Featured

ಉಡುಪಿ, : ಕೋವಿಡ್ -19 ನಿಂದ ಮರಣ: ಕುಟುಂಬದವರು ಪರಿಹಾರ ಪಡೆಯುವ ಬಗ್ಗೆ -Vishwanews24

ಉಡುಪಿ, : ಕೋವಿಡ್ -19 ನಿಂದ ಮರಣ: ಕುಟುಂಬದವರು ಪರಿಹಾರ ಪಡೆಯುವ ಬಗ್ಗೆ -Vishwanews24

ಉಡುಪಿ, : ಸರಕಾರದ ಆದೇಶದಂತೆ ಕೋವಿಡ್ -19 ವೈರಾಣು ಸೋಂಕಿನಿoದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ದುಡಿಯುವ ಸದಸ್ಯ ಮೃತ ಪಟ್ಟ ಸಂದರ್ಭದಲ್ಲಿ ಮೃತರ ಕಾನೂನುಬದ್ದ ವಾರಸುದಾರರ/ಕುಟುಂಬದ ಓರ್ವ ಸದಸ್ಯರಿಗೆ ರೂ. 1 ಲಕ್ಷಗಳ ಆರ್ಥಿಕ ನೆರವನ್ನು ನೀಡಲಾಗುವುದು.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಒಂದಕ್ಕಿoತ ಹೆಚ್ಚು ಸದಸ್ಯರು ಕೋವಿಡ್-19 ಸಾಂಕ್ರಾಮಿಕ ಸೋಂಕಿನಿAದ ಮರಣ ಹೊಂದಿದ್ದರೂ ಸಹ ಒಬ್ಬ ಸದಸ್ಯರಿಗೆ ಮಾತ್ರ ರೂ.1 ಲಕ್ಷಗಳ ಪರಿಹಾರ ಪಾವತಿಸಲಾಗುತ್ತದೆ. ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ RTGS/NEFT ಮೂಲಕ ನೇರವಾಗಿ ಕೋವಿಡ್ ಸೋಂಕಿನಿAದ ಮೃತಪಟ್ಟ ಬಿಪಿಎಲ್ ಕುಟುಂಬದ ವ್ಯಕ್ತಿಯ ವಾರಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಕೋವಿಡ್-19 ಸೋಂಕಿನಿದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ ಪಾವತಿಸುವಂತಹ ಎಲ್ಲಾ ಪ್ರಕ್ರಿಯೆಗಳನ್ನು ಅಂತರ್ಜಾಲದ ಮೂಲಕವೇ ನಿರ್ವಹಿಸಲಾಗುವುದು.

ಅರ್ಜಿದಾರರು ಪರಿಹಾರವನ್ನು ಪಡೆಯಲು ತಮ್ಮ ವ್ಯಾಪ್ತಿಯ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆ 1 ರಲ್ಲಿ ಮಾಹಿತಿ ಹಾಗೂ ನಮೂನೆ -2 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ಮತ್ತು ನಮೂನೆ -3 ರಲ್ಲಿ ನಿರಾಪೇಕ್ಷಣಾ ಪತ್ರವನ್ನು ಭರ್ತಿ ಮಾಡಿ ಈ ಕೆಳಕಂಡ ದಾಖಲಾತಿಗಳೊಂದಿಗೆ ತಾಲ್ಲೂಕು ಕಛೇರಿಗೆ ಸಲ್ಲಿಸುವುದು.

ಕೋವಿಡ್ -19 ವೈರಾಣು ಸೋಂಕಿನಿoದ ಮೃತಪಟ್ಟಿದ್ದಕ್ಕೆ ಸಂಬAಧಿಸಿದAತೆ: ಕೋವಿಡ್ -19 ಪಾಸಿಟಿವ್ ರಿಪೋರ್ಟ್ (ಅಧಿಕೃತವಾಗಿ ಗುರುತಿಸಿದ ಪ್ರಯೋಗಾಲಯದಿಂದ ಪಡೆದಿರುವ) P Number (Patient Number) (ಕೋವಿಡ್ ದೃಢಪಟ್ಟ ರೋಗಿ ಸಂಖ್ಯೆ) ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು.

ಅಥವಾ ರೋಗ ಲಕ್ಷಣಗಳ ಆಧಾರದ ಮೇಲೆ ಚಿಕಿತ್ಸೆ ಪಡೆದವರು (ಕೋವಿಡ್-19 ನೆಗೆಟಿವ್ ಇದ್ದವರು) ಕ್ಲೀನಿಕಲ್ ರೇಡಿಯಾಲಜಿ ಮತ್ತು ಇತರೆ ಸಂಬoಧಿಸಿದ ಪ್ರಯೋಗಾಲಯ ವರದಿ P Number (Patient Number) (ರೋಗಿ ಸಂಖ್ಯೆ) ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು

ಮೃತಪಟ್ಟವರ ಆಧಾರ್ ಕಾರ್ಡ್ ಪ್ರತಿ, ಮರಣ ಪ್ರಮಾಣ ಪತ್ರದ ಪ್ರತಿ , ಅರ್ಜಿದಾರರ ಪಡಿತರ ಚೀಟಿ ಪ್ರತಿ , ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ 7. ಅರ್ಜಿದಾರರಿಂದ ಸ್ವಯಂ ಘೋಷಣಾ ಪತ್ರ (ನಮೂನೆ -2) ಕುಟುಂಬದ ಸದಸ್ಯರ ನಿರಾಪೇಕ್ಷಣಾ ಪತ್ರ (ನಮೂನೆ -3) ಗಳನ್ನು ಸಲ್ಲಿಸುವುದು

ಅರ್ಜಿ ನಮೂನೆಗಳನ್ನು ವೆಬ್ ಸೈಟ್ ವಿಳಾಸ www.udupi.nic.in ಮೂಲಕ ಹಾಗೂ ಸಂಬAಧಿಸಿದ ತಾಲೂಕು ಕಛೇರಿಯಿಂದ ಪಡೆಯ ಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago