ಉಡುಪಿ: ಭಾವಿ ಪರ್ಯಾಯ ಪೀಠಾಧಿಪತಿಗಳಾದ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಗಳು ಸೋಮವಾರ ನಗರದ ಜೋಡುಕಟ್ಟೆಯ ಮೂಲಕ ಪುರಪ್ರವೇಶ ಮಾಡಿದರು.
ಪರ್ಯಾಯ ಪೂರ್ವಭಾವಿಯಾಗಿ ತೀರ್ಥಕ್ಷೇತ್ರಗಳ ಯಾತ್ರೆ ಮುಗಿಸಿ ಬಂದ ವಿದ್ಯಾಸಾಗರತೀರ್ಥ ಶ್ರೀಗಳಿಗೆ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಹೂಮಾಲೆ ಹಾಕಿ ಸ್ವಾಗತ ಕೋರಿದರು.
ಕೋವಿಡ್ ಕಾರಣದಿಂದ ಈ ಬಾರಿ ಸರಳವಾಗಿ ಪುರಪ್ರವೇಶ ಮೆರವಣಿಗೆ ನಡೆಯಿತು.
ಸ್ತಬ್ಧಚಿತ್ರಗಳು, ಕಲಾತಂಡಗಳ ಪ್ರದರ್ಶನ ಹಾಗೂ ಅದ್ಧೂರಿತನ ಇರಲಿಲ್ಲ. ಬದಲಾಗಿ, ಸಾಂಪ್ರದಾಯಿಕ ಚಂಡೆ, ವಾದ್ಯ, ಬ್ಯಾಂಡ್, ಭಜನೆ, ಸಂಕೀರ್ತನಾ ತಂಡಗಳು ಮೆರವಣಿಯಲ್ಲಿದ್ದವು. ಪಟ್ಟದ ದೇವರಾದ ದ್ವಿಭುಜ ಕಾಳೀಯ ಮರ್ದನ, ಕೃಷ್ಣ, ನರಸಿಂಹ ದೇವರನ್ನು ಚಿನ್ನದ ಪಲ್ಲಕ್ಕಿಯಲ್ಲಿ ಇಡಲಾಗಿತ್ತು.
ತೆರೆದ ವಾಹನದಲ್ಲಿ ಕುಳಿತ ಕೃಷ್ಣಾಪುರ ಮಠದ ಶ್ರೀಗಳು ರಥಬೀದಿ ಪ್ರವೇಶಿಸುತ್ತಿದ್ದಂತೆ ಭವ್ಯ ಸ್ವಾಗತ ಕೋರಲಾಯಿತು. ಕನಕನ ಕಿಂಡಿಯಲ್ಲಿ ಕೃಷ್ಣನ ದರ್ಶನ ಮಾಡಿದ ಬಳಿಕ ಅನಂತೇಶ್ವರ, ಚಂದ್ರಮೌಳೇಶ್ವರ ಹಾಗೂ ಮಧ್ವಾಚಾರ್ಯರ ದರ್ಶನ ಮಾಡಿದರು. ಬಳಿಕ ಅದಮಾರು ಮಠದ ಈಶಪ್ರಿಯ ತೀರ್ಥ ಶ್ರೀಗಳು ಅರಳು ಎರಚಿ ಸಾಂಪ್ರದಾಯಬದ್ಧವಾಗಿ ಸ್ವಾಗತ ಕೋರಿದರು.
ನಂತರ ರಥಬೀದಿಯಲ್ಲಿ ಅಭಿನಂದನೆ ಹಾಗೂ ಪೌರ ಸಮ್ಮಾನ ಕಾರ್ಯಕ್ರಮದಲ್ಲಿ ಅದಮಾರು ಮಠದ ಈಶಪ್ರಿಯ ತೀರ್ಥ ಶ್ರೀಗಳು ಹಾಗೂ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಶ್ರೀಗಳನ್ನು ಸನ್ಮಾನಿಸಲಾಯಿತು.
ಜನವರಿ18ರಂದು ಪರ್ಯಾಯ ಮಹೋತ್ಸವ ನಡೆಯಲಿದೆ. ಅಂದು ಬೆಳಗಿನ ಜಾವ 5.55ಕ್ಕೆ ವಿದ್ಯಾಸಾಗರ ತೀರ್ಥರು ಸರ್ವಜ್ಞ ಪೀಠಾರೋಹಣ ಮಾಡಲಿದ್ದಾರೆ. ಈ ಮೂಲಕ ಮುಂದಿನ 2 ವರ್ಷಗಳ ಕಾಲ ಕೃಷ್ಣನ ಪೂಜಾಧಿಕಾರವನ್ನು ಪಡೆದುಕೊಳ್ಳಲಿದ್ದಾರೆ.
ಕೋವಿಡ್ ಕಾರಣದಿಂದ ಈ ಬಾರಿ ಪರ್ಯಾಯ ಉತ್ಸವವನ್ನು ಸರಳ ಹಾಗೂ ಸಂಪ್ರದಾಯ ಬದ್ಧವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…