Featured

ಉಡುಪಿ : ಕೋವಿಡ್ 19 ನಿಯಮಗಳನ್ನು ಪಾಲಿಸಿಕೊಂಡು ನಾಟಕ ಪ್ರದರ್ಶನ ನಡೆಸಲು ಅನುಮತಿ -Vishwanews24

ಉಡುಪಿ : ಕೋವಿಡ್ 19 ನಿಯಮಗಳನ್ನು ಪಾಲಿಸಿಕೊಂಡು ನಾಟಕ ಪ್ರದರ್ಶನ ನಡೆಸಲು ಅನುಮತಿ -Vishwanews24

ಉಡುಪಿ: ಈ ಕೊರೊನಾ ಮಹಾಮಾರಿ ರೋಗದಿಂದ ಕಳೆದ 10 ತಿಂಗಳಿನಿಂದ ಒಂದೇ ಒಂದು ನಾಟಕ ಪ್ರದರ್ಶವಾಗದೇ ಸಹಸ್ರಾರು ಕಲಾವಿದರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿತ್ತು. ಈ ಬಗ್ಗೆ ಉಡುಪಿ ಜಿಲ್ಲೆಯ ವೃತ್ತಿಪರ ನಾಟಕ ತಂಡಗಳ ಪರವಾಗಿ ಸಮಾಜರತ್ನ ಲೀಲಾಧರ ಶೆಟ್ಟಿ ಕರಂದಾಡಿ ಇವರ ಮುಂದಾಳತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಯಾದ ಜಿ, ಜಗದೀಶ್ ಅವರಿಗೆ ನಾಟಕ ಪ್ರದರ್ಶನಕ್ಕೆ ಅನುಮತಿಯನ್ನು ಯಾಚಿಸಿ ಮನವಿಯನ್ನು ನೀಡಲಾಯಿತು.

ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಸರಕಾರದ ಕೋವಿಡ್ 19 ನಿಯಮಗಳನ್ನು ಪಾಲಿಸಿಕೊಂಡು ನಾಟಕ ಪ್ರದರ್ಶನ ನಡೆಸಲು ಅನುಮತಿಯನ್ನು ನೀಡಿದರು.

ಜಿಲ್ಲೆಯಲ್ಲಿ ಸರಿ ಸುಮಾರು 15 ರಿಂದ 20 ನಾಟಕ ತಂಡಗಳು ವೃತ್ತಿಪರವಾಗಿ ನಾಟಕ ಪ್ರದರ್ಶನ ಮಾಡುತ್ತಿದ್ದು ತಂಡದ ಸಹಸ್ರಾರು ನಾಟಕ ಕಲಾವಿದರು ಹಾಗೂ ತಂತ್ರಜ್ಞರು ಆರ್ಥಿಕವಾಗಿ ನಾಟಕವನ್ನೇ ಅವಲಂಬಿಸಿರುತ್ತಾರೆ.

ಈ ಸಂಧರ್ಭದಲ್ಲಿ ಚೈತನ್ಯ ಕಲಾವಿದರು ಬೈಲೂರು ತಂಡದ ಪ್ರಸನ್ನ ಶೆಟ್ಟಿ ಬೈಲೂರು, ಕಾಪು ರಂಗತರಂಗ ತಂಡದ ಶರತ್ ಉಚ್ಚಿಲ ಹಾಗೂ ಮರ್ವಿನ್ ಶಿರ್ವ, ತೆಲಿಕೆದ ತೆನಾಲಿ ಕಾರ್ಕಳ ತಂಡದ ಸುನಿಲ್‌ ನೆಲ್ಲಿಗುಡ್ಡೆ, ಅಭಿನಯ ಕಲಾವಿದರು ಉಡುಪಿ ತೆಂಡದ ಉಮೇಶ್ ಅಲೆವೂರು, ಕಾರ್ತಿಕ್ ಕಡೇಕಾರ್ ಹಾಗೂ ವಿಕ್ರಮ್ ಮಂಚಿ, ಹಾಗೂ ನವಸುಮ ಕೊಡವೂರು ತಂಡದ ಬಾಲಕೃಷ್ಣ ಕೊಡವೂರು, ಕಲಾಚಾವಡಿ ಉಡುಪಿ ತಂಡದ ಪ್ರಭಾಕರ್ ಆಚಾರ್ಯ ಮೂಡುಬೆಳ್ಳೆ ಸಿಂಧೂರ ಕಲಾವಿದರು ಕಾರ್ಕಳ ತಂದದ ಹಮೀದ್ ಮಿಯಾರು ಹಾಗೂ ಸಂದೀಪ್ ಬಾರಾಡಿ, ನಮ್ಮ ಕಲಾವಿದರು ಪಿತ್ರೋಡಿ ತಂಡದ ನವೀನ್ ಸಾಲ್ಯಾನ್ ಒತ್ತೋಡಿ , ಸಾಕ್ಷಿ ಕಲಾವಿದರು ಬೆಳಪು ತಂಡದ ಶುಭಕರ್ ಬೆಳಪು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago