Featured

ಉಡುಪಿ, : ಕೋವಿಡ್ -19 ನಿಂದ ಮರಣ: ಕುಟುಂಬದವರು ಪರಿಹಾರ ಪಡೆಯುವ ಬಗ್ಗೆ -Vishwanews24

ಉಡುಪಿ, : ಕೋವಿಡ್ -19 ನಿಂದ ಮರಣ: ಕುಟುಂಬದವರು ಪರಿಹಾರ ಪಡೆಯುವ ಬಗ್ಗೆ -Vishwanews24

ಉಡುಪಿ, : ಸರಕಾರದ ಆದೇಶದಂತೆ ಕೋವಿಡ್ -19 ವೈರಾಣು ಸೋಂಕಿನಿoದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ದುಡಿಯುವ ಸದಸ್ಯ ಮೃತ ಪಟ್ಟ ಸಂದರ್ಭದಲ್ಲಿ ಮೃತರ ಕಾನೂನುಬದ್ದ ವಾರಸುದಾರರ/ಕುಟುಂಬದ ಓರ್ವ ಸದಸ್ಯರಿಗೆ ರೂ. 1 ಲಕ್ಷಗಳ ಆರ್ಥಿಕ ನೆರವನ್ನು ನೀಡಲಾಗುವುದು.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಒಂದಕ್ಕಿoತ ಹೆಚ್ಚು ಸದಸ್ಯರು ಕೋವಿಡ್-19 ಸಾಂಕ್ರಾಮಿಕ ಸೋಂಕಿನಿAದ ಮರಣ ಹೊಂದಿದ್ದರೂ ಸಹ ಒಬ್ಬ ಸದಸ್ಯರಿಗೆ ಮಾತ್ರ ರೂ.1 ಲಕ್ಷಗಳ ಪರಿಹಾರ ಪಾವತಿಸಲಾಗುತ್ತದೆ. ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ RTGS/NEFT ಮೂಲಕ ನೇರವಾಗಿ ಕೋವಿಡ್ ಸೋಂಕಿನಿAದ ಮೃತಪಟ್ಟ ಬಿಪಿಎಲ್ ಕುಟುಂಬದ ವ್ಯಕ್ತಿಯ ವಾರಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಕೋವಿಡ್-19 ಸೋಂಕಿನಿದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ ಪಾವತಿಸುವಂತಹ ಎಲ್ಲಾ ಪ್ರಕ್ರಿಯೆಗಳನ್ನು ಅಂತರ್ಜಾಲದ ಮೂಲಕವೇ ನಿರ್ವಹಿಸಲಾಗುವುದು.

ಅರ್ಜಿದಾರರು ಪರಿಹಾರವನ್ನು ಪಡೆಯಲು ತಮ್ಮ ವ್ಯಾಪ್ತಿಯ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆ 1 ರಲ್ಲಿ ಮಾಹಿತಿ ಹಾಗೂ ನಮೂನೆ -2 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ಮತ್ತು ನಮೂನೆ -3 ರಲ್ಲಿ ನಿರಾಪೇಕ್ಷಣಾ ಪತ್ರವನ್ನು ಭರ್ತಿ ಮಾಡಿ ಈ ಕೆಳಕಂಡ ದಾಖಲಾತಿಗಳೊಂದಿಗೆ ತಾಲ್ಲೂಕು ಕಛೇರಿಗೆ ಸಲ್ಲಿಸುವುದು.

ಕೋವಿಡ್ -19 ವೈರಾಣು ಸೋಂಕಿನಿoದ ಮೃತಪಟ್ಟಿದ್ದಕ್ಕೆ ಸಂಬAಧಿಸಿದAತೆ: ಕೋವಿಡ್ -19 ಪಾಸಿಟಿವ್ ರಿಪೋರ್ಟ್ (ಅಧಿಕೃತವಾಗಿ ಗುರುತಿಸಿದ ಪ್ರಯೋಗಾಲಯದಿಂದ ಪಡೆದಿರುವ) P Number (Patient Number) (ಕೋವಿಡ್ ದೃಢಪಟ್ಟ ರೋಗಿ ಸಂಖ್ಯೆ) ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು.

ಅಥವಾ ರೋಗ ಲಕ್ಷಣಗಳ ಆಧಾರದ ಮೇಲೆ ಚಿಕಿತ್ಸೆ ಪಡೆದವರು (ಕೋವಿಡ್-19 ನೆಗೆಟಿವ್ ಇದ್ದವರು) ಕ್ಲೀನಿಕಲ್ ರೇಡಿಯಾಲಜಿ ಮತ್ತು ಇತರೆ ಸಂಬoಧಿಸಿದ ಪ್ರಯೋಗಾಲಯ ವರದಿ P Number (Patient Number) (ರೋಗಿ ಸಂಖ್ಯೆ) ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು

ಮೃತಪಟ್ಟವರ ಆಧಾರ್ ಕಾರ್ಡ್ ಪ್ರತಿ, ಮರಣ ಪ್ರಮಾಣ ಪತ್ರದ ಪ್ರತಿ , ಅರ್ಜಿದಾರರ ಪಡಿತರ ಚೀಟಿ ಪ್ರತಿ , ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ 7. ಅರ್ಜಿದಾರರಿಂದ ಸ್ವಯಂ ಘೋಷಣಾ ಪತ್ರ (ನಮೂನೆ -2) ಕುಟುಂಬದ ಸದಸ್ಯರ ನಿರಾಪೇಕ್ಷಣಾ ಪತ್ರ (ನಮೂನೆ -3) ಗಳನ್ನು ಸಲ್ಲಿಸುವುದು

ಅರ್ಜಿ ನಮೂನೆಗಳನ್ನು ವೆಬ್ ಸೈಟ್ ವಿಳಾಸ www.udupi.nic.in ಮೂಲಕ ಹಾಗೂ ಸಂಬAಧಿಸಿದ ತಾಲೂಕು ಕಛೇರಿಯಿಂದ ಪಡೆಯ ಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

10 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

10 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

11 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

11 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

11 hours ago