ಉಡುಪಿ, ಆಗಸ್ಟ್. 9 (ಕ.ವಾ): ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದು, ಸರಕಾರದ ಕಾರ್ಯಗಳಿಗೆ ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ಕೈ ಜೋಡಿಸಿದಾಗ ಸರಕಾರದ ಕೆಲಸ ಯಶಸ್ವಿಯಾಗುವುದರ ಜೊತೆಗೆ ಸಮಾಜವೂ ಸ್ವಾಸ್ಥö್ಯದಿಂದ ಇರಲು ಸಾಧ್ಯ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.
ಅವರು ಇಂದು ಉಡುಪಿ ಜಿಲ್ಲಾಸ್ಪತ್ರೆ ಆವರಣದಲ್ಲಿ, ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ, 16.5 ಲಕ್ಷ ರೂ ವೆಚ್ಚದಲ್ಲಿ ಜಿಲ್ಲಾಡಳಿತಕ್ಕೆ ನೀಡಿದ ಆಂಬುಲೆನ್ಸ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಇಲಾಖೆಗೆ ಎದುರಾದ ಎಲ್ಲಾ ಸವಾಲುಗಳನ್ನು ಸರಕಾರ ಸಮರ್ಥವಾಗಿ ಎದುರಿಸಿದೆ, ಕೋವಿಡ್ ಮೊದಲನೇ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಸರಕಾರದ ಕಾರ್ಯದಲ್ಲಿ ಸಾರ್ವಜನಿಕ ಸಂಘ ಸಂಸ್ಥೆಗಳು ಹೆಚ್ಚಿನ ನೆರವು ನೀಡುವುದರ ಮೂಲಕ ಹಾಗೂ ದಾನಿಗಳು ನೀಡಿದ ಕೊಡುಗೆಗಳ ಮೂಲಕ ಆರೋಗ್ಯ ಇಲಾಖೆಯನ್ನು ಇನ್ನಷ್ಟು ಸುಸ್ಥಿರಗೊಳಿಸಲು ಸಾಧ್ಯವಾಗಿದ್ದು, ಇದಕ್ಕಾಗಿ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳಿಗೆ, ದಾನಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಡಿ.ಹೆಚ್.ಓ ಡಾ. ನಾಗಭೂಷಣ್ ಉಡುಪ, ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ನ ಅಧ್ಯಕ್ಷ ಎಂ. ಶ್ರೀನಿವಾಸ್ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…