ಉಡುಪಿ, : ಸರಕಾರದ ಆದೇಶದಂತೆ ಕೋವಿಡ್ -19 ವೈರಾಣು ಸೋಂಕಿನಿoದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ದುಡಿಯುವ ಸದಸ್ಯ ಮೃತ ಪಟ್ಟ ಸಂದರ್ಭದಲ್ಲಿ ಮೃತರ ಕಾನೂನುಬದ್ದ ವಾರಸುದಾರರ/ಕುಟುಂಬದ ಓರ್ವ ಸದಸ್ಯರಿಗೆ ರೂ. 1 ಲಕ್ಷಗಳ ಆರ್ಥಿಕ ನೆರವನ್ನು ನೀಡಲಾಗುವುದು.
ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಒಂದಕ್ಕಿoತ ಹೆಚ್ಚು ಸದಸ್ಯರು ಕೋವಿಡ್-19 ಸಾಂಕ್ರಾಮಿಕ ಸೋಂಕಿನಿAದ ಮರಣ ಹೊಂದಿದ್ದರೂ ಸಹ ಒಬ್ಬ ಸದಸ್ಯರಿಗೆ ಮಾತ್ರ ರೂ.1 ಲಕ್ಷಗಳ ಪರಿಹಾರ ಪಾವತಿಸಲಾಗುತ್ತದೆ. ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ RTGS/NEFT ಮೂಲಕ ನೇರವಾಗಿ ಕೋವಿಡ್ ಸೋಂಕಿನಿAದ ಮೃತಪಟ್ಟ ಬಿಪಿಎಲ್ ಕುಟುಂಬದ ವ್ಯಕ್ತಿಯ ವಾರಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಕೋವಿಡ್-19 ಸೋಂಕಿನಿದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ ಪಾವತಿಸುವಂತಹ ಎಲ್ಲಾ ಪ್ರಕ್ರಿಯೆಗಳನ್ನು ಅಂತರ್ಜಾಲದ ಮೂಲಕವೇ ನಿರ್ವಹಿಸಲಾಗುವುದು.
ಅರ್ಜಿದಾರರು ಪರಿಹಾರವನ್ನು ಪಡೆಯಲು ತಮ್ಮ ವ್ಯಾಪ್ತಿಯ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆ 1 ರಲ್ಲಿ ಮಾಹಿತಿ ಹಾಗೂ ನಮೂನೆ -2 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ಮತ್ತು ನಮೂನೆ -3 ರಲ್ಲಿ ನಿರಾಪೇಕ್ಷಣಾ ಪತ್ರವನ್ನು ಭರ್ತಿ ಮಾಡಿ ಈ ಕೆಳಕಂಡ ದಾಖಲಾತಿಗಳೊಂದಿಗೆ ತಾಲ್ಲೂಕು ಕಛೇರಿಗೆ ಸಲ್ಲಿಸುವುದು.
ಕೋವಿಡ್ -19 ವೈರಾಣು ಸೋಂಕಿನಿoದ ಮೃತಪಟ್ಟಿದ್ದಕ್ಕೆ ಸಂಬAಧಿಸಿದAತೆ: ಕೋವಿಡ್ -19 ಪಾಸಿಟಿವ್ ರಿಪೋರ್ಟ್ (ಅಧಿಕೃತವಾಗಿ ಗುರುತಿಸಿದ ಪ್ರಯೋಗಾಲಯದಿಂದ ಪಡೆದಿರುವ) P Number (Patient Number) (ಕೋವಿಡ್ ದೃಢಪಟ್ಟ ರೋಗಿ ಸಂಖ್ಯೆ) ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು.
ಅಥವಾ ರೋಗ ಲಕ್ಷಣಗಳ ಆಧಾರದ ಮೇಲೆ ಚಿಕಿತ್ಸೆ ಪಡೆದವರು (ಕೋವಿಡ್-19 ನೆಗೆಟಿವ್ ಇದ್ದವರು) ಕ್ಲೀನಿಕಲ್ ರೇಡಿಯಾಲಜಿ ಮತ್ತು ಇತರೆ ಸಂಬoಧಿಸಿದ ಪ್ರಯೋಗಾಲಯ ವರದಿ P Number (Patient Number) (ರೋಗಿ ಸಂಖ್ಯೆ) ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು
ಮೃತಪಟ್ಟವರ ಆಧಾರ್ ಕಾರ್ಡ್ ಪ್ರತಿ, ಮರಣ ಪ್ರಮಾಣ ಪತ್ರದ ಪ್ರತಿ , ಅರ್ಜಿದಾರರ ಪಡಿತರ ಚೀಟಿ ಪ್ರತಿ , ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ 7. ಅರ್ಜಿದಾರರಿಂದ ಸ್ವಯಂ ಘೋಷಣಾ ಪತ್ರ (ನಮೂನೆ -2) ಕುಟುಂಬದ ಸದಸ್ಯರ ನಿರಾಪೇಕ್ಷಣಾ ಪತ್ರ (ನಮೂನೆ -3) ಗಳನ್ನು ಸಲ್ಲಿಸುವುದು
ಅರ್ಜಿ ನಮೂನೆಗಳನ್ನು ವೆಬ್ ಸೈಟ್ ವಿಳಾಸ www.udupi.nic.in ಮೂಲಕ ಹಾಗೂ ಸಂಬAಧಿಸಿದ ತಾಲೂಕು ಕಛೇರಿಯಿಂದ ಪಡೆಯ ಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…