವರು ಪರಿಹಾರ ಪಡೆಯುವ ಬಗ್ಗೆ -Vishwanews24

ಉಡುಪಿ : ಕೋವಿಡ್ -19 ನಿಂದ ಮರಣ: ಕುಟುಂಬದವರು ಪರಿಹಾರ ಪಡೆಯುವ ಬಗ್ಗೆ -Vishwanews24

ಉಡುಪಿ, : ಸರಕಾರದ ಆದೇಶದಂತೆ ಕೋವಿಡ್ -19 ವೈರಾಣು ಸೋಂಕಿನಿAದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ದುಡಿಯುವ ಸದಸ್ಯ ಮೃತ ಪಟ್ಟ ಸಂದರ್ಭದಲ್ಲಿ ಮೃತರ ಕಾನೂನುಬದ್ದ ವಾರಸುದಾರರ/ಕುಟುಂಬದ ಓರ್ವ ಸದಸ್ಯರಿಗೆ ಆರ್ಥಿಕ ನೆರವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕೋವಿಡ್-19 ಸಾಂಕ್ರಾಮಿಕ ಸೋಂಕಿನಿAದ ದುಡಿಯುವ ಸದಸ್ಯರನ್ನು ಕಳೆದುಕೊಂಡ ಬಿಪಿಎಲ್ ಕುಟುಂಬಕ್ಕೆ ಒಂದು ಬಾರಿಗೆ ಸೀಮಿತಗೊಳಿಸಿ, ರಾಜ್ಯ ಸರಕಾರದ ಸಂಧ್ಯಾಸುರಕ್ಷಾ ಯೋಜನೆ ಲೆಕ್ಕ ಶೀರ್ಷಿಕೆಯ ಅನುದಾನದಿಂದ 1 ಲಕ್ಷ ರೂಗಳನ್ನು ಹಾಗೂ ಕೇಂದ್ರ ಸರಕಾರದ ಮಾರ್ಗ ಸೂಚಿಯಂತೆ ಪ್ರತಿಯೊಬ್ಬ ಮೃತರ ವಾರಸುದಾರರಿಗೆ ರಾಜ್ಯವಿಪತ್ತು ಪರಿಹಾರ ನಿಧಿ (SDRF) ಲೆಕ್ಕ ಶೀರ್ಷಿಕೆಯ ಅನುದಾನದಿಂದ ತಲಾ 50,000 ರೂಗಳ ಪರಿಹಾರ ನೀಡಲಾಗುವುದು.

ಮತ್ತು ಕೋವಿಡ್ ನಿಂದ ಮೃತಪಟ್ಟ ಪ್ರತೀ ಕುಟುಂಬಗಳಿಗೂ ಕುಟುಂಬದ ಕಾನೂನುಬದ್ದ ವಾರಿಸುದಾರರಿಗೆ 50000 ರೂ ಪರಿಹಾರವನ್ನು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ನೀಡಲು ಪರಿಷೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಸಂಬoದಪಟ್ಟವರು ಪರಿಹಾರ ಪಡೆಯಲು ತಾಲೂಕು ಕಚೇರಿ/ಎಲ್ಲಾ ನಾಡ ಕಛೇರಿ/ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿದಾರರು ಪರಿಹಾರವನ್ನು ಪಡೆಯಲು ತಮ್ಮ ವ್ಯಾಪ್ತಿಯ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆ 1 ರಲ್ಲಿ ಮಾಹಿತಿ ಹಾಗೂ ನಮೂನೆ -2 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ಮತ್ತು ನಮೂನೆ -3 ರಲ್ಲಿ ನಿರಾಪೇಕ್ಷಣಾ ಪತ್ರವನ್ನು ಭರ್ತಿ ಮಾಡಿ ಈ ಕೆಳಕಂಡ ದಾಖಲಾತಿಗಳೊಂದಿಗೆ ತಾಲ್ಲೂಕು ಕಛೇರಿಗೆ ಸಲ್ಲಿಸುವುದು.

ಅರ್ಹತೆ: ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಕೋವಿಡ್-19 ಮರಣ ಪರಿಹಾರ ಪಾವತಿಗೆ ಪರಿಗಣಿಸುವ ಎಲ್ಲಾ ಮೃತ ವ್ಯಕ್ತಿಗಳು ಕೋವಿಡ್-19 ಕಾರಣಗಳಿಂದಾಗಿ ಮೃತಪಟ್ಟಿರ ಬೇಕು. ಈ ಕುರಿತು ಅಧಿಕೃತ ಮರಣ ಪ್ರಮಾಣ ಪತ್ರವನ್ನು ಹೊಂದಿರತಕ್ಕದ್ದು. ರಾಜ್ಯ ಸರ್ಕಾರವು ಘೋಷಿಸಿರುವ ರೂ.1 ಲಕ್ಷಗಳ ಪರಿಹಾರ ಪಡೆಯಲು ಪರಿಗಣಿಸುವ ಮೃತ ವ್ಯಕ್ತಿಯು ಬಿ.ಪಿ.ಎಲ್ ಕುಟುಂಬದ ದುಡಿಯುವ ಸದಸ್ಯರಾಗಿರಬೇಕು ಹಾಗೂ ಅರ್ಜಿದಾರರೂ ಸಹ ಅದೇ ಬಿ.ಪಿ.ಎಲ್ ಕುಟುಂಬದ ಸದಸ್ಯರಾಗಿರಬೇಕು. ಕೋವಿಡ್-19 ಸೋಂಕಿನಿoದ ಮೃತಪಟ್ಟಿರುವ ಕುರಿತು ವೈದ್ಯಕೀಯ ಪ್ರಮಾಣ ಪತ್ರ (Form-4/4a) ಲಭ್ಯವಿಲ್ಲದಿದ್ದಲ್ಲಿ, ಕೋವಿಡ್-19 ಮರಣ ದೃಢೀಕರಣ ಸಮಿತಿ (Covid-19 Death Ascertaining Committee-CDAC) ನೀಡುವ ನಿಗದಿತ ಮರಣ ಪ್ರಮಾಣ ಪತ್ರವನ್ನು ಪರಿಗಣಿಸುವುದು. ರಾಜ್ಯ ಸರ್ಕಾರದಿಂದ ನೀಡಲಾಗುವ ರೂ. 1.00 ಲಕ್ಷ ಮರಣ ಪರಿಹಾರ ಧನ ಪಡೆಯಲು ಅರ್ಹವಾಗುವ ಬಿಪಿಎಲ್ ಕುಟುಂಬದ ಮೃತ ವ್ಯಕ್ತಿಯ ವಯಸ್ಸು ಕನಿಷ್ಠ 18 ವರ್ಷ ತುಂಬಿರ ಬೇಕು.

ಸಲ್ಲಿಸಬೇಕಾದ ದಾಖಲೆಗಳು : ಕೋವಿಡ್ -19 ಪಾಸಿಟಿವ್ ವರದಿ ಮತ್ತು ಕೋವಿಡ್ ರೋಗಿ ಸಂಖ್ಯೆ  P Number (Patient Number ) (ಕೋವಿಡ್ ದೃಢಪಟ್ಟ ರೋಗಿ ಸಂಖ್ಯೆ) , ಮರಣ ಪ್ರಮಾಣ ಪತ್ರ ಅಥವಾ ಮರಣ ಕಾರಣ ಪ್ರಮಾಣ ಪತ್ರ (ಫಾರ್ಮ್ -4 /4ಎ) , ಮೃತ ವ್ಯಕ್ತಿಯ ಆಧಾರ್ ಪ್ರತಿ ಅಥವಾ ಇತರೇ ಗುರುತಿನ ಚೀಟಿಗಳು, ಮೃತ ವ್ಯಕ್ತಿಯ ಬಿಪಿಎಲ್ ಪಡಿತರ ಚೀಟಿ,ಅರ್ಜಿದಾರರ ಆಧಾರ್ ಪ್ರತಿ, ಅರ್ಜಿದಾರರ ಬಿಪಿಎಲ್ ಪಡಿತರ ಚೀಟಿ,ಅರ್ಜಿದಾರರ ಬ್ಯಾಂಕ್/ಅoಚೆ ಖಾತೆ ಪಾಸ್ ಬುಕ್, ಅರ್ಜಿದಾರರ ಸ್ವಯಂ ಘೋಷಣಾ ಪತ್ರ (ನಮೂನೆ-2),ಕುಟುಂಬ ಸದಸ್ಯರ ನಿರಾಪೇಕ್ಷಣಾ ಪತ್ರ (ನಮೂನೆ-3)

ಅರ್ಜಿ ನಮೂನೆಗಳನ್ನು ವೆಬ್ ಸೈಟ್ ವಿಳಾಸ www.udupi.nic.in ಮೂಲಕ ಹಾಗೂ ಸಂಬoಧಿಸಿದ ತಾಲೂಕು ಕಛೇರಿಯಿಂದ ಪಡೆಯ ಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

8 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

8 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

8 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

8 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

9 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

10 hours ago