Featured

ಉಡುಪಿ : ಕ್ರಿಸ್ಮಸ್‌ ಆಚರಣೆ ನಮ್ಮಲ್ಲಿ ಮಾನವೀಯತೆ ಜೀವಂತಗೊಳಿಸಲಿ : ಬಿಷಪ್‌ ಜೆರಾಲ್ಡ್‌ ಲೋಬೊ – Vishwanews24

ಸ್ವರ್ಗ ಭುವಿಗಳಿಗೆ ಮಹದಾನಂದವನ್ನು ತಂದ ಸುದಿನವೇ ಕ್ರಿಸ್‍ಮಸ್ ..

ಕ್ರಿಸ್ಮಸ್‌ ಆಚರಣೆ ನಮ್ಮಲ್ಲಿ ಮಾನವೀಯತೆ ಜೀವಂತಗೊಳಿಸಲಿ  ..

ಉಡುಪಿ ಧರ್ಮಾಧ್ಯಕ್ಷ ಬಿಷಪ್‌ ಜೆರಾಲ್ಡ್‌ ಐಸಾಕ್‌ ಲೋಬೊ..

ಉಡುಪಿ: ಕ್ರಿಸ್ತರ ಜನನದ ಕ್ರಿಸ್‍ಮಸ್ ಹಬ್ಬದ ಆಚರಣೆಯು ನಮ್ಮಲ್ಲಿ ಮಾನವೀಯತೆಯನ್ನು ಜೀವಂತಗೊಳಿಸಬೇಕು. ಮನುಷ್ಯನಿಗೆ ಮಾನವೀಯತೆಯು ಮರೀಚಿಕೆಯಾಗದೆ ಸ್ವಾತಂತ್ರ್ಯ, ಶಾಂತಿ, ಭಾವೈಕ್ಯತೆ, ಕ್ಷಮೆ, ಪ್ರೀತಿ, ಸಹನೆ, ಸಂಯಮ ಮತ್ತು ನೈತಿಕತೆಯನ್ನು ತನ್ನ ಉಸಿರಾಗಿಸಬೇಕಿದೆ ಎಂದು ಉಡುಪಿ ಕಥೊಲಿಕ್‌ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್‌ ಐಸಾಕ್‌ ಲೋಬೊ ಹೇಳಿದ್ದಾರೆ.

ಅವರು ತಮ್ಮ ಕ್ರಿಸ್ಮಸ್‌ ಸಂದೇಶದಲ್ಲಿ ಸ್ವರ್ಗ ಭುವಿಗಳಿಗೆ ಮಹದಾನಂದವನ್ನು ತಂದ ಸುದಿನವೇ ಕ್ರಿಸ್‍ಮಸ್. ದೇವಪುತ್ರ ಈ ಲೋಕದಲ್ಲಿ ಮುಗ್ಧ ಮಗುವಾಗಿ ಜನಿಸಿ, ಪಾಪವೊಂದನ್ನು ಬಿಟ್ಟು ಇನ್ನೆಲ್ಲದರಲ್ಲಿಯೂ ನಮ್ಮಂತೆಯೇ ಆಗಬಯಸಿದ ಯೇಸುಸ್ವಾಮಿ ಬಡವರಿಗೆ ಆಶಾಕಿರಣವಾಗಿ, ದುಃಖಿತರಿಗೆ ಸಾಂತ್ವನವಾಗಿ, ದೀನ ದಲಿತರ ಸಂಗಾತಿಯಾಗಿ, ನೊಂದವರ ಭರವಸೆಯಾಗಿ, ಬಹಿಷ್ಕೃತರ ಗೆಳೆಯನಾಗಿ ಬಂದರು.

ಕಳೆದೆರಡು ವರ್ಷಗಳಿಂದ ಇಡೀ ವಿಶ್ವವೇ ಕೊರೋನ ಸೋಂಕಿನ ಅಟ್ಟಹಾಸಕ್ಕೆ ನಲುಗಿಹೋಗಿದೆ. ಸಾವಿರಾರು ಜನರು ಈ ಸೋಂಕಿಗೆ ಒಳಗಾಗಿದ್ದಾರೆ. ಲಕ್ಷಾಂತರ ಕುಟುಂಬಗಳು ನಿರುದ್ಯೋಗ ಹಾಗೂ ಬಡತನಕ್ಕೆ ಬಲಿಯಾಗಿವೆ. ಬಸವಳಿದ ಈ ಲೋಕಕ್ಕೆ ಹೊಸ ಜೀವವನ್ನು ನೀಡುವ ಅಗತ್ಯವಿದೆ. ಕ್ರಿಸ್ತರ ಜನನದ ಕ್ರಿಸ್‍ಮಸ್ ಹಬ್ಬದ ಆಚರಣೆಯು ನಮ್ಮಲ್ಲಿ ಮಾನವೀಯತೆಯನ್ನು ಜೀವಂತಗೊಳಿಸಬೇಕು. ಮನುಷ್ಯನಿಗೆ ಮಾನವೀಯತೆಯು ಮರೀಚಿಕೆಯಾಗದೆ ಸ್ವಾತಂತ್ರ್ಯ, ಶಾಂತಿ, ಭಾವೈಕ್ಯತೆ, ಕ್ಷಮೆ, ಪ್ರೀತಿ, ಸಹನೆ, ಸಂಯಮ ಮತ್ತು ನೈತಿಕತೆಯನ್ನು ತನ್ನ ಉಸಿರಾಗಿಸಬೇಕಿದೆ.

ಕ್ರಿಸ್‍ಮಸ್ ಶಾಂತಿ-ಪ್ರೀತಿಯ ಉತ್ಸವ. ಈ ಉತ್ಸವವನ್ನು ಯೋಗ್ಯವಾಗಿ ಆಚರಿಸಲು ಶಕ್ತರಲ್ಲದ ಸಾವಿರಾರು ಜನರು ಮತ್ತು ಕುಟುಂಬಗಳು ನಮ್ಮ ನೆರೆಹೊರೆಯಲ್ಲಿವೆ. ಕ್ರಿಸ್‍ಮಸ್‍ನ ಭಾವವಾದ ಶಾಂತಿ, ಪ್ರೀತಿಯು ಹಂಚಿಕೊಳ್ಳುವುದರಲ್ಲಿ ಕಂಡುಬರಬೇಕು. ನಮ್ಮಲ್ಲಿ ಇರುವ ಸಂಪನ್ಮೂಲಗಳನ್ನು ಇಲ್ಲದವರೊಡನೆ ಕಿಂಚಿತ್ತಾದರೂ ಹಂಚಿಕೊಂಡರೆ ಕ್ರಿಸ್‍ಮಸ್‍ನ ಮೂಲ ಅರ್ಥವು ನಮಗೆ ಸ್ಪಷ್ಟವಾಗಬಹುದು. ‘ಶಾಂತಿ ದೇವನೊಲಿದ ಮನುಜರಿಗೆ’ ಎಂಬ ದೇವದೂತರ ಹಾಡು ನಮಗೆ ಅರ್ಥಪೂರ್ಣವಾಗಿ ಕೇಳಿಸಲಿ. ಈ ವರ್ಷದ ಕ್ರಿಸ್‍ಮಸ್ ನಮಗೆ ಸೋಂಕಿನ ಭೀತಿಯಿಂದ, ಅನಾರೋಗ್ಯದಿಂದ, ನಿರಾಶೆ-ದುಖಗಳಿಂದ ಬಿಡುಗಡೆಗೊಳಿಸಿ ಸ್ವರ್ಗದ ಶಾಂತಿ ಪ್ರೀತಿಯಿಂದ ನಮ್ಮನ್ನು ತುಂಬಲಿ. ಸಮಸ್ತ ಸಹೋದರ ಸಹೋದರಿಯರಿಗೆ ಕ್ರಿಸ್‍ಮಸ್ ಹಬ್ಬದ ಹಾರ್ದಿಕ ಶುಭಾಷಯಗಳನ್ನು ಕೋರುತ್ತೇನೆ ಎಂದು ಹೇಳಿದ್ದಾರೆ.

 

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

2 days ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

2 days ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

2 days ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

2 days ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

2 days ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

2 days ago