Featured

ಉಡುಪಿ : ಕ್ರಿಸ್ಮಸ್‌ ಆಚರಣೆ ನಮ್ಮಲ್ಲಿ ಮಾನವೀಯತೆ ಜೀವಂತಗೊಳಿಸಲಿ : ಬಿಷಪ್‌ ಜೆರಾಲ್ಡ್‌ ಲೋಬೊ – Vishwanews24

ಸ್ವರ್ಗ ಭುವಿಗಳಿಗೆ ಮಹದಾನಂದವನ್ನು ತಂದ ಸುದಿನವೇ ಕ್ರಿಸ್‍ಮಸ್ ..

ಕ್ರಿಸ್ಮಸ್‌ ಆಚರಣೆ ನಮ್ಮಲ್ಲಿ ಮಾನವೀಯತೆ ಜೀವಂತಗೊಳಿಸಲಿ  ..

ಉಡುಪಿ ಧರ್ಮಾಧ್ಯಕ್ಷ ಬಿಷಪ್‌ ಜೆರಾಲ್ಡ್‌ ಐಸಾಕ್‌ ಲೋಬೊ..

ಉಡುಪಿ: ಕ್ರಿಸ್ತರ ಜನನದ ಕ್ರಿಸ್‍ಮಸ್ ಹಬ್ಬದ ಆಚರಣೆಯು ನಮ್ಮಲ್ಲಿ ಮಾನವೀಯತೆಯನ್ನು ಜೀವಂತಗೊಳಿಸಬೇಕು. ಮನುಷ್ಯನಿಗೆ ಮಾನವೀಯತೆಯು ಮರೀಚಿಕೆಯಾಗದೆ ಸ್ವಾತಂತ್ರ್ಯ, ಶಾಂತಿ, ಭಾವೈಕ್ಯತೆ, ಕ್ಷಮೆ, ಪ್ರೀತಿ, ಸಹನೆ, ಸಂಯಮ ಮತ್ತು ನೈತಿಕತೆಯನ್ನು ತನ್ನ ಉಸಿರಾಗಿಸಬೇಕಿದೆ ಎಂದು ಉಡುಪಿ ಕಥೊಲಿಕ್‌ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್‌ ಐಸಾಕ್‌ ಲೋಬೊ ಹೇಳಿದ್ದಾರೆ.

ಅವರು ತಮ್ಮ ಕ್ರಿಸ್ಮಸ್‌ ಸಂದೇಶದಲ್ಲಿ ಸ್ವರ್ಗ ಭುವಿಗಳಿಗೆ ಮಹದಾನಂದವನ್ನು ತಂದ ಸುದಿನವೇ ಕ್ರಿಸ್‍ಮಸ್. ದೇವಪುತ್ರ ಈ ಲೋಕದಲ್ಲಿ ಮುಗ್ಧ ಮಗುವಾಗಿ ಜನಿಸಿ, ಪಾಪವೊಂದನ್ನು ಬಿಟ್ಟು ಇನ್ನೆಲ್ಲದರಲ್ಲಿಯೂ ನಮ್ಮಂತೆಯೇ ಆಗಬಯಸಿದ ಯೇಸುಸ್ವಾಮಿ ಬಡವರಿಗೆ ಆಶಾಕಿರಣವಾಗಿ, ದುಃಖಿತರಿಗೆ ಸಾಂತ್ವನವಾಗಿ, ದೀನ ದಲಿತರ ಸಂಗಾತಿಯಾಗಿ, ನೊಂದವರ ಭರವಸೆಯಾಗಿ, ಬಹಿಷ್ಕೃತರ ಗೆಳೆಯನಾಗಿ ಬಂದರು.

ಕಳೆದೆರಡು ವರ್ಷಗಳಿಂದ ಇಡೀ ವಿಶ್ವವೇ ಕೊರೋನ ಸೋಂಕಿನ ಅಟ್ಟಹಾಸಕ್ಕೆ ನಲುಗಿಹೋಗಿದೆ. ಸಾವಿರಾರು ಜನರು ಈ ಸೋಂಕಿಗೆ ಒಳಗಾಗಿದ್ದಾರೆ. ಲಕ್ಷಾಂತರ ಕುಟುಂಬಗಳು ನಿರುದ್ಯೋಗ ಹಾಗೂ ಬಡತನಕ್ಕೆ ಬಲಿಯಾಗಿವೆ. ಬಸವಳಿದ ಈ ಲೋಕಕ್ಕೆ ಹೊಸ ಜೀವವನ್ನು ನೀಡುವ ಅಗತ್ಯವಿದೆ. ಕ್ರಿಸ್ತರ ಜನನದ ಕ್ರಿಸ್‍ಮಸ್ ಹಬ್ಬದ ಆಚರಣೆಯು ನಮ್ಮಲ್ಲಿ ಮಾನವೀಯತೆಯನ್ನು ಜೀವಂತಗೊಳಿಸಬೇಕು. ಮನುಷ್ಯನಿಗೆ ಮಾನವೀಯತೆಯು ಮರೀಚಿಕೆಯಾಗದೆ ಸ್ವಾತಂತ್ರ್ಯ, ಶಾಂತಿ, ಭಾವೈಕ್ಯತೆ, ಕ್ಷಮೆ, ಪ್ರೀತಿ, ಸಹನೆ, ಸಂಯಮ ಮತ್ತು ನೈತಿಕತೆಯನ್ನು ತನ್ನ ಉಸಿರಾಗಿಸಬೇಕಿದೆ.

ಕ್ರಿಸ್‍ಮಸ್ ಶಾಂತಿ-ಪ್ರೀತಿಯ ಉತ್ಸವ. ಈ ಉತ್ಸವವನ್ನು ಯೋಗ್ಯವಾಗಿ ಆಚರಿಸಲು ಶಕ್ತರಲ್ಲದ ಸಾವಿರಾರು ಜನರು ಮತ್ತು ಕುಟುಂಬಗಳು ನಮ್ಮ ನೆರೆಹೊರೆಯಲ್ಲಿವೆ. ಕ್ರಿಸ್‍ಮಸ್‍ನ ಭಾವವಾದ ಶಾಂತಿ, ಪ್ರೀತಿಯು ಹಂಚಿಕೊಳ್ಳುವುದರಲ್ಲಿ ಕಂಡುಬರಬೇಕು. ನಮ್ಮಲ್ಲಿ ಇರುವ ಸಂಪನ್ಮೂಲಗಳನ್ನು ಇಲ್ಲದವರೊಡನೆ ಕಿಂಚಿತ್ತಾದರೂ ಹಂಚಿಕೊಂಡರೆ ಕ್ರಿಸ್‍ಮಸ್‍ನ ಮೂಲ ಅರ್ಥವು ನಮಗೆ ಸ್ಪಷ್ಟವಾಗಬಹುದು. ‘ಶಾಂತಿ ದೇವನೊಲಿದ ಮನುಜರಿಗೆ’ ಎಂಬ ದೇವದೂತರ ಹಾಡು ನಮಗೆ ಅರ್ಥಪೂರ್ಣವಾಗಿ ಕೇಳಿಸಲಿ. ಈ ವರ್ಷದ ಕ್ರಿಸ್‍ಮಸ್ ನಮಗೆ ಸೋಂಕಿನ ಭೀತಿಯಿಂದ, ಅನಾರೋಗ್ಯದಿಂದ, ನಿರಾಶೆ-ದುಖಗಳಿಂದ ಬಿಡುಗಡೆಗೊಳಿಸಿ ಸ್ವರ್ಗದ ಶಾಂತಿ ಪ್ರೀತಿಯಿಂದ ನಮ್ಮನ್ನು ತುಂಬಲಿ. ಸಮಸ್ತ ಸಹೋದರ ಸಹೋದರಿಯರಿಗೆ ಕ್ರಿಸ್‍ಮಸ್ ಹಬ್ಬದ ಹಾರ್ದಿಕ ಶುಭಾಷಯಗಳನ್ನು ಕೋರುತ್ತೇನೆ ಎಂದು ಹೇಳಿದ್ದಾರೆ.

 

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

5 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

11 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

13 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

13 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

13 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

14 hours ago