Featured

ಉಡುಪಿ: ಕೋ ಆಪರೇಟಿವ್ ಬ್ಯಾಂಕ್ ನಿಂದ ಅನ್ಯಾಯ  : ನ್ಯಾಯ ಕೊಡಿಸುವಂತೆ ಸಂತ್ರಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ: ಕೋ ಆಪರೇಟಿವ್ ಬ್ಯಾಂಕ್ ನಿಂದ ಅನ್ಯಾಯ  : ನ್ಯಾಯ ಕೊಡಿಸುವಂತೆ ಸಂತ್ರಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ

ಉಡುಪಿ: ನಗರದ ಮಲ್ಪೆಯಲ್ಲಿರುವ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ನಿಂದ ಅನ್ಯಾಯ ಆಗಿರುವ ಸಂತ್ರಸ್ತರು ಇಂದು ಉಡುಪಿ ಮಣಿಪಾಲದ ಕಾಯಿನ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಯ ತನಕ ಪಾದಯಾತ್ರೆ ಮಾಡಿ ಸಂತ್ರಸ್ಥ ರಿಂದ ಜಿಲ್ಲಾಧಿಕಾರಿ ಇವರಿಗೆ ನ್ಯಾಯ ಕೊಡಿಸುವಂತೆ ಮನವಿ ಮಾಡುವ ಮೂಲಕ ಭ್ರಷ್ಟಾಚಾರಿಗಳಿಗೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂತ್ರಸ್ತೆ ಬಿಂದುರವರು ಮೂರು ನಾಲ್ಕು ಜನ ಜೀಪಿನಲ್ಲಿ ಬಂದು ಹಣ ಕಟ್ಟಬೇಕು, ಕಾಲಿ ಪೇಪರ್ ನಲ್ಲಿ ಸಹಿ ಹಾಕಿ ಎಂದು ತುಂಬಾನೆ ಟಾರ್ಚಾರ್ ನಿಡ್ತಾ ಇದ್ದಾರೆ ನಾನು ಸೊಸೈಟಿಯಿಂದ ತೆಗೆದುಕೊಂಡದ್ದು ಕೇವಲ ಇಪ್ಪತ್ತು ಸಾವಿರ ಮಾತ್ರ ಆದರೆ ಈಗ ಅವರು ಎರಡು ಲಕ್ಷ ಕಟ್ಟುಂವಂತೆ ಮಾನಸಿಕವಾಗಿ ಹಿಂಸಿಸುತ್ತಿದ್ದಾರೆ, ಇವರ ಬೆದರಿಕೆಗೆ ಅಂಜಿ ಈಗಾಗಲೇ ಎಪ್ಪತ್ತು ಸಾವಿರ ಹಣವನ್ನು ಸಹ ಕಟ್ಟಿದ್ದೇನೆ ಈ ರೀತಿ ನನಗೆ ಮಾತ್ರವಲ್ಲ ಇತರರಿಗೂ ಹಣ ಕಟ್ಟುವಂತೆ ಬೆದರಿಸುತ್ತಿದ್ದಾರೆ ನಮಗೆ ನ್ಯಾಯವನ್ನು ದೊರಕಿಸಿ ಕೊಡಿ ಎಂದು ಹೇಳಿದರು.

ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಕೋಟ ಮಾತನಾಡಿ, ಈ ರೀತಿ ಸಾಲದ ಹೆಸರಿನಲ್ಲಿ 1413 ಮಂದಿಗೆ 28 ಕೋಟಿ ರೂ. ಹಣವನ್ನು ಮೋಸ ಮಾಡಲಾಗಿದೆ. ಈ ಮೋಸದ ಜಾಲದಲ್ಲಿರುವ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರಗಿಸಬೇಕು. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ವ್ಯವಸ್ಥಾಪಕರ ಆತ್ಮಹತ್ಯೆಗೆ ಕಾರಣರಾದವರನ್ನು ಉನ್ನತ ಮಟ್ಟದ ತನಿಖೆ ನಡೆಸಿ ಮೋಸ ಹೋದವರಿಗೆ ಹಾಗೂ ಮೃತ ವ್ಯವಸ್ಥಾಪಕರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ. ಸಭೆಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಕಾಂಚನ್, ಸುನಿಲ್ ಬಂಗೇರ ಉಪಸ್ಥಿತರಿದ್ದರು.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago