Featured

ಉಡುಪಿ: ಕ್ರೈಸ್ತ ಪ್ರಾರ್ಥನಾ ಕೇಂದ್ರಕ್ಕೆ ಅಕ್ರಮ ದಾಳಿ ಪ್ರಕರಣ: ವಿ.ಹಿಂ.ಪ. ಬಜರಂಗದಳದ ಎಲ್ಲಾ ಕಾರ್ಯಕರ್ತರು ದೋಷ ಮುಕ್ತ – Vishwanews24

ಉಡುಪಿ: ಕ್ರೈಸ್ತ ಪ್ರಾರ್ಥನಾ ಕೇಂದ್ರಕ್ಕೆ ಅಕ್ರಮ ದಾಳಿ ಪ್ರಕರಣ: ವಿ.ಹಿಂ.ಪ. ಬಜರಂಗದಳದ ಎಲ್ಲಾ ಕಾರ್ಯಕರ್ತರು ದೋಷ ಮುಕ್ತ

ಉಡುಪಿ: ಕಾಪು ತಾಲೂಕಿನ ಮೂಡುಬೆಳ್ಳೆ ಸಮೀಪದ ಕಟ್ಟಿಂಗೇರಿ ಗ್ರಾಮದಲ್ಲಿ 9 ವರ್ಷದ ಹಿಂದೆ ನಡೆದಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿ.ಹಿಂ.ಪ.ಬಜರಂಗದಳದ ಎಲ್ಲ ಕಾರ್ಯಕರ್ತರನ್ನು ದೋಷ ಮುಕ್ತಗೊಳಿಸಿ ನ್ಯಾಯಾಲಯ ಆದೇಶಿಸಿದೆ.

2013ರ ರಾತ್ರಿ ವೇಳೆ ಕ್ರಿಶ್ಚಿಯನ್‌ ಪಂಗಡವೊಂದರ ಪ್ರಾರ್ಥನ ಕೇಂದ್ರಕ್ಕೆ ಶಿರ್ವ, ಸೂಡ, ಕಟ್ಟಿಂಗೇರಿ ಪರಿಸರದ ಗ್ರಾಮಗಳ ವಿ.ಹಿಂ.ಪ. ಮತ್ತು ಬಜರಂಗದಳದ ಕಾರ್ಯಕರ್ತರು ಅಕ್ರಮ ಪ್ರವೇಶ ಮಾಡಿ ಪ್ರಾರ್ಥನ ಕೇಂದ್ರಕ್ಕೆ ದಾಳಿ ಮಾಡಿ ಅಲ್ಲಿನ ಸೊತ್ತುಗಳನ್ನು ನಾಶಗೊಳಿಸಿದ್ದರು.

ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದರು ಎಂದು ಪ್ರಾರ್ಥನ ಕೇಂದ್ರದ ಪ್ರಮುಖರಾದ ರೋಶನ್‌ ರಾಜೇಶ್‌ ಲೋಬೋ ಅವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಸುಮಾರು 19 ಜನರ ಮೇಲೆ ದೋಷಾರೋಪಣ ಪತ್ರ ಸಲ್ಲಿಸಲಾಗಿತ್ತು.

ಉಡುಪಿಯ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದಲ್ಲಿ 18 ಸಾಕ್ಷಿಗಳ ತನಿಖೆ ಮಾಡಲಾಗಿತ್ತು. ಮಾರಕಾಸ್ತ್ರಗಳು, ಮೊಬೈಲ್‌, ಟೀ ಶರ್ಟ್‌ ಮತ್ತು ಇತರ 14 ವಸ್ತುಗಳನ್ನು ಗುರುತಿಸಲಾಗಿದ್ದು, ಸಾಕ್ಷಿ ವಿಚಾರಣೆ ಬಳಿಕ ಅಭಿಯೋಜನೆ ಮತ್ತು ರಕ್ಷಣಾ ವಕೀಲರ ವಾದವನ್ನು ಆಲಿಸಿದ ಮೂರನೇ ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿ ವಿನಾಯಕ ವಾಂಖಡೆಯವರು ಆರೋಪಿಗಳ ಮೇಲೆ ಆರೋಪಗಳನ್ನು ಗುರುತಿಸುವಲ್ಲಿ ಸಾಕ್ಷಿಗಳು ವಿಫ‌ಲರಾಗಿದ್ದಾರೆ ಹಾಗೂ ಈ ಪ್ರಕರಣ ಸಂಶಯಾತೀತವಾಗಿ ದೃಢೀಕರಿಸಲು ಅಭಿಯೋಜಕರು ವಿಫ‌ಲರಾಗಿದ್ದಾರೆ ಎಂದು ಡಿ.6ರಂದು ಎಲ್ಲ ಆರೋಪಿಗಳನ್ನು ದೋಷ ಮುಕ್ತಗೊಳಿಸಿ ತೀರ್ಪು ನೀಡಿದ್ದಾರೆ.

ಆರೋಪಿಗಳ ಪರವಾಗಿ ಉಡುಪಿಯ ಹಿರಿಯ ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ, ಇ. ಬಾಲಸುಬ್ರಹ್ಮಣ್ಯರಾವ್‌, ಬೈಲೂರು ರವೀಂದ್ರ ದೇವಾಡಿಗ, ನಿತೇಶ್‌ ಶೆಟ್ಟಿ ಮತ್ತು ನಿವೇದಿತಾ ಸುವರ್ಣ ವಾದಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

29 minutes ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 hours ago