Featured

ಉಡುಪಿ : ಕ್ಷಯ ರೋಗ ಮುಕ್ತ ಸಮಾಜ ನಿರ್ಮಾಣವಾಗಲಿ : ವನಿತಾ ಗುರುದತ್ -Vishwanews24

ಉಡುಪಿ : ಕ್ಷಯ ರೋಗ ಮುಕ್ತ ಸಮಾಜ ನಿರ್ಮಾಣವಾಗಲಿ : ವನಿತಾ ಗುರುದತ್ -Vishwanews24

ಉಡುಪಿ: ಕ್ಷಯ ರೋಗದ ಕ್ಷಣಗಳು ಕಂಡು ಬಂದಲ್ಲಿ ನಿರ್ಲಕ್ಷವಹಿಸದೆ ಕೂಡಲೇ ತಪಾಸಣೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯ ಬೇಕುಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣ ಘಟಕದ ವೈದ್ಯಕೀಯ ಅಧಿಕಾರಿ ಡಾ. ವನಿತಾ ಗುರುದತ್ ಹೇಳಿದರು.

ಅವರು ಇಂದು ನಗರದ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮತ್ತು ಧನ್ವಂತರಿ ನರ್ಸಿಂಗ್ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕ್ಷಯ ದಿನಾಚರಣಿ ಉದ್ಘಾಟಿಸಿ ಮಾತನಾಡಿದರು.

ಕ್ಷಯ ರೋಗವನ್ನು ಆರಂಭದಲ್ಲೇ ಗುರುತಿಸುವುದರೊಂದಿಗೆ ಸಮರ್ಪಕ ಹಾಗೂ ನಿರಂತರ ವೈದ್ಯಕೀಯ ಚಿಕಿತ್ಸೆಯನ್ನು ಪಡೆದರೆ ಈ ರೋಗದಿಂದ ಮುಕ್ತರಾಗಲು ಸಾಧ್ಯವಾಗುತ್ತದೆ ಎಂದ ಅವರು ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಈ ರೋಗಕ್ಕೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದರು.

ಸಾಮಾನ್ಯವಾಗಿ ಕ್ಷಯರೋಗದಿಂದ ಬಳಲುತ್ತಿರುವ ವ್ಯಕ್ತಿಯು ಕೆಮ್ಮಿದಾಗ, ಉಗುಳಿದಾಗ ಹೊರಬರುವ ಸೂಕ್ಮ್ಷ ದ್ರವÀಗಳ ತುಂತುರುಗಳ ಮೂಲಕ ವೈರಸ್ ರೋಗವು ಇತರ ವ್ಯಕ್ತಿಗಳ ದೇಹ ಸೇರಿದಾಗ ಅಂತಹ ವ್ಯಕ್ತಿಗಳು ಕ್ಷಯ ರೋಗಕ್ಕೆ ತುತ್ತಾಗುತ್ತಾರೆ ಎಂದರು.

ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಮಾರ್ಚ್ 24ರಂದು ವಿಶ್ವ ಕ್ಷಯ ರೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಕ್ಷಯ ರೋಗವು ಟ್ಯುಬರ್ಕ್ಯುಲೋಸಿಸ್ ಎಂಬ ಬ್ಯಾಕ್ಟೀರಿಯದಿಂದ ಹರಡುತ್ತದೆ ಎಂದರು

ಎರಡು ವಾರಗಳ ಕಾಲ ನಿರಂತರ ಕೆಮ್ಮು, ಜ್ವರ, ತೂಕ ಕಡಿಮೆಯಾಗುವುದು, ರಾತ್ರಿ ವೇಳೆ ಬೆವರುವುದು ಕ್ಷಯ ರೋಗದ ಲಕ್ಷಣಗಳಾಗಿವೆ ಎಂದ ಅವರು, ಈ ಲಕ್ಷಣ ಕಂಡ ಕೂಡಲೇ ಸಮೀಪದ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ್ ಶೆಟ್ಟಿ, ಪುರಾತನ ಕಾಲದಿಂದಲೂ ಪ್ರಚಲಿತದಲ್ಲಿರುವ ಕಾಯಿಲೆ ಎಂದರೆ ಟಿಬಿ, ಆ ಕಾಲದಲ್ಲಿ ಮನೆಯಲ್ಲೇ ಹಳ್ಳಿ ಮದ್ದನ್ನು ಮಾಡುತ್ತಿದ್ದರು ಆದರೆ ಈಗ ತಂತ್ರಜ್ಞಾನ ಬಹಳ ಮುಂದುವರೆದಿದೆ ತಕ್ಷಣದಲ್ಲೇ ಚಿಕಿತ್ಸೆ ದೊರೆಯುತ್ತದೆ. ಈ ಕುರಿತು ಜನರಿಗೆ ಅರಿವು ಮೂಡಿಸಬೇಕು, ನಮ್ಮಿಂದ ಒಂದು ಜೀವ ಉಳಿಸುವ ಪ್ರಯತ್ನ ಮಾಡಬೇಕು ಬೇರೆಯವರಿಗೆ ಸಹಾಯ ಮಾಡಿ ಬದುಕಿಗೆ ಸಾರ್ಥಕತೆ ಭಾವ ಮೂಡುವಂತೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಖಜಾಂಚಿ ಡಾ. ಅರವಿಂದ್ ನಾಯಕ್ ಅಮ್ಮುಂಜೆ, ಧನ್ವಂತರಿ ನರ್ಸಿಂಗ್ ಕಾಲೇಜಿನ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

ರೆಡ್ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ. ಅಶೋಕ್ ಕುಮಾರ್ ವೈ ಜಿ ಸ್ವಾಗತಿಸಿ, ಧನ್ವಂತರಿ ನರ್ಸಿಂಗ್ ಕಾಲೇಜಿನ ಉಪನ್ಯಾಸಕ ಶಿವಪ್ರಸಾದ್ ವಂದಿಸಿ, ರೆಡ್ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಕೆ. ಜಯರಾಮ್ ಆಚಾರ್ಯ ಸಾಲಿಗ್ರಾಮ ನಿರೂಪಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

4 hours ago